ಅ.10 ರಿಂದ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆ
ಮಂಗಳೂರು, ಅ.9: ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಂತ ಅಲೋಶಿಯಸ್ ಕಾಲೇಜು, ಹಿರಿಯ ಪ್ರಾಥಮಿಕ ಶಾಲೆ ಇವರ ಜಂಟಿ ಆಶ್ರಯದಲ್ಲಿ 14 ಮತ್ತು 17ರ ವಯೋಮಿತಿಯ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ಚದುರಂಗ ಸ್ವರ್ಧೆ 2017-18 ಅ.10 ರಿಂದ 12 ರವರೆಗೆ ಕೊಡಿಯಾಲ್ಬೈಲ್ನ ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮ ಉದ್ಘಾಟನೆಯನ್ನು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಮಾಡಲಿದ್ದಾರೆ. ಧ್ವಜಾರೋಹಣವನ್ನು ಸಚಿವ ಯು.ಟಿ. ಖಾದರ್ ಹಾಗೂ ಪಂದ್ಯಾಟವನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story