ಅಕ್ರಮ ಮರಳುಗಾರಿಕೆಗೆ ದಾಳಿ: ಮರಳು ವಶ
ಕೋಟ, ಅ.12: ಮೊಳಹಳ್ಳಿ ಗ್ರಾಮದ ಮರತ್ತೂರು ಮತ್ತು ಕೋಣಿಹಾರ ವರಾಹಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಅ.11ರಂದು ಸಂಜೆ ವೇಳೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೊತ್ತುಗಳನ್ನು ವಶಪಡಿಸಿ ಕೊಂಡಿದೆ.
ಮೊಳಹಳ್ಳಿಯ ಸುರೇಂದ್ರ ಶೆಟ್ಟಿ ಮತ್ತು ಶ್ರೀಧರ ಶೆಟ್ಟಿ ಎಂಬವರು ಮರತ್ತೂರು ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮತ್ತು ಸಾಗಾಣಿಕೆ ನಡೆಸುತ್ತಿರುವು ದಾಗಿ ಬಂದ ಮಾಹಿತಿಯಂತೆ ಜಂಟಿ ಕಾರ್ಯಾಚರಣೆ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳ ತಂಡ 3 ಮೆಟ್ರಿಕ್ ಟನ್ ಮರಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದೆ.
ಅದೇ ರೀತಿ ಕೋಣಿಹಾರ ನದಿಯಲ್ಲಿ ಸೋಮಯ್ಯ ಮೊಳಹಳ್ಳಿ ಎಂಬಾತ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ತಂಡ 4 ಮೆಟ್ರಿಕ್ ಟನ್ ಮರಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದೆ. ಈ ಬಗ್ಗೆ ಕೋಟ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story