Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜರ್ಮನಿಗೆ ಪ್ರಿ-ಕ್ವಾರ್ಟರ್ ಫೈನಲ್ ಕನಸು

ಜರ್ಮನಿಗೆ ಪ್ರಿ-ಕ್ವಾರ್ಟರ್ ಫೈನಲ್ ಕನಸು

ವಾರ್ತಾಭಾರತಿವಾರ್ತಾಭಾರತಿ12 Oct 2017 11:59 PM IST
share
ಜರ್ಮನಿಗೆ ಪ್ರಿ-ಕ್ವಾರ್ಟರ್ ಫೈನಲ್ ಕನಸು

ಕೊಚ್ಚಿ, ಅ.12: ಇರಾನ್ ವಿರುದ್ಧ 0-4 ಅಂತರದಿಂದ ಹೀನಾಯವಾಗಿ ಸೋತಿರುವ ಯುರೋಪ್‌ನ ಬಲಿಷ್ಠ ತಂಡ ಜರ್ಮನಿ ಶುಕ್ರವಾರ ನಡೆಯಲಿರುವ ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ ಆಫ್ರಿಕದ ಗಿನಿಯಾ ತಂಡದ ವಿರುದ್ಧ ಮಾಡು-ಮಡಿ ಪಂದ್ಯವನ್ನು ಆಡಲಿದೆ.

ಕೋಸ್ಟರಿಕಾ ತಂಡವನ್ನು 2-1 ರಿಂದ ಮಣಿಸುವ ಮೂಲಕ ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದ್ದ ಜರ್ಮನಿ ತನ್ನ ಎರಡನೆ ಲೀಗ್ ಪಂದ್ಯದಲ್ಲಿ ಇರಾನ್ ವಿರುದ್ಧ ಹೀನಾಯವಾಗಿ ಸೋತಿದೆ.

ಗಿನಿಯಾ ವಿರುದ್ಧ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಜರ್ಮನಿ ಎಡವಿದರೆ ಟೂರ್ನಮೆಂಟ್‌ನಿಂದ ನಿರ್ಗಮಿಸಿದ ಮೊದಲ ಪ್ರಮುಖ ತಂಡ ಎನಿಸಿಕೊಳ್ಳಲಿದೆ. ಸಿ ಗುಂಪಿನಲ್ಲಿ ಅಗ್ರ-2ರಲ್ಲಿ ಸ್ಥಾನ ಪಡೆದು ಅಂತಿಮ-16ರ ಸುತ್ತಿಗೆ ನೇರ ಪ್ರವೇಶ ಪಡೆಯಲು ಶುಕ್ರವಾರದ ಪಂದ್ಯ ಜರ್ಮನಿಗೆ ಅತ್ಯಂತ ಮುಖ್ಯವಾಗಿದೆ. ಸಿ ಗುಂಪಿನಲ್ಲಿ ಒಟ್ಟು ಆರು ಅಂಕವನ್ನು ಗಳಿಸಿರುವ ಇರಾನ್ ಈಗಾಗಲೇ ನಾಕೌಟ್‌ಗೆ ತೇರ್ಗಡೆಯಾಗಿದೆ.

ಮತ್ತೊಂದೆಡೆ, ಗಿನಿಯಾ ತಂಡ ತನ್ನ ಮೊದಲ ಪಂದ್ಯದಲ್ಲಿ ಇರಾನ್ ವಿರುದ್ಧ 1-3 ರಿಂದ ಸೋತಿತ್ತು. ಎರಡನೆ ಪಂದ್ಯದಲ್ಲಿ ಕೋಸ್ಟರಿಕಾ ವಿರುದ್ಧ 1-1 ರಿಂದ ಡ್ರಾ ಸಾಧಿಸಿತ್ತು. ಕೇವಲ ಒಂದು ಅಂಕ ಗಳಿಸಿರುವ ಗಿನಿಯಾ ತಂಡ ಜರ್ಮನಿ ವಿರುದ್ಧ ಜಯ ಸಾಧಿಸಿದರೆ ಅಂತಿಮ-16ರ ಸುತ್ತು ತಲುಪುತ್ತದೆ.

ಕೋಸ್ಟರಿಕಾಗೆ ಇರಾನ್ ಸವಾಲು: ಜರ್ಮನಿ ವಿರುದ್ಧ ಭರ್ಜರಿ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಇರಾನ್ ತಂಡ ಮಾರ್ಗೊವಾದಲ್ಲಿ ಶುಕ್ರವಾರ ನಡೆಯಲಿರುವ ‘ಸಿ’ ಗುಂಪಿನ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೋಸ್ಟರಿಕಾವನ್ನು ಎದುರಿಸಲಿದೆ.

ಸಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿರುವ ಇರಾನ್ ತಂಡ ನಾಕೌಟ್ ಹಂತ ತಲುಪುವ ಮೂಲಕ ಅಮೆರಿಕ, ಪರಾಗ್ವೆ, ಬ್ರೆಝಿಲ್, ಫ್ರಾನ್ಸ್ ಹಾಗೂ ಇಂಗ್ಲೆಂಡ್ ತಂಡಗಳನ್ನು ಸೇರಿಕೊಂಡಿದೆ.

ತನ್ನ ಮೊದಲ ಪಂದ್ಯದಲ್ಲಿ ಜರ್ಮನಿಗೆ ಶರಣಾಗಿರುವ ಕೋಸ್ಟರಿಕಾ ತಂಡ ಗಿನಿಯಾ ವಿರುದ್ಧ ಎರಡನೆ ಪಂದ್ಯವನ್ನು ಡ್ರಾಗೊಳಿಸಿ ಒಂದಂಕವನ್ನು ಗಳಿಸಿದೆ. ನಾಕೌಟ್ ಸುತ್ತಿಗೆ ತೇರ್ಗಡೆಯಾಗಬೇಕಾದರೆ ಶುಕ್ರವಾರದ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X