Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಆಸ್ಟ್ರೇಲಿಯ ವಿರುದ್ಧ ಎರಡನೆ...

ನಾಳೆ ಆಸ್ಟ್ರೇಲಿಯ ವಿರುದ್ಧ ಎರಡನೆ ಟ್ವೆಂಟಿ-20 ಪಂದ್ಯ

ಇನ್ನೊಂದು ಸರಣಿ ಗೆಲುವಿನ ಹಾದಿಯಲ್ಲಿ ಕೊಹ್ಲಿ ಪಡೆ

ವಾರ್ತಾಭಾರತಿವಾರ್ತಾಭಾರತಿ9 Oct 2017 11:36 PM IST
share
ನಾಳೆ ಆಸ್ಟ್ರೇಲಿಯ ವಿರುದ್ಧ ಎರಡನೆ ಟ್ವೆಂಟಿ-20 ಪಂದ್ಯ

ಗುವಾಹತಿ, ಅ.9: ಟೀಮ್ ಇಂಡಿಯಾ ಮಂಗಳವಾರ ನಡೆಯಲಿರುವ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಗೆಲುವಿನೊಂದಿಗೆ ಸರಣಿ ಜಯಿಸುವ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ.

  ಎಸಿಎ-ಬಾರ್ಸಪರ್ ಸ್ಟೇಡಿಯಂನಲ್ಲಿ ಮೊದಲ ಬಾರಿ ನಡೆಯಲಿರುವ ಪಂದ್ಯದಲ್ಲಿ ಭಾರತ ಜಯ ಗಳಿಸಿದರೆ ಆಸ್ಟ್ರೇಲಿಯದ ವಿರುದ್ಧ ಸತತ ಎರಡನೆ ಗೆಲುವು ಭಾರತದ ಪಾಲಾಗಲಿದೆ.

ಏಕದಿನ ಕ್ರಿಕೆಟ್ ಸರಣಿಯಲ್ಲಿ 4-1 ಯಶಸ್ಸು ಸಾಧಿಸಿರುವ ಟೀಮ್ ಇಂಡಿಯಾ ರಾಂಚಿಯಲ್ಲಿ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ 9 ವಿಕೆಟ್‌ಗಳ ಜಯ ಗಳಿಸಿತ್ತು. ಮಳೆಬಾಧಿತ ಪಂದ್ಯದಲ್ಲಿ ಜಯ ಗಳಿಸಿದ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯ ಸರಣಿ ಗೆಲ್ಲಲು ಇನ್ನುಳಿದಿರುವ ಎರಡು ಪಂದ್ಯಗಳಲ್ಲಿ ಜಯ ಗಳಿಸಬೇಕಾಗಿದೆ. ಕೊನೆಯ ಪಂದ್ಯ ಹೈದರಾಬಾದ್‌ನಲ್ಲಿ ಅ.13ರಂದು ನಡೆಯಲಿದೆ.

 ಆಸ್ಟ್ರೇಲಿಯ ವಿರುದ್ಧ ಭಾರತ ಆಡಿರುವ ಕಳೆದ 14 ಟ್ವೆಂಟಿ-20 ಪಂದ್ಯಗಳ ಪೈಕಿ 10ರಲ್ಲಿ ಜಯ ಗಳಿಸಿದೆ. 4ರಲ್ಲಿ ಸೋಲು ಅನುಭವಿಸಿದೆ. ಆಸ್ಟ್ರೇಲಿಯ ತಂಡಕ್ಕೆ ಭಾರತದ ವಿರುದ್ಧ ಗೆಲುವು ಸುಲಭವಲ್ಲ. ಸ್ಪಿನ್ನರ್‌ಗಳಾದ ಕುಲ್‌ದೀಪ್ ಯಾದವ್ ಮತ್ತು ಯುಜುವೇಂದ್ರ ಚಹಾಲ್ ತಲೆನೋವು ತಂದಿದ್ದಾರೆ.ಅವರು 4 ಏಕದಿನ ಮತ್ತು 1 ಟ್ವೆಂಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯದ 16 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯದ ಬಹುತೇಕ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಆಡಿದವರು. ಭಾರತದ ವಾತಾವರಣವನ್ನು ಚೆನ್ನಾಗಿ ಅರಿತುಕೊಂಡಿದ್ದರೂ, ಅವರಿಗೆ ಮಿಂಚಲು ಸಾಧ್ಯವಾಗುತ್ತಿಲ್ಲ.

 ಭಾರತದ ಆಟಗಾರರು ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಒಬ್ಬರನೊಬ್ಬ್ಬರು ಮೀರಿಸುವ ರೀತಿಯಲ್ಲಿ ಚೆನ್ನಾಗಿ ಆಡುತ್ತಿದ್ದಾರೆ. ರಾಂಚಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಜಸ್‌ಪ್ರೀತ್ ಬುಮ್ರಾ ಅವರ ಬೌಲಿಂಗ್‌ನಲ್ಲಿ ಆಸ್ಟ್ರೇಲಿಯದ ಖಾತೆಗೆ ರನ್ ಹರಿದು ಹೋಗುತ್ತಿದ್ದಾಗ ಯಾದವ್ ಮತ್ತು ಚಹಾಲ್ ಆಸ್ಟ್ರೇಲಿಯದ ಬ್ಯಾಟಿಂಗ್‌ಗೆ ಕಡಿವಾಣ ತೊಡಿಸಿದ್ದರು.

ಆಸ್ಟ್ರೇಲಿಯದ ಅಗ್ರ ಸರದಿಯ ಬ್ಯಾಟಿಂಗ್ ವಾರ್ನರ್, ಫಿಂಚ್ ಮತ್ತು ಸ್ಮಿತ್ ಅವರನ್ನು ಅವಲಂಬಿಸಿದೆ. ಆದರೆ ಸ್ಮಿತ್ ಗಾಯಗೊಂಡಿರುವ ಹಿನ್ನೆಲೆಯಲ್ಲಿ ತಂಡದ ಸೇವೆಗೆ ಲಭ್ಯರಿಲ್ಲ. ಇದು ಆಸ್ಟ್ರೇಲಿಯಕ್ಕೆ ದೊಡ್ಡ ಹಿನ್ನಡೆಯಾಗಿದೆ.ಆಸ್ಟ್ರೇಲಿಯ ತಂಡ ಇದೀಗ ಸ್ಫೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಮೇಲೆ ಭರವಸೆ ಇರಿಸಿದೆ. ಮೂರು ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ 39, 15, 5 ರನ್ ದಾಖಲಿಸಿದ್ದ ಮ್ಯಾಕ್ಸ್‌ವೆಲ್ ಟ್ವೆಂಟಿ-20 ಪಂದ್ಯದಲ್ಲಿ 17 ರನ್ ಗಳಿಸಿದ್ದರು. ಚಹಾಲ್ ದಾಳಿಯನ್ನು ಎದುರಿಸುವಲ್ಲಿ ಮ್ಯಾಕ್ಸ್‌ವೆಲ್ ಎಡವುತ್ತಿದ್ದಾರೆ. ಆದರೆ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಚೆನ್ನಾಗಿ ಆಡಲಿದ್ದಾರೆಂದು ಫಿಂಚ್ ಹೇಳಿದ್ದಾರೆ.

ಫಿಂಚ್ ಅವರು ಯಾದವ್ ದಾಳಿಯ ಮುಂದೆ ರನ್ ಗಳಿಸಲು ಪರದಾಡುತ್ತಿದ್ದಾರೆ. ರಾಂಚಿಯಲ್ಲಿ ಯಾದವ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ನಥಾನ್ ಕೌಲ್ಟರ್ ನೀಲ್ ಏಕದಿನ ಸರಣಿಯಲ್ಲಿ 10 ವಿಕೆಟ್ ಪಡೆದಿದ್ದರು. ಆಸ್ಟ್ರೇಲಿಯ ಪರ ಗರಿಷ್ಠ ವಿಕೆಟ್ ಪಡೆದಿದ್ದ ನೀಲ್ ಅವರು ಎಡಗೈ ವೇಗಿ ಜೇಸನ್ ಬೆಹೆರೆನ್ಡಾಫ್‌ರೊಂದಿಗೆ ರಾಂಚಿಯಲ್ಲಿ ಭರವಸೆಯ ಪ್ರದರ್ಶನ ನೀಡಿದ್ದರು.

ಭಾರತದ ಆರಂಭಿಕ ದಾಂಡಿಗ ಶಿಖರ್ ಧವನ್ ಅವರು ರಾಂಚಿ ಪಂದ್ಯದಲ್ಲಿ ಚೆನ್ನಾಗಿ ಆಡಿದ್ದರು. ಉತ್ತಮ ಫಾರ್ಮ್ ನಲ್ಲಿರುವ ಅಜಿಂಕ್ಯ ರಹಾನೆ ಅನುಪಸ್ಥಿತಿ ತಂಡವನ್ನು ಕಾಡದಂತೆ ಧವನ್ ನೋಡಿಕೊಂಡರು. ಏಕದಿನ ಕ್ರಿಕೆಟ್ ಸರಣಿಯಲ್ಲಿ ಗರಿಷ್ಠ ರನ್ ದಾಖಲಿಸಿದ್ದ ರೋಹಿತ್ ಶರ್ಮ ರಾಂಚಿ ಪಂದ್ಯದಲ್ಲಿ ಬೇಗನೆ ಔಟಾಗಿದ್ದರು. ಆದರೆ ವಿರಾಟ್ ಕೊಹ್ಲಿ ಮತ್ತು ಧವನ್‌ಗೆ ಸಾಥ್ ನೀಡಿ ತಂಡದ ಗೆಲುವಿಗೆ ಅಗತ್ಯದ ರನ್ ದಾಖಲಿಸಲು ನೆರವಾದರು. ಬಾರ್ಸಪರ್ ಸ್ಟೇಡಿಯಂನಲ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ಕಳೆದ ವರ್ಷ ಇಲ್ಲಿ ನಡೆದ ರಣಜಿ ಪಂದ್ಯದಲ್ಲಿ ಹಿಮಾಚಲ ಪ್ರದೇಶ ತಂಡವನ್ನು ಹೈದರಾಬಾದ್ 30 ರನ್‌ಗೆ ಆಲೌಟ್ ಮಾಡಿತ್ತು. 2000ರ ಬಳಿಕ ರಣಜಿಯಲ್ಲಿ ದಾಖಲಾಗಿದ್ದ ನಾಲ್ಕನೆ ಕನಿಷ್ಠ ಸ್ಕೋರ್ ಇದಾಗಿತ್ತು. ಈ ಕಾರಣದಿಂದಾಗಿ ಈ ಪಿಚ್ ಬೌಲರ್‌ಗಳ ಸ್ನೇಹಿಯಾಗಿದೆ. ಬ್ಯಾಟ್ಸ್‌ಮನ್‌ಗಳಿಗೆ ಸವಾಲು ಎದುರಾಗಲಿದೆ.

ಭಾರತ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ(ಉಪನಾಯಕ), ಶಿಖರ್ ಧವನ್, ಲೋಕೇಶ್ ರಾಹುಲ್, ಮನೀಷ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂ.ಎಸ್.ಧೋನಿ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್, ಆಶೀಷ್ ನೆಹ್ರಾ, ಅಕ್ಷರ್ ಪಟೇಲ್.

ಆಸ್ಟ್ರೇಲಿಯ : ಡೇವಿಡ್ ವಾರ್ನರ್(ನಾಯಕ), ಜೇಸನ್ ಬೆಹೆರೆನ್ಡಾಫ್ , ಡ್ಯಾನ್ ಕ್ರಿಶ್ಟಿಯನ್, ನಥಾನ್-ಕೌಲ್ಟರ್ ನೀಲ್,ಆ್ಯರೊನ್ ಫಿಂಚ್, ಟ್ರಾವಿಸ್ ಹೆಡ್, ಮೊಯ್ಸಿಸ್ ಹೆನ್ರಿಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಪೈನೆ, ಕೇನ್ ರಿಚರ್ಡ್ಸನ್, ಆ್ಯಡಮ್ ಝಾಂಪ, ಮಾರ್ಕಸ್ ಸ್ಟೋನಿಸ್, ಆ್ಯಂಡ್ರೊ ಟೈ.

ಪಂದ್ಯದ ಸಮಯ: ರಾತ್ರಿ7:00 ಗಂಟೆಗೆ ಆರಂಭ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X