ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ಉಡುಪಿ, ಅ.13: ಉಡುಪಿ ನಗರ ಪೊಲೀಸ್ ಠಾಣೆ ಹಾಗೂ ಸೈಂಟ್ ಸಿಸಿಲಿಯಾ ಶಾಲೆಯ ವಿದ್ಯಾರ್ಥಿಗಳ ಜಂಟಿ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚಾರಣೆಯ ಅಂಗವಾಗಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಇಂದು ನಗರದಲ್ಲಿ ನಡೆಯಿತು.
ಇದರ ಅಂಗವಾಗಿ ಸೈಂಟ್ ಸಿಸಿಲಿಯಾ ಶಾಲೆಯ ವಿದ್ಯಾರ್ಥಿಗಳು ನಗರ ಠಾಣೆಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಕಾಲುನಡಿಗೆ ಜಾಥ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಡಾ. ಸಂಜೀವ ಎಂ. ಪಾಟೀಲ್, ಡಿವೈಎಸ್ಪಿ ಕುಮಾರಸ್ವಾಮಿ, ಉಡುಪಿ ವೃತ್ತನಿರೀಕ್ಷಕ ನವೀನ್ಚಂದ್ರ ಜೋಗಿ, ನಗರ ಪೊಲೀಸ್ ಠಾಣಾ ಮತ್ತು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. 200ಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು.
Next Story