Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಣಿ ಗೆಲುವಿನತ್ತ ವಿರಾಟ್ ಕೊಹ್ಲಿ ಬಳಗ...

ಸರಣಿ ಗೆಲುವಿನತ್ತ ವಿರಾಟ್ ಕೊಹ್ಲಿ ಬಳಗ ಚಿತ್ತ

ನಾಳೆ ಭಾರತ-ಆಸ್ಟ್ರೇಲಿಯ ಮೂರನೆ ಟ್ವೆಂಟಿ-20

ವಾರ್ತಾಭಾರತಿವಾರ್ತಾಭಾರತಿ12 Oct 2017 11:46 PM IST
share
ಸರಣಿ ಗೆಲುವಿನತ್ತ ವಿರಾಟ್ ಕೊಹ್ಲಿ ಬಳಗ ಚಿತ್ತ

ಹೈದರಾಬಾದ್, ಅ.12: ಗುವಾಹತಿಯಲ್ಲಿ ನಡೆದ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ ಸೋತಿರುವ ಭಾರತ ಕ್ರಿಕೆಟ್ ತಂಡ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಸರಣಿ ನಿರ್ಣಾಯಕ ಮೂರನೆ ಹಾಗೂ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. ಮತ್ತೊಂದೆಡೆ, ಆಸ್ಟ್ರೇಲಿಯ ತಂಡ ಸರಣಿ ಗೆಲುವಿನೊಂದಿಗೆ ಭಾರತ ಪ್ರವಾಸ ಅಂತ್ಯಗೊಳಿಸುವ ಯೋಜನೆಯಲ್ಲಿದೆ.

ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಕೊಹ್ಲಿ ಪಡೆ ಮೊದಲ ಟ್ವೆಂಟಿ-20 ಪಂದ್ಯವನ್ನು ಜಯಿಸಿ 1-0 ಮುನ್ನಡೆ ಸಾಧಿಸಿತ್ತು. ಆದರೆ, 2ನೆ ಪಂದ್ಯದಲ್ಲಿ ತಿರುಗಿಬಿದ್ದ ಕಾಂಗರೂ ಪಡೆ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು.

 ಗುವಾಹತಿಯಲ್ಲಿ ಮಂಗಳವಾರ ನಡೆದಿದ್ದ 2ನೆ ಪಂದ್ಯದಲ್ಲಿ ಭಾರತ ಎಲ್ಲ ವಿಭಾಗದಲ್ಲೂ ವಿಫಲವಾಗಿತ್ತು. ಆಸ್ಟ್ರೇಲಿಯದ ವೇಗದ ಬೌಲರ್ ಜೇಸನ್ ಬೆಹ್ರೆನ್‌ಡೊರ್ಫ್ ಸ್ವಿಂಗ್ ಬೌಲಿಂಗ್‌ನಿಂದ ಭಾರತದ ದಾಂಡಿಗರನ್ನು ಕಾಡಿದ್ದರು. ಅಗ್ರ ಕ್ರಮಾಂಕದಲ್ಲಿ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ಮನೀಶ್ ಪಾಂಡೆ ವಿಫಲರಾಗಿದ್ದರು. ನಾಯಕ ಕೊಹ್ಲಿ ಖಾತೆ ತೆರೆಯಲು ವಿಫಲರಾಗಿದ್ದರು. ಕೊಹ್ಲಿ ಟ್ವೆಂಟಿ-20ಯಲ್ಲಿ ಮೊದಲ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡನೆ ಪಂದ್ಯದಲ್ಲಿ ಸ್ಪಿನ್ ಬೌಲರ್‌ಗಳು ದಂಡಿಸಲ್ಪಟ್ಟ ಹೊರತಾಗಿಯೂ ಕೊಹ್ಲಿ 3ನೆ ಪಂದ್ಯದಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ನ್ಯೂಝಿಲೆಂಡ್ ವಿರುದ್ಧ ಮುಂಬರುವ ಸರಣಿಯಲ್ಲಿ ನಿವೃತ್ತಿಯಾಗಲು ಸಜ್ಜಾ ಗಿರುವ ಆಶೀಷ್ ನೆಹ್ರಾ 3ನೆ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ.

ಎರಡನೆ ಪಂದ್ಯದಲ್ಲಿ ಖಾಯಂ ನಾಯಕ ಸ್ಟೀವನ್ ಸ್ಮಿತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ತಂಡವನ್ನು ಸಮರ್ಥವಾಗಿ ಮುನ್ನಡೆಸಿದ್ದರು. ಬೆಹ್ರೆನ್‌ಡೊರ್ಫ್ ಆಕರ್ಷಕ ಸ್ಪೆಲ್ ಮೂಲಕ ಭಾರತಕ್ಕೆ ದುಃಸ್ವಪ್ನವಾಗಿ ಕಾಡಿದರೆ, 3ನೆ ಕ್ರಮಾಂಕದಲ್ಲಿ ಆಡಿದ್ದ ಆಲ್‌ರೌಂಡರ್ ಹೆನ್ರಿಕ್ಸ್ ತಂಡದ ಗೆಲುವನ್ನು ಮತ್ತಷ್ಟು ಸುಲಭಗೊಳಿಸಿದ್ದರು.

ಹೈದರಾಬಾದ್‌ನ ರಾಜೀವ್‌ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿಯಾಗಿದೆ. ಹೈದರಾಬಾದ್ ಪಿಚ್‌ನಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆಯಿದೆ. ಗುವಾಹತಿಯ ಅಂಗಣ ಒದ್ದೆ ಯಾಗಿದ್ದ ಕಾರಣ ಕನಿಷ್ಠ ಸ್ಕೋರ್ ದಾಖಲಾಗಿತ್ತು.

 ಹೈದರಾಬಾದ್ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ಸಾಕಷ್ಟು ನಡೆದಿವೆ. ಆದರೆ, ಅಂತಾರಾಷ್ಟ್ರೀಯ ಟ್ವೆಂಟಿ-20 ಪಂದ್ಯ ಇದೇ ಮೊದಲ ಬಾರಿ ನಡೆಯುತ್ತಿದೆ. ಡೇವಿಡ್ ವಾರ್ನರ್‌ಗೆ ಹೈದರಾಬಾದ್ ಪಿಚ್‌ನಲ್ಲಿ ಹಲವಾರು ಐಪಿಎಲ್ ಪಂದ್ಯಗಳನ್ನು ಆಡಿದ ಅನುಭವವಿದೆ.

ಕೊನೆಯ ಟ್ವೆಂಟಿ-20ಗೆ ಮಳೆ ಭೀತಿ

ಭಾರತ-ಆಸ್ಟ್ರೇಲಿಯದ ನಡುವೆ ಶುಕ್ರವಾರ ನಡೆಯಲಿರುವ ಮೂರನೆ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಇಂದು(ಗುರುವಾರ) ಮತ್ತು ನಾಳೆ(ಶುಕ್ರವಾರ)ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ನಗರದಲ್ಲಿ ಪ್ರತಿನಿತ್ಯ ಉತ್ತಮ ಮಳೆ ಸುರಿಯುತ್ತಿದ್ದು ಸಾಮಾನ್ಯ ಜನಜೀವನಕ್ಕೆ ಧಕ್ಕೆಯಾಗಿದೆ.

ಪಂದ್ಯಕ್ಕೆ ಯಾವುದೇ ಸಮಸ್ಯೆಯಾಗದಂತೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ‘‘ಈಗ ಸುರಿಯುತ್ತಿರುವ ಮಳೆಯಿಂದಾಗಿ ಪಿಚ್ ಮೇಲೆ ಯಾವುದೇ ಪರಿಣಾಮಬೀರುವುದಿಲ್ಲ’’ ಎಂದು ಕ್ಯುರೇಟರ್ ವೈಎಲ್ ಚಂದ್ರಶೇಖರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X