Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಯಸ್ಥಳದಲ್ಲಿ ಮಾನಸಿಕ ಆರೋಗ್ಯ...

ಕಾರ್ಯಸ್ಥಳದಲ್ಲಿ ಮಾನಸಿಕ ಆರೋಗ್ಯ ಬಹುಮುಖ್ಯ: ಜೈ ಶಂಕರ್

ವಾರ್ತಾಭಾರತಿವಾರ್ತಾಭಾರತಿ11 Oct 2017 8:55 PM IST
share

ಬೆಂಗಳೂರು, ಅ. 11: ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಒತ್ತಡದ ಹಿನ್ನೆಲೆಯಲ್ಲಿ ಮನುಷ್ಯ ತಾಳ್ಮೆ ಕಳೆದುಕೊಂಡು ಖಿನ್ನತೆಗೊಳಗಾಗುತ್ತಿದ್ದಾನೆ. ಇಂತಹವರಿಗೆ ಸೂಕ್ತ ಹಾರೈಕೆ ಮಾಡಿ ಮುಖ್ಯವಾಹಿನಿಗೆ ತರುವುದು ಸಮುದಾಯದ ಕರ್ತವ್ಯ ಎಂದು ನ್ಯಾಯಾಧೀಶ ಹಾಗೂ ಬೆಂ.ನಗರ ಜಿಲ್ಲೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈ ಶಂಕರ್ ಸಲಹೆ ಮಾಡಿದ್ದಾರೆ.

ಇತ್ತೀಚೆಗೆ ಜಿಲ್ಲಾ ಆಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಸಮಿತಿ ಹಾಗೂ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಂದು ಅಧಿಕಾರಿ ಮತ್ತು ಸಿಬ್ಬಂದಿ ಒತ್ತಡದಿಂದ ಹೊರಬಂದು ನೆಮ್ಮದಿಯಿಂದ ಕೆಲಸ ನಿರ್ವಹಿಸಲು ಸಹದ್ಯೋಗಿಗಳೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಬೇಕು. ಆಗ ಒತ್ತಡವನ್ನು ನಿರ್ವಹಿಸಲು ಸಾಧ್ಯ ಎಂದ ಅವರು, ಮಾನಸಿಕ ಅಸ್ವಸ್ಥತೆಯು ಗುಣಪಡಿಸುವ ಕಾಯಿಲೆಯಾಗಿದ್ದು, ಉತ್ತಮ ಮತ್ತು ಪರಿಣತ ವೈದ್ಯರ ಸಹಕಾರದಿಂದ ಈ ಕಾಯಿಲೆ ಹೋಗಲಾಡಿಸಬಹುದು ಎಂದು ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ರತನ್ ಮಾತನಾಡಿ, ಸಮಾಜದಲ್ಲಿ ಮಾನಸಿಕ ಪದವನ್ನು ಉಪಯೋಗಿಸುವುದೇ ತಪ್ಪಾಗಿದ್ದು, ಇದರ ಬಳಕೆಯನ್ನು ಕೈಬಿಡಬೇಕು. ಈ ಕಾಯಿಲೆ ಇರುವವರಿಗೆ ಔಷಧಿ ನೀಡುವುದರ ಜೊತೆಗೆ ಒಳ್ಳೆಯ ಸಂಗಾತಿಗಳೊಂದಿಗೆ ಬೆರೆಯುವುದು, ಮಾತನಾಡುವುದು ಮುಖ್ಯ ಎಂದರು.

ನಾವು ಕೆಲಸ ಮಾಡುವಂತಹ ಸ್ಥಳಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದರ ಜೊತೆಗೆ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಮನಸ್ಥಿತಿ ಬೇಕಾಗುತ್ತದೆ. ಮಾನಸಿಕ ಆರೋಗ್ಯದ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸದೆ ಜನರೊಂದಿಗೆ ಮಾತನಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಆಗ ಮಾತ್ರ ಮುಕ್ತವಾಗಿ ಮನಸ್ಸು ತೆರೆದುಕೊಳ್ಳುತ್ತದೆ ಎಂದು ವಿವರಿಸಿದರು.

ಪೋಸ್ಟ್ ಮಾಸ್ಟರ್ ಜನರಲ್ ಕರ್ನಲ್ ಅರವಿಂದ್ ಮಾತನಾಡಿ, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಮಾನಸಿಕ ಅನಾರೋಗ್ಯವನ್ನು ಪರಿಹರಿಸಲು ಅಸ್ವಸ್ಥರನ್ನು ಏಕಾಂಗಿಯಾಗಿ ಬಿಡದೆ ಅವರಿಗೆ ತಾಳ್ಮೆಯಿಂದ ಈ ಬಗ್ಗೆ ಅರಿವು ಮೂಡಿಸಿದರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಕಾರಾಗೃಹದ ಅಧೀಕ್ಷಕ ಸೋಮಶೇಖರ್ ಮಾತನಾಡಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 4,300 ಕೈದಿಗಳಿದ್ದು, ಅವರು ವಿವಿಧ ರೀತಿ ಖಿನ್ನತೆಗೊಳಗಾಗಿದ್ದಾರೆ. ಅವರನ್ನು ನೋಡಿಕೊಳ್ಳುತ್ತಿರುವ ಜೈಲಿನ ಸಿಬ್ಬಂದಿಯವರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಅವರೂ ಖಿನ್ನತೆಗೊಳಗಾಗುತ್ತಿದ್ದಾರೆ. ಸಿಬ್ಬಂದಿಯವರಿಗೆ ಕೆಲಸ ನಿರ್ವಹಿಸಲು ಸೂಕ್ತ ಪರಿಸರವನ್ನು ನಿರ್ಮಿಸುವುದರ ಜೊತೆಗೆ ಉತ್ಸುಕತೆಯಿಂದ ಕೆಲಸ ಮಾಡಲು ಅನುಕೂಲವಾಗುವಂತೆ ಸಹಕಾರ ನೀಡಲಾಗುತ್ತಿದೆ ಎಂದರು.

ಮಾನಸಿಕ ಆರೋಗ್ಯ ಭಾಗದ ಉಪನಿರ್ದೇಶಕ ಡಾ.ರಜನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈಜ್ಞಾನಿಕ ಸಮೀಕ್ಷೆಯ ಪ್ರಕಾರ ಜೈಲು ವಾಸಿಗಳಿಗೆ ಶೇ.80ರಷ್ಟು ಒತ್ತಡವಿದ್ದರೆ, ಸಿಬ್ಬಂದಿಗೆ ಶೇ.60ರಷ್ಟು ಒತ್ತಡವಿರುತ್ತದೆ. ಹೀಗಾಗಿ ಅಂತಹ ಸಿಬ್ಬಂದಿಗೆ ಸೂಕ್ತ ಆಪ್ತ ಸಮಾಲೋಚನೆ ಹಾಗೂ ಪರಿವರ್ತನೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.

ಈ ವೇಳೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಸಂಬಂಧ ವಿಶೇಷವಾದ ಅಂಚೆ ಲಕೆಟೆಯನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯರಾದ ರಮೇಶ್ ಬಾಬು, ಅನ್ಸರ್ ಅಹ್ಮದ್, ಪುಷ್ಪರಾಜ್, ಚೇತನ್‌ಕುಮಾರ್, ನಟರಾಜ್, ರಮೇಶ್ ಕುಮಾರ್ ಎಂ. ಚಂದ್ರಶೇಖರ್, ನಿಮ್ಹಾನ್ಸ್ ಪ್ರಾಧ್ಯಾಪಕಿ ಡಾ.ಪ್ರತಿಮಾ ಮೂರ್ತಿ ಹಾಗೂ ಕಾರಾಗೃಹ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X