Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ನಾಳೆ ಕೊನೆಯ ಪಂದ್ಯ:...

ಭಾರತಕ್ಕೆ ನಾಳೆ ಕೊನೆಯ ಪಂದ್ಯ: ಪರಾಗ್ವೆಗೆ ಹ್ಯಾಟ್ರಿಕ್ ಗುರಿ

ವಾರ್ತಾಭಾರತಿವಾರ್ತಾಭಾರತಿ11 Oct 2017 11:48 PM IST
share
ಭಾರತಕ್ಕೆ ನಾಳೆ ಕೊನೆಯ ಪಂದ್ಯ: ಪರಾಗ್ವೆಗೆ ಹ್ಯಾಟ್ರಿಕ್ ಗುರಿ

ಹೊಸದಿಲ್ಲಿ, ಅ.11: ಸ್ಫೂರ್ತಿಯುತ ಪ್ರದರ್ಶನದಿಂದ ಶ್ಲಾಘನೆಗೆ ಒಳಗಾಗಿರುವ ಭಾರತ ತಂಡ ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ ಗುರುವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಘಾನಾ ವಿರುದ್ಧ ಮತ್ತೊಂದು ಕಠಿಣ ಸವಾಲು ಎದುರಿಸಲಿದೆ.

ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ವಿರುದ್ಧ 0-3 ರಿಂದ ಸೋತಿರುವ ಭಾರತ ತಂಡ ಕೊಲಂಬಿಯಾ ವಿರುದ್ಧ 2ನೆ ಪಂದ್ಯದಲ್ಲಿ ಸ್ಫೂರ್ತಿಯುತ ಪ್ರದರ್ಶನದಿಂದ ಗಮನ ಸೆಳೆದಿತ್ತು. ಭಾರತೀಯರು ವಿಶ್ವಶ್ರೇಷ್ಠ ತಂಡದ ವಿರುದ್ಧ ಸ್ಪರ್ಧಿಸಲು ಸಮರ್ಥರಿದ್ದಾರೆಂದು ಸಾಬೀತುಪಡಿಸಿದ್ದರು.

    ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ಗುರುವಾರ ನಡೆಯಲಿರುವ ‘ಎ’ ಗುಂಪಿನ ಅಂತಿಮ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ಘಾನಾ ಪಂದ್ಯ ಗೆಲ್ಲುವ ಫೇವರಿಟ್ ತಂಡವಾಗಿದೆ. ಘಾನಾ ಗುರುವಾರದ ಪಂದ್ಯದಲ್ಲಿ ಜಯ ಸಾಧಿಸಿದರೂ ನಾಕೌಟ್ ಹಂತಕ್ಕೇರುವ ಭರವಸೆಯಿಲ್ಲ. ‘ಎ’ ಗುಂಪಿನಲ್ಲಿ ಅಮೆರಿಕ ಈಗಾಗಲೇ ಅಂತಿಮ-16ರ ಸುತ್ತಿಗೇರಿದ್ದು, ಕೊಲಂಬಿಯಾ ಹಾಗೂ ಘಾನಾ ತಲಾ 3 ಅಂಕ ಗಳಿಸಿವೆ. ಈವರೆಗೆ ಒಂದೂ ಗೆಲುವನ್ನು ದಾಖಲಿಸದ ಭಾರತ ತಂಡ ಐದು ಗೋಲುಗಳನ್ನು ಬಿಟ್ಟುಕೊಟ್ಟು ಕೇವಲ ಒಂದು ಗೋಲು ಗಳಿಸಿದೆ. ಭಾರತದ ಪಾಳಯದಲ್ಲಿ ಗೋಲ್‌ಕೀಪರ್ ಧೀರಜ್ ಸಿಂಗ್ ಎರಡೂ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಅನ್ವರ್ ಅಲಿ ಹಾಗೂ ನಮಿತ್ ದೇಶಪಾಂಡೆ ಉತ್ತಮ ಪ್ರದರ್ಶನ ನೀಡಿದ್ದಾರೆ.

ಹ್ಯಾಟ್ರಿಕ್ ಗೆಲುವಿನತ್ತ ಪರಾಗ್ವೆ: ಈಗಾಗಲೇ ಪ್ರಿ-ಕ್ವಾರ್ಟರ್‌ಫೈನಲ್ ಸ್ಥಾನವನ್ನು ದೃಢಪಡಿಸಿರುವ ಪರಾಗ್ವೆ ನವಿಮುಂಬೈನಲ್ಲಿ ಗುರುವಾರ ನಡೆಯಲಿರುವ ‘ಬಿ’ಗುಂಪಿನ ಪಂದ್ಯದಲ್ಲಿ ಟರ್ಕಿಯನ್ನು ಎದುರಿಸಲಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಚಿತ್ತವಿರಿಸಿದೆ.

ಮಾಲಿ(3-2) ಹಾಗೂ ನ್ಯೂಝಿಲೆಂಡ್(4-2)ತಂಡವನ್ನು ಮಣಿಸಿರುವ ದಕ್ಷಿಣ ಅಮೆರಿಕ ತಂಡ ಪರಾಗ್ವೆ ಪ್ರಶಸ್ತಿ ಜಯಿಸುವ ಫೇವರಿಟ್ ತಂಡವಾಗಿ ಹೊರಹೊಮ್ಮಿದೆ. ಎರಡೂ ಪಂದ್ಯಗಳಲ್ಲಿ ಆಕ್ರಮಣಕಾರಿ ಪ್ರದರ್ಶನ ನೀಡಿದೆ. ಮಾಲಿ ವಿರುದ್ಧ 3-0 ಅಂತರದಿಂದ ಸೋತಿರುವ ಟರ್ಕಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

 ಕೊಲಂಬಿಯಾಕ್ಕೆ ಗೆಲ್ಲಲೇಬೇಕಾದ ಪಂದ್ಯ: ನವಿಮುಂಬೈನಲ್ಲಿ ಗುರುವಾರ ನಡೆಯಲಿರುವ ‘ಎ’ ಗುಂಪಿನ ಪಂದ್ಯದಲ್ಲಿ ಪ್ರಶಸ್ತಿ ಸ್ಪರ್ಧೆಯಲ್ಲಿರುವ ಅಮೆರಿಕ ತಂಡ ಅಜೇಯ ಓಟವನ್ನು ಮುಂದುವರಿಸುವ ಗುರಿ ಹೊಂದಿದ್ದರೆ ಕೊಲಂಬಿಯಾ ನಿರ್ಣಾಯಕ ಪಂದ್ಯವನ್ನು ಆಡಲಿದೆ. ಆತಿಥೇಯ ಭಾರತ(3-0) ಹಾಗೂ ಘಾನಾ(1-0) ವಿರುದ್ಧ ಸತತ ಜಯ ಸಾಧಿಸಿರುವ ಅಮೆರಿಕ ಅಂತಿಮ-16ರ ಸುತ್ತಿಗೆ ತಲುಪಿದೆ. ಮತ್ತೊಂದೆಡೆ, ಕೊಲಂಬಿಯಾ ತಂಡ ತನ್ನ ಮೊದಲ ಪಂದ್ಯದಲ್ಲಿ ಘಾನಾ ವಿರುದ್ಧ 0-1 ರಿಂದ ಸೋತಿತ್ತು. ಭಾರತ ವಿರುದ್ಧ 2-1 ರಿಂದ ಪ್ರಯಾಸದ ಗೆಲುವು ದಾಖಲಿಸಿತ್ತು. ಅಮೆರಿಕ ನಾಕೌಟ್ ಸುತ್ತಿಗೆ ಮೊದಲು ಕೊಲಂಬಿಯಾ ವಿರುದ್ಧ ಜಯ ಸಾಧಿಸಿ ನೈತಿಕಸ್ಥೈರ್ಯ ಹೆಚ್ಚಿಸಿಕೊಳ್ಳಲು ಎದುರು ನೋಡುತ್ತಿದೆೆ. 5 ಬಾರಿ ವಿಶ್ವಕಪ್‌ನಲ್ಲಿ ಭಾಗವಹಿಸಿರುವ ಕೊಲಂಬಿಯಾ 2 ಬಾರಿ ಮೂರನೆ ಸ್ಥಾನ ಪಡೆದಿತ್ತು. ವಿಶ್ವಕಪ್ ಆಡಲು ಮೊದಲ ಬಾರಿ ಭಾರತಕ್ಕೆ ಬಂದಿರುವ ಕೊಲಂಬಿಯಾ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X