Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮನ್ವಯ ಕೊರತೆಯಿಂದ ಸ್ಮಾರ್ಟ್ ಸಿಟಿ...

ಸಮನ್ವಯ ಕೊರತೆಯಿಂದ ಸ್ಮಾರ್ಟ್ ಸಿಟಿ ಯೋಜನೆ ವಿಳಂಬ: ಶಾಲಿನಿ ರಜಿನೀಶ್

ವಾರ್ತಾಭಾರತಿವಾರ್ತಾಭಾರತಿ8 Oct 2017 10:07 PM IST
share
ಸಮನ್ವಯ ಕೊರತೆಯಿಂದ ಸ್ಮಾರ್ಟ್ ಸಿಟಿ ಯೋಜನೆ ವಿಳಂಬ: ಶಾಲಿನಿ ರಜಿನೀಶ್

ತುಮಕೂರು, ಅ.7: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ವಿಳಂಬವಾಗುತ್ತಿರುವುದಕ್ಕೆ ಅಧಿಕಾರಿಗಳ ಸಮನ್ವಯತೆಯೇ ಮುಖ್ಯ ಕಾರಣವೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬೇಸರ ವ್ಯಕ್ತಪಡಿಸಿದ್ದಾರೆ. 

ಪಾಲಿಕೆಯ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿದ ಅವರು, ಪಾಲಿಕೆ, ಬೆಸ್ಕಾಂ, ಒಳಚರಂಡಿ ಮಂಡಳಿ, ಕೆಎಸ್ಸಾರ್ಟಿಸಿ, ಟೂಡಾ ಹಾಗೂ ಸ್ಮಾರ್ಟ್ ಸಿಟಿ ಯೋಜನಾ ತಂಡದ ಅಧಿಕಾರಿಗಳು ಪರಸ್ಪರ ಸಹಕಾರ ಹಾಗೂ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ತುಮಕೂರು ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತದೆ ಎಂದರು. 

ಸಭೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುವ ಹಲವಾರು ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಅವರು, ಅ.23ರಂದು ಮಂಡಳಿ ಸಭೆ ನಡೆಯಲಿದ್ದು, ಇನ್ನೊಂದು ವಾರದೊಳಗೆ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದ ಎಲ್ಲಾ ಕ್ರಿಯಾ ಯೋಜನೆಗಳ ಮಾಹಿತಿ ನನ್ನ ಕೈಸೇರಬೇಕು ಎಂದು ಅದಿಕಾರಿಗಳಿಗೆ ಸೂಚಿಸಿದರು.

ಉಳಿದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಕಟ್ಟಡಗಳ ಮೇಲೆ ಸೋಲಾರ್ ಪ್ಯಾನಲ್ ವ್ಯವಸ್ಥೆ, ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸ್ಮಾರ್ಟ್ ಕೊಠಡಿ, ಉತ್ತಮ ಸಾರಿಗೆ ವ್ಯವಸ್ಥೆ, ಪಬ್ಲಿಕ್ ಬೈಸಿಕಲ್ ಶೇರಿಂಗ್ ಮತ್ತಿತರ ಯೋಜನೆಗಳಿಗೆ ಕೂಡಲೇ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಅವರು ತಾಕೀತು ಮಾಡಿದರು. 

4 ಸ್ಮಾರ್ಟ್ ರಸ್ತೆ ನಿರ್ಮಾಣ: ನಗರದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಜೆಸಿ ರಸ್ತೆ ಸೇರಿ ಒಟ್ಟು 4 ರಸ್ತೆಗಳನ್ನು ಸ್ಮಾರ್ಟ್ ರಸ್ತೆಯನ್ನಾಗಿ ಮಾಡುವ ನಿರ್ಮಾಣ ಕಾರ್ಯದ ಪ್ರಗತಿಯಲ್ಲಿ ತಡವಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಿಪಡಿಸಿದ ಅವರು, ಸರ್ವೇ ಕಾರ್ಯ ಮುಗಿದರೂ ಇನ್ನೂ ಒತ್ತುವರಿ ತೆರವಿನ ಕೆಲಸ ಮುಗಿದಿಲ್ಲ. ಕೂಡಲೇ ಸ್ಮಾರ್ಟ್ ರಸ್ತೆಗೆ ಸಂಬಂಧಿಸಿದಂತೆ ಒತ್ತುವರಿ ತೆರವನ್ನು ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಹರ್ಬಲ್ ಗಾರ್ಡನ್ ಗೆ ಆದ್ಯತೆ: ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಬೇಕೆಂದಿರುವ ನಗರದ 15 ಸ್ಮಾರ್ಟ್ ಪಾರ್ಕ್‍ಗಳಲ್ಲಿ ಹರ್ಬಲ್ ಗಾರ್ಡನ್‍ಗೆ ಆದ್ಯತೆ ನೀಡಬೇಕು. ನಾವಿನ್ಯತೆಯಿಂದ ಕೂಡಿದ ಕಲಾತ್ಮಕವಾಗಿರುವ ಪಾರ್ಕ್‍ಗಳನ್ನು ಉತ್ತಮ ಬೆಳಕಿನ ವ್ಯವಸ್ಥೆಯೊಂದಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಪಾರ್ಕ್ ಇದಾಗಬೇಕೆಂದರಲ್ಲದೆ ಪಾರ್ಕ್ ನಿರ್ಮಾಣಕ್ಕೆ ಎಲ್ಲಾ ಪಾಲಿಕೆ ಸದಸ್ಯರ ಸಹಮತದೊಂದಿಗೆ ಸಲಹೆ ಅಭಿಪ್ರಾಯಗಳನ್ನು ಪಡೆದು ಅನುಮೋದನೆ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

 ಗ್ಲಾಸ್‍ ಹೌಸ್ ಬಳಕೆಗೆ ಸೂಚನೆ: ಕೋಟ್ಯಾಂತರ ರೂ.ಖರ್ಚು ಮಾಡಿ ನಗರದಲ್ಲಿ ನಿರ್ಮಿಸಿರುವ ಗ್ಲಾಸ್‍ಹೌಸ್ ಅನ್ನು ಮದುವೆ, ಸಮಾರಂಭ, ವಸ್ತುಪ್ರದರ್ಶನಗಳಂತಹ ಕಾರ್ಯಕ್ರಮಗಳಿಗೆ ಬಾಡಿಗೆ ಆಧಾರದ ಮೇಲೆ ನೀಡಿ ಸರಕಾರಕ್ಕೆ ಆದಾಯ ಬರುವಂತೆ ಕ್ರಮ ಕೈಗೊಳ್ಳಿ. ಇದಕ್ಕಾಗಿ ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಿ ಹೆಚ್ಚಿನ ಪ್ರಚಾರ ನೀಡಬೇಕೆಂದು ತಿಳಿಸಿದರು. 

ಅಮಾನಿಕೆರೆ ಉದ್ಯಾನದ ಅಭಿವೃದ್ಧಿ: ಅಮಾನಿಕೆರೆ ಉದ್ಯಾನವನದ ಅಭಿವೃದ್ಧಿಯಲ್ಲಿ ಅರಣ್ಯೀಕರಣ, ನೀರು ಸಂರಕ್ಷಣಾ ವ್ಯವಸ್ಥೆ, ಎಟಿಎಂ ಹಾಗೂ ತುಮಕೂರು ಒನ್ ಕೇಂದ್ರ, ಇ-ಲೈಬ್ರರಿ, ಶೌಚಾಲಯ, ಕೆಫೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರಬೇಕು. ಕುರಿಪಾಳ್ಯದಲ್ಲಿ ದಿಬ್ಬೂರು ಮಾದರಿಯಲ್ಲಿ ವಸತಿಗಳನ್ನು ನಿರ್ಮಾಣ, ಕೆಎಸ್ಸಾರ್ಟಿಸಿ ಬಸ್‍ನಿಲ್ದಾಣದ ಪುನರ್ ಅಭಿವೃದ್ಧಿಗೆ ಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ರಾಜಿಯಾಗಲು ಎಪಿಎಂಸಿ ಮತ್ತು ಪಾಲಿಕೆಗೆ ಸೂಚನೆ: ಎಪಿಎಂಸಿ ಹಾಗೂ ಪಾಲಿಕೆ ನಡುವಿರುವ ಬಾಳನಕಟ್ಟೆ ಪ್ರದೇಶದ ಹೂವಿನ ಮಾರುಕಟ್ಟೆಯ ನಿವೇಶನ ವ್ಯಾಜ್ಯವನ್ನು ಅಧಿಕಾರಿಗಳು ಚರ್ಚಿಸಿ ಜಂಟಿಯಾಗಿ ರಾಜಿ ಮಾಡಿಕೊಳ್ಳಬೇಕು. ಕೋರ್ಟ್‍ನಲ್ಲಿರುವ ಪ್ರಕರಣವನ್ನು ಹಿಂಪಡೆದು ಜಿಲ್ಲಾಧಿಕಾರಿಗಳ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕು.ಇಲ್ಲದಿದ್ದರೆ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಳ್ಳಲು ವಿಳಂಬವಾಗುತ್ತದೆ ಎಂದರು. 

ಸಭೆಯಲ್ಲಿ ಸ್ಮಾರ್ಟ್ ಸಿಟಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ್, ಪಾಲಿಕೆ ಆಯುಕ್ತ ಮಂಜುನಾಥ ಸ್ವಾಮಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X