Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಕೊಲಂಬಿಯಾ ವಿರುದ್ಧ...

ಭಾರತಕ್ಕೆ ಕೊಲಂಬಿಯಾ ವಿರುದ್ಧ ‘ಅಗ್ನಿಪರೀಕ್ಷೆ’

ವಾರ್ತಾಭಾರತಿವಾರ್ತಾಭಾರತಿ8 Oct 2017 11:41 PM IST
share
ಭಾರತಕ್ಕೆ ಕೊಲಂಬಿಯಾ ವಿರುದ್ಧ ‘ಅಗ್ನಿಪರೀಕ್ಷೆ’

ಹೊಸದಿಲ್ಲಿ, ಅ.8: ಚೊಚ್ಚಲ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಸೋತಿರುವ ಭಾರತದ ಕಿರಿಯರ ಫುಟ್ಬಾಲ್ ತಂಡ ಸೋಮವಾರ ಮತ್ತೊಂದು ಬಲಿಷ್ಠ ತಂಡ ಕೊಲಂಬಿಯಾ ವಿರುದ್ಧ ಕಠಿಣ ಸವಾಲು ಎದುರಿಸಲಿದೆ.

ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ನಡೆದಿದ್ದ ಅಮೆರಿಕ ವಿರುದ್ಧದ ತನ್ನ ಮೊದಲ ಗ್ರೂಪ್ ಪಂದ್ಯದಲ್ಲಿ ಭಾರತ 3-0 ಅಂತರದಿಂದ ಸೋತಿತ್ತು. ಭಾರತ ಶಕ್ತಿಮೀರಿ ಪ್ರಯತ್ನಿಸಿದರೂ ಅಮೆರಿಕದ ವಿರುದ್ಧ ಕೌಶಲ್ಯದ ಪ್ರದರ್ಶನದ ಕೊರತೆ ಎದುರಿಸಿತು. ಚೊಚ್ಚಲ ಪಂದ್ಯದಲ್ಲೇ ಉತ್ತರ ಕೊರಿಯಾ ವಿರುದ್ಧ ಜಯಭೇರಿ ಬಾರಿಸಿರುವ ಆಫ್ರಿಕದ ನೈಜರ್ ತಂಡ ಭಾರತಕ್ಕೆ ಸ್ಫೂರ್ತಿಯಾಗಬೇಕಾಗಿದೆ.

‘‘ಕೊಲಂಬಿಯಾ ಬಲಿಷ್ಠ ಎದುರಾಳಿ. ನಾವು ನಮ್ಮ ಮುಂದಿರುವ ಗುರಿಯತ್ತ ಗಮನ ನೀಡುವೆವು. ಕೊಲಂಬಿಯಾ ವಿರುದ್ಧ ಕಠಿಣಸವಾಲಿಗೆ ನಮ್ಮ ತಂಡ ಸಜ್ಜಾಗಿದೆ’’ಎಂದು ಭಾರತದ ಕೋಚ್ ಲೂಯಿಸ್ ನಾರ್ಟನ್ ಮಾಟೊಸ್ ಹೇಳಿದ್ದಾರೆ.

ಸಿಕ್ಕಿಂನ ಕೋಮಲ್ ಥಟಾಲ್ ಮೊದಲ ಪಂದ್ಯದಲ್ಲಿ ಗಮನ ಸೆಳೆದಿದ್ದರು. ಆದರೆ, ದ್ವಿತೀಯಾರ್ಧದಲ್ಲಿ ಗೋಲು ಬಾರಿಸುವ ಅವಕಾಶ ಕೈಚೆಲ್ಲಿದ್ದರು. ಕೋಮಲ್ ಜೊತೆಗಾರ ಅನಿಕೇತ್ ಜಾಧವ್ ಉತ್ತಮ ಪ್ರದರ್ಶನ ನೀಡಿದ್ದರು. ಡಿಫೆಂಡರ್‌ಗಳಾದ ಅನ್ವರ್ ಅಲಿ ಹಾಗೂ ಜಿತೇಂದ್ರ ಸಿಂಗ್ ಅಮೆರಿಕಕ್ಕೆ ಒತ್ತಡ ಹೇರಲು ಯತ್ನಿಸಿದ್ದರು. ಗೋಲ್‌ಕೀಪರ್ ಧೀರಜ್ ಸಿಂಗ್ ಅಮೆರಿಕಕ್ಕೆ ಕೆಲವು ಗೋಲು ನಿರಾಕರಿಸಿ ಭಾರತ ದೊಡ್ಡ ಅಂತರದಿಂದ ಸೋಲುವುದನ್ನು ತಪ್ಪಿಸಿದ್ದರು. ತನ್ನ ಮೊದಲ ಪಂದ್ಯದಲ್ಲಿ ಘಾನಾ ವಿರುದ್ಧ ಸೋತಿರುವ ಕೊಲಂಬಿಯಾ ಈ ತನಕ 5 ವಿಶ್ವಕಪ್ ಟೂರ್ನಿಯನ್ನು ಆಡಿದೆ. 2 ಬಾರಿ ಮೂರನೆ ಸ್ಥಾನ ಪಡೆದಿದೆ.

 ಪರಾಗ್ವೆಗೆ ಗೆಲುವಿನ ಓಟ ಮುಂದುವರಿಸುವ ಚಿತ್ತ: ವಿಶ್ವಕಪ್‌ನ ‘ಬಿ’ ಗುಂಪಿನ ಪಂದ್ಯದಲ್ಲಿ ಸೋಮವಾರ ನ್ಯೂಝಿಲೆಂಡ್‌ನ್ನು ಎದುರಿಸಲಿರುವ ಪರಾಗ್ವೆ ತಂಡ ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಕಳೆದ ವರ್ಷದ ವಿಶ್ವಕಪ್‌ನ ರನ್ನರ್ಸ್-ಅಪ್ ಮಾಲಿ ವಿರುದ್ಧ ಆಕ್ರಮಣಕಾರಿ ಶೈಲಿಯಲ್ಲಿ ಆಡಿದ್ದ ಪರಾಗ್ವೆ 3-2 ಅಂತರದಿಂದ ಜಯ ಸಾಧಿಸಿತ್ತು. ಪರಾಗ್ವೆಗೆ ಲಿಯೊನಾರ್ಡೊ ಸ್ಯಾಂಚೆಝ್ ಫಾರ್ಮ್ ಅತ್ಯಂತ ನಿರ್ಣಾಯಕವಾಗಿದೆ. ಮಾಲಿ ವಿರುದ್ಧ ದ್ವಿತೀಯಾರ್ಧದಲ್ಲಿ ಸತತ ಗೋಲುಗಳನ್ನು ಬಿಟ್ಟುಕೊಟ್ಟಿದ್ದ ಪರಾಗ್ವೆಯ ಡಿಫೆನ್ಸ್ ದುರ್ಬಲವಾಗಿ ಕಂಡುಬಂದಿತ್ತು. ಉತ್ತಮ ಸ್ಟೈಕರ್‌ಗಳನ್ನು ಹೊಂದಿರುವ ಕಿವೀಸ್ ವಿರುದ್ಧ ಪರಾಗ್ವೆಯ ಡಿಫೆನ್ಸ್ ವಿಭಾಗ ಬಲಿಷ್ಠವಾಗಬೇಕಾಗಿದೆ. ಪರಾಗ್ವೆ 2001 ಹಾಗೂ 2015ರ ವಿಶ್ವಕಪ್‌ನಲ್ಲಿ ಗ್ರೂಪ್ ಹಂತ ದಾಟಲು ವಿಫಲವಾಗಿದ್ದ ಪರಾಗ್ವೆ ತಂಡ ಕಿವೀಸ್‌ನ್ನು ಮಣಿಸಿ 17 ವರ್ಷಗಳ ಬಳಿಕ ನಾಕೌಟ್‌ಹಂತಕ್ಕೇರುವ ವಿಶ್ವಾಸದಲ್ಲಿದೆ.

ಟರ್ಕಿ ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮಾಲಿ: 2015ರ ವಿಶ್ವಕಪ್‌ನಲ್ಲಿ 2ನೆ ಸ್ಥಾನ ಪಡೆದಿರುವ ಮಾಲಿ ತಂಡ ಸೋಮವಾರ ನಡೆಯಲಿರುವ ಬಿ ಗುಂಪಿನ ಪಂದ್ಯದಲ್ಲಿ ಟರ್ಕಿಯನ್ನು ಎದುರಿಸಲಿದೆ. ಪರಾಗ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಸೋತಿರುವ ಮಾಲಿ ತಂಡ ಟರ್ಕಿ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿದೆ. ಪರಾಗ್ವೆ ವಿರುದ್ಧ ಆರಂಭದಲ್ಲಿ 2 ಗೋಲುಬಿಟ್ಟುಕೊಟ್ಟಿದ್ದ ಮಾಲಿ ತಂಡ ಸತತ 2 ಗೋಲು ಬಾರಿಸಿ 2-2 ರಿಂದ ಸಮಬಲ ಸಾಧಿಸಿತ್ತು. ಅಂತಿಮವಾಗಿ ಪರಾಗ್ವೆ 3-2 ಅಂತರದ ಜಯ ಸಾಧಿಸಿತ್ತು. ಟರ್ಕಿ ತಂಡ ನ್ಯೂಝಿಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ 1-1 ರಿಂದ ಡ್ರಾ ಸಾಧಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X