Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಮ್ಮ ಸೇನಾ ಪಡೆ ಗಸ್ತು ನಡೆಸುತ್ತಿದೆ:...

ನಮ್ಮ ಸೇನಾ ಪಡೆ ಗಸ್ತು ನಡೆಸುತ್ತಿದೆ: ಚೀನಾ

ಡೋಕಾ ಲಾ ಬಿಕ್ಕಟ್ಟು

ವಾರ್ತಾಭಾರತಿವಾರ್ತಾಭಾರತಿ7 Oct 2017 8:07 PM IST
share
ನಮ್ಮ ಸೇನಾ ಪಡೆ ಗಸ್ತು ನಡೆಸುತ್ತಿದೆ: ಚೀನಾ

ಬೀಜಿಂಗ್, ಅ. 2: ಭಾರತದೊಂದಿಗೆ ಇತ್ತೀಚೆಗೆ ಗಡಿಬಿಕ್ಕಟ್ಟು ಸಂಭವಿಸಿದ್ದ ಸ್ಥಳದ ಸಮೀಪ ಪೀಪಲ್ಸ್ ಲಿಬರೇಶನ್ ಆರ್ಮಿ ರಸ್ತೆ ವಿಸ್ತರಿಸುತ್ತಿರುವ ಬಗೆಗಿನ ಮಾಧ್ಯಮ ವರದಿ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಚೀನಾ, ದೇಶದ ಪ್ರಾದೇಶಿಕ ಹಕ್ಕುಗಳನ್ನು ರಕ್ಷಿಸಲು ಡೋಕಾ ಲಾ ವಲಯದಲ್ಲಿ ತನ್ನ ಸೇನಾ ಪಡೆ ಗಸ್ತು ನಡೆಸುತ್ತಿದೆ ಎಂದು ಹೇಳಿದೆ. ಡೋಕಾ ಲಾ ಇಂದಿಗೂ ಚೀನ ನಿಯಂತ್ರಣದಲ್ಲಿ ಇದೆ ಎಂದು ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

 ಪ್ರಸಕ್ತ ಗಡಿ ಒಪ್ಪಂದದಂತೆ ಪ್ರಾದೇಶಿಕ ಹಕ್ಕು ರಕ್ಷಿಸಲು ಡೋಕಾ ಲಾದಲ್ಲಿ ಚೀನಾ ಗಡಿ ರಕ್ಷಣಾ ಪಡೆ ಯಾವಾಗಲೂ ಗಸ್ತು ನಡೆಸುತ್ತಿದೆ ಎಂದು ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

ಡೋಕಾ ಲಾ ಯಾವತ್ತೂ ಚೀನಾದ ಒಂದು ಭಾಗವಾಗಿರುವುದರಿಂದ ಯಾವುದೇ ವಿವಾದ ಇಲ್ಲ. ಇದು ಯಾವಾಗಲೂ ಚೀನಾದ ಪರಿಣಾಮಕಾರಿ ಹಾಗೂ ಸಮಂಜಸ ಆಡಳಿತದಲ್ಲೇ ಇರುತ್ತದೆ ಎಂದು ಅದು ಹೇಳಿದೆ.

 ಡೋಕಾ ಲಾ ವಲಯದಲ್ಲಿ ಸಹಜ ಸ್ಥಿತಿ ಇದೆ. ಆಗಸ್ಟ್ 28ರಂದು ಸೇನಾ ಪಡೆಗಳನ್ನು ಹಿಂದೆ ತೆಗೆದ ಬಳಿಕ ಮುಖಾಮುಖಿ ಸ್ಥಳ ಹಾಗೂ ಅದರ ಸನಿಹದ ಸ್ಥಳಗಳಲ್ಲಿ ಯಾವುದೇ ಹೊಸ ಬದಲಾವಣೆ ಸಂಭವಿಸಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯಿಸಿ ಈ ಹೇಳಿಕೆ ಟ್ವೀಟ್ ಮಾಡಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ ಬಗೆಗಿನ ಅಭಿಪ್ರಾಯ ತಪ್ಪು ಎಂದು ಅವರು ಹೇಳಿದ್ದಾರೆ.

ಭಾರತ ಹಾಗೂ ಚೀನಾದ ಸೇನೆಗಳು 73 ದಿನಗಳ ಕಾಲ ಮುಖಾಮುಖಿಯಾದ ಸ್ಥಳದಿಂದ 12 ಕಿ.ಮೀ. ದೂರದಲ್ಲಿ ಪಿಎಲ್‌ಐ ರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸಿದೆ ಎಂದು ಭಾರತೀಯ ಸೇನೆ ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವರ ವೈಮಾನಿಕ ಸಮೀಕ್ಷೆ

ಆಗಸ್ಟ್ 28ರಂದು ಭಾರತ ಹಾಗೂ ಚೀನ ಸೇನೆ ಹಿಂದೆಗೆದ ಬಳಿಕ ಡೋಕಾ ಲಾದಲ್ಲಿ ಯಥಾಸ್ಥಿತಿ ಇದೆ ಎಂದು ಕೇಂದ್ರ ಸರಕಾರ ಹೇಳಿದ ದಿನದ ಬಳಿಕ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಡೋಕಾ ಲಾ-ನಾಥುಲಾ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಭಾರತ-ಚೀನಾ ಸೇನಾ ಪಡೆ ನಡುವೆ ಬಿಕ್ಕಟ್ಟು ಉಂಟಾದ ಡೋಕಾ ಲಾ ಹಾಗೂ ಸಮೀಪದ ಪ್ರದೇಶಗಳಿಂದ ಉಭಯ ರಾಷ್ಟ್ರಗಳು ಸೇನೆ ಹಿಂದೆಗೆದ ಬಳಿಕ ಯಾವುದೇ ಹೊಸ ಬೆಳವಣಿಗೆ ಸಂಭವಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಹೇಳಿಕೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X