Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಜನಪ್ರಿಯ ಧಾಟಿಯ ಅಪರಾಧ ಬರಹಗಳು

ಜನಪ್ರಿಯ ಧಾಟಿಯ ಅಪರಾಧ ಬರಹಗಳು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ9 Oct 2017 12:05 AM IST
share
ಜನಪ್ರಿಯ ಧಾಟಿಯ ಅಪರಾಧ ಬರಹಗಳು

ಅಪರಾಧ ಜಗತ್ತಿನ ಬರಹಗಳಿಗೆ ಅದರದೇ ಆದ ಜನಪ್ರಿಯ ಓದುಗ ಬಳಗವೊಂದಿದೆ. ಅಪರಾಧ ಜಗತ್ತನ್ನು ಬರೆಯುವ ಮೂಲಕವೇ ಖ್ಯಾತರಾದ ಪತ್ರಕರ್ತರು, ಲೇಖಕರು ನಮ್ಮ ನಡುವೆ ಇದ್ದಾರೆ. ಇಷ್ಟಕ್ಕೂ ಅಪರಾಧ ಜಗತ್ತಿನ ಬಗ್ಗೆ ಬರೆಯುವುದು ಸುಲಭ ಸಂಗತಿಯೇನೂ ಅಲ್ಲ. ನಗರ ಬದುಕಿನ ನರನಾಡಿಗಳನ್ನು ಅರ್ಥ ಮಾಡಿಕೊಂಡವರಿಗೆ ಮಾತ್ರ ಈ ಅಪರಾಧ ಜಗತ್ತು ಹೇಗೆ ನಮ್ಮ ನಗರವನ್ನು ಅನಿವಾರ್ಯ ಎನ್ನುವ ರೀತಿಯಲ್ಲಿ ಬೆಸೆದಿದೆ ಎನ್ನುವುದು ಮನವರಿಕೆಯಾಗಬಹುದು. ಮುಂಬೈಯ ಅಪರಾಧ ಜಗತ್ತನ್ನು ಅಧ್ಯಯನ ಮಾಡುವುದೆಂದರೆ, ಮುಂಬೈ ಶಹರದ ಇತಿಹಾಸವನ್ನು ಅಧ್ಯಯನ ಮಾಡಿದಂತೆಯೇ ಸರಿ. ಅಭಿವೃದ್ಧಿಯ ಜೊತೆ ಜೊತೆಗೇ ಬೆಳೆದ ಈ ಅಪರಾಧ ಜಗತ್ತು ಇದೀಗ ಹೇಗೆ ಇಡೀ ವ್ಯವಸ್ಥೆಯನ್ನು ಕಂಡೂ ಕಾಣದಂತೆ ನಿಯಂತ್ರಿಸುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. ರಾಜಕೀಯ ಮತ್ತು ಅಪರಾಧ ಜಗತ್ತು ಪರಸ್ಪರ ಸಯಾಮಿಯ ರೂಪ ತಳೆದಿದೆ. ಇಂತಹ ಸಂದರ್ಭದಲ್ಲಿ, ಅಪರಾಧ ಜಗತ್ತನ್ನು ಶಾಸ್ತ್ರೀಯ ನೆಲೆಯಲ್ಲಿ ಅಧ್ಯಯನ ಮಾಡುವ ಅಗತ್ಯ ಹಿಂದೆಂದಿಗಿಂತ ಹೆಚ್ಚಿದೆ. ಇದೇ ಸಂದರ್ಭದಲ್ಲಿ ಮುಂಬೈಯಲ್ಲಿರುವ ಹಲವು ಕನ್ನಡ ಬರಹಗಾರರು ತಮ್ಮ ತಮ್ಮ ಮಿತಿಯಲ್ಲಿ ಈ ಅಪರಾಧ ಜಗತ್ತನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಕೆಲವರು ಅದನ್ನು ರೋಚಕವಾಗಿ ನಿರೂಪಿಸಿದರೆ, ಕೆಲವರು ಅದನ್ನು ವಿಶ್ಲೇಶನಾತ್ಮಕವಾಗಿಬರೆಯಲು ಪ್ರಯತ್ನಿಸಿದ್ದಾರೆ. ಅಂತಹ ಪ್ರಯತ್ನಗಳಲ್ಲಿ ಶ್ರೀನಿವಾಸ ಜೋಕಟ್ಟೆ ಅವರು ಬರೆದಿರುವ ‘ಒತ್ತಿ ಬರುವ ಕತ್ತಲ ದೊರೆಗಳು’ ಒಂದು.
ಮುಂಬೈಯಲ್ಲಿ ಬಹುಸಮಯದಿಂದ ಬದುಕುತ್ತಿರುವ ಜೋಕಟ್ಟೆ, ಅಲ್ಲಿನ ಅಪರಾಧ ಬೆಳವಣಿಗೆಗಳನ್ನು ಬೇರೆ ಬೇರೆ ಮಾಧ್ಯಮಗಳ ಮೂಲಕ ತಮ್ಮದಾಗಿಸಿಕೊಂಡವರು. ಈ ಕೃತಿಯಲ್ಲಿ ಕೇವಲ ಮುಂಬೈಗಷ್ಟೇ ಸೀಮಿತವಾಗದೆ, ದೇಶದ ಅಪರಾಧ ಜಗತ್ತಿನ ಬೇರೆ ಬೇರೆ ನೆಲೆಗಳನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಭೂಗತ ಜಗತ್ತಿನ ಗ್ಲಾಮರ್, ನಕ್ಸಲೈಟ್ ಕ್ರಾಂತಿಯ ಉಗ ಮಸ್ಥಾನ, ಅಕ್ರಮ ಗಡಿ ಪ್ರವೇಶ, ಅಫೀಮು ಅಮಲು, ಇಸ್ಲಾಮಿಕ್ ಸ್ಟೇಟ್, ಚೋರ್ ಬಜಾರ್, ಎನ್‌ಕೌಂಟರ್...ಹೀಗೆ ಅವರು ಇಲ್ಲಿ ಮುಟ್ಟದ ವಿಷಯಗಳಿಲ್ಲ. ಎಲ್ಲವೂ ಜಗತ್ತನ್ನು ಕಾಡುತ್ತಿರುವ ಸಂಗತಿಗಳೇ ಆಗಿವೆ. ಆದರೆ ಹೆಚ್ಚಿನ ಲೇಖನಗಳು ವಿಶ್ಲೇಷಣಾತ್ಮಕ ದಾಟಿಯಲ್ಲಿರದೆ, ವಿವರಗಳನ್ನು ಹೊಂದಿರುವುದರಿಂದ ಸಮಸ್ಯೆಯ ಮೂಲವನ್ನು ಅದು ತಲುಪುವುದಿಲ್ಲ. ಬಹುತೇಕ ಲೇಖನಗಳು ಮಾಧ್ಯಮಗಳ ವರದಿಗಳನ್ನು ಆಧರಿಸಿರುವುದರಿಂದ, ಅಪರಾಧವನ್ನು ಜನಪ್ರಿಯ ಕಣ್ಣಿನಲ್ಲೇ ಅವರು ನೋಡಿದ್ದಾರೆ ಎಂದು ಭಾವಿಸಬೇಕಾಗುತ್ತದೆ. ಅದಕ್ಕಿರುವ ಬೇರೆ ಬೇರೆ ಸಾಮಾಜಿಕ, ಆರ್ಥಿಕ, ಧಾರ್ಮಿಕ ಆಯಾಮಗಳನ್ನಿಟ್ಟು ಅವರು ಬರೆಯುವ ಪ್ರಯತ್ನ ಮಾಡಿದ್ದು ಕಡಿಮೆ. ಆದರೂ, ಇಲ್ಲಿರುವ ದಟ್ಟ ವಿವರಗಳು ಅಪರಾಧ ಜಗತ್ತಿನ ಮೇಲ್ಮೈಯನ್ನು ಸ್ಪರ್ಶಿಸಲು ಸಹಾಯ ಮಾಡುತ್ತದೆ. ಸಾಧನಾ ಪಬ್ಲಿಕೇಶನ್ಸ್ ಹೊರತಂದಿರುವ ಈ ಕೃತಿಯಮುಖಬೆಲೆ 200 ರೂ. ಆಸಕ್ತರು 9480088960 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X