Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ...

ಶಿವಮೊಗ್ಗ: ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ

ವಾರ್ತಾಭಾರತಿವಾರ್ತಾಭಾರತಿ11 Oct 2017 11:14 PM IST
share

ಶಿವಮೊಗ್ಗ, ಅ.11: ನಗರದ ಹೊರವಲಯದ ಗಾಡಿಕೊಪ್ಪದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಖಾಸಗಿ ಶಾಲೆಯೊಂದರ ಶಿಕ್ಷಕನು ವಿದ್ಯಾರ್ಥಿಯೋರ್ವನ ಕೈ ಬೆರಳೊಂದರ ಮೂಳೆ ಮುರಿಯುವ ರೀತಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಾಡಿಕೊಪ್ಪದ ನಿವಾಸಿ, ಆಟೊ ಚಾಲಕ ದಯಾನಂದ ಎಂಬವರ 11 ವರ್ಷದ ಪುತ್ರನೇ ಶಿಕ್ಷಕನಿಂದ ಹಲ್ಲೆಗೊಳಗಾದ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವಾರ ಈ ಘಟನೆ ನಡೆದಿದೆ. ಈ ಬಗ್ಗೆ ಪೋಷಕರು ಶಾಲೆಯ ಮುಖ್ಯೋಪಾಧ್ಯಯರಿಗೆ ಹಾಗೂ ಆಡಳಿತ ಮಂಡಳಿಯ ಮುಖ್ಯಸ್ಥರ ಗಮನಕ್ಕೆ ವಿಷಯ ತಂದಿದ್ದಾರೆ.

ಆದರೆ ಇಲ್ಲಿಯವರೆಗೂ ಅವರು ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಕನಿಷ್ಠ ಪೋಷಕರಿಗೆ ಸಮಜಾಯಿಷಿ ನೀಡುವುದಾಗಲಿ, ಮಾನವೀಯತೆಯ ದೃಷ್ಟಿಯಿಂದ ಬಾಲಕನಿಗೆ ಚಿಕಿತ್ಸೆ ಕೊಡಿಸಲು ಕೂಡ ಮುಂದಾಗಿಲ್ಲ. ಘಟನೆ ವಿವರ: ಕಳೆದ ವಾರ ಶಾಲೆಯ ಕೊಠಡಿಯೊಳಗೆ ಕೆಲ ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಶಿಕ್ಷಕನೋರ್ವ, ದಯಾನಂದರವರ ಪುತ್ರನ ಮೇಲೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಈತನ ಹೊಡೆತದ ರಭಸಕ್ಕೆ ವಿದ್ಯಾರ್ಥಿಯ ಬಲಗೈನ ಕಿರು ಬೆರಳಿನ ಭಾಗದ ಮೂಳೆ ಬಿರುಕು ಬಿಟ್ಟಿದೆ. ಕಾಲುಗಳ ಮೇಲೆ ಬಾಸುಂಡೆ ಮೂಡಿದೆ. ವಿದ್ಯಾರ್ಥಿಯು ಮನೆಗೆ ಆಗಮಿಸಿ ನೋವಿನಿಂದ ಅಳುತ್ತಿದ್ದನ್ನು ಗಮನಿಸಿದ ಪೋಷಕರು ಕಾರಣ ಕೇಳಿದಾಗ, ಶಿಕ್ಷಕನ ಹಲ್ಲೆಯ ವಿವರ ತಿಳಿಸಿದ್ದಾನೆ. ತಕ್ಷಣವೇ ಪೋಷಕರು ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಎಕ್ಸ್‌ರೇಯಲ್ಲಿ ಬಾಲಕನ ಕಿರು ಬೆರಳ ಭಾಗದ ಮೂಳೆಗೆ ಹಾನಿಯಾಗಿರುವುದು ಧೃಢಪಟ್ಟಿದೆ.

ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು, ಶಾಲೆಗಳಿಗೆ ಸೂಶಾಲೆಗಳಿಗೆ ಸೂಕ್ತ ನಿರ್ದೇಶನ ರವಾನಿಸಬೇಕು. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದರೆ ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಶಾಲಾ ಆಡಳಿತ ಮಂಡಳಿಗಳಿಗೆ ತಿಳಿ ಹೇಳುವ ಕೆಲಸ ಮಾಡಬೇಕಾಗಿದೆ ಎಂಬುವುದು ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X