Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರ ವೇಳೆಗೆ ಹಜ್ ಸಬ್ಸಿಡಿಯ ರದ್ದತಿಗೆ...

2018ರ ವೇಳೆಗೆ ಹಜ್ ಸಬ್ಸಿಡಿಯ ರದ್ದತಿಗೆ ಕರಡು ಪ್ರಸ್ತಾವನೆ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ7 Oct 2017 11:02 PM IST
share
2018ರ ವೇಳೆಗೆ ಹಜ್ ಸಬ್ಸಿಡಿಯ ರದ್ದತಿಗೆ ಕರಡು ಪ್ರಸ್ತಾವನೆ ಸಿದ್ಧ

ಹೊಸದಿಲ್ಲಿ,ಅ.7: ಮಾಜಿ ಕಾರ್ಯದರ್ಶಿ ಅಫ್ಝಲ್ ಅಮಾನುಲ್ಲಾ ಅವರ ಅಧ್ಯಕ್ಷತೆಯ ಸಮಿತಿಯು ಹಜ್ ನೀತಿ 2018-22ರ ಕರಡು ಪ್ರಸ್ತಾವನೆಯನ್ನು ಶನಿವಾರ ಸರಕಾರಕ್ಕೆ ಸಲ್ಲಿಸಿದ್ದು, ಹಜ್ ಯಾತ್ರಿಗಳಿಗೆ ಸಬ್ಸಿಡಿ ರದ್ದತಿ ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರು ಕನಿಷ್ಠ ನಾಲ್ವರ ಗುಂಪಾಗಿ ರಕ್ತಸಂಬಂಧಿ ಪುರುಷನ ಅನುಪಸ್ಥಿತಿಯಲ್ಲಿ ಹಜ್‌ಗೆ ತೆರಳಲು ಅನುಮತಿ ಇವು ಈ ಪ್ರಸ್ತಾವನೆಯ ಕೆಲವು ಮುಖ್ಯಾಂಶಗಳಲ್ಲಿ ಸೇರಿವೆ.

ಹಜ್ ಯಾತ್ರಿಗಳು ಸೌದಿ ಅರೇಬಿಯಾದ ವಿಮಾನವನ್ನು ಹತ್ತಲು ಅವಕಾಶವಿರುವ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು ಈಗಿನ 21ರಿಂದ 9ಕ್ಕೆ ತಗ್ಗಿಸುವಂತೆಯೂ ಸಮಿತಿಯು ಶಿಫಾರಸು ಮಾಡಿದೆ.

ಸಮಿತಿಯು ಮುಂಬೈನಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ ಅಬ್ಬಾಸ್ ನಕ್ವಿ ಅವರಿಗೆ ತನ್ನ ಪ್ರಸ್ತಾವನೆಯನ್ನು ಸಲ್ಲಿಸಿತು.

2018ರ ಹಜ್ ಯಾತ್ರೆಯು ನೂತನ ಹಜ್ ನೀತಿಗನುಗುಣವಾಗಿ ನಡೆಯಲಿದೆ. ಪ್ರಸ್ತಾವಿತ ಸೌಲಭ್ಯಗಳನ್ನು ಗಮನಿಸಿದರೆ ಇದೊಂದು ಉತ್ತಮ ನೀತಿಯಾಗಿದೆ. ಇದು ಪಾರದರ್ಶಕ ಮತ್ತು ಜನಸ್ನೇಹಿ ನೀತಿಯಾಗಲಿದೆ. ಅದು ಯಾತ್ರಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಲಿದೆ ಎಂದು ನಕ್ವಿ ಹೇಳಿದರು.

2022ರ ವೇಳೆಗೆ ಹಜ್ ಸಬ್ಸಿಡಿಯನ್ನು ಹಂತಹಂತವಾಗಿ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿ 2012ರಲ್ಲಿ ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದ್ದ ಹಿನ್ನೆಲೆಯಲ್ಲಿ ನೂತನ ನೀತಿಯನ್ನು ರೂಪಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿದವು.

ಸಬ್ಸಿಡಿಯನ್ನು ರದ್ದುಗೊಳಿಸುವುದು ನೀತಿಯ ಮುಖ್ಯಾಂಶವಾಗಿದೆ. ಅಲ್ಲದೆ 45 ವರ್ಷಕ್ಕೂ ಮೇಲಿನ ಮಹಿಳೆಯರು ಕನಿಷ್ಠ ನಾಲ್ವರ ಗುಂಪಾಗಿ ಪುರುಷ ಮೆಹ್ರಾಂ ನೆರವಿಲ್ಲದೆ ಯಾತ್ರೆಯನ್ನು ಕೈಗೊಳ್ಳಲು ಅನುಮತಿ ನೀಡುವುದು ಪ್ರಸ್ತಾವಿತ ಇನ್ನೊಂದು ಪ್ರಮುಖ ಸುಧಾರಣೆಯಾಗಿದೆ. ಈವರೆಗೆ ಮಹಿಳೆಯರು ಪುರುಷ ಮೆಹ್ರಾಂ ಅನುಪಸ್ಥಿತಿಯಲ್ಲಿ ಹಜ್ ಯಾತ್ರೆ ಕೈಗೊಳ್ಳಲು ಅವಕಾಶವಿರಲಿಲ್ಲ, ಆದರೆ 45 ವರ್ಷಕ್ಕೂ ಕಡಿಮೆ ವಯೋಮಾನದ ಮಹಿಳೆಯರಿಗೆ ಈ ನಿರ್ಬಂಧ ಮುಂದುವರಿಯುತ್ತದೆ ಎಂದು ಮೂಲಗಳು ತಿಳಿಸಿದವು.

ಸಬ್ಸಿಡಿ ನಿಧಿಯನ್ನು ಮುಸ್ಲಿಮರ ಶೈಕ್ಷಣಿಕ ಸಬಲೀಕರಣ ಮತ್ತು ಅಭಿವೃದ್ಧಿಗಾಗಿ ಬಳಸಲಾಗುವುದು ಎಂದು ಅವು ಹೇಳಿದವು.

 ಹಡಗುಗಳ ಮೂಲಕ ಹಜ್ ಯಾತ್ರಿಗಳಿಗೆ ಪ್ರಯಾಣ ಸೌಲಭ್ಯ ಕಲ್ಪಿಸುವುದನ್ನೂ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X