ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.7: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ- ಮನೋಜ್ ಕುಮಾರ್ ಮೀನಾ, ಕೋಲಾರ ಜಿಲ್ಲಾಧಿಕಾರಿ-ಸತ್ಯವತಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾನಿರ್ದೇಶಕ-ಡಾ.ಕೆ.ವಿ.ತ್ರಿಲೋಕ್ಚಂದ್ರ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಯನ್ನಾಗಿ ಎಂ.ಕೆ.ಶ್ರೀರಂಗಯ್ಯರನ್ನು ವರ್ಗಾವಣೆ ಮಾಡಲಾಗಿದೆ.
Next Story





