Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡಕ್ಕೊಂದು ಬಾವುಟ ಇರಲೇಬೇಕು, ಇದರಿಂದ...

ಕನ್ನಡಕ್ಕೊಂದು ಬಾವುಟ ಇರಲೇಬೇಕು, ಇದರಿಂದ ರಾಷ್ಟ್ರಧ್ವಜದ ಮೇಲಿನ ಗೌರವ ಕಡಿಮೆ ಆಗದು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Oct 2017 7:49 PM IST
share
ಕನ್ನಡಕ್ಕೊಂದು ಬಾವುಟ ಇರಲೇಬೇಕು, ಇದರಿಂದ ರಾಷ್ಟ್ರಧ್ವಜದ ಮೇಲಿನ ಗೌರವ ಕಡಿಮೆ ಆಗದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ. 14: ರಾಜ್ಯದಲ್ಲಿ ವಾಸ ಮಾಡುತ್ತಿರುವ ಪರಭಾಷಿಕರು ಕನ್ನಡಿಗರಾಗಬೇಕು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಿನ ಆರೂವರೆ ಕೋಟಿ ಜನರ ಪ್ರತಿನಿಧಿಯಾಗಿ ಹೇಳುತ್ತೇನೆ, ಕನ್ನಡಕ್ಕೊಂದು ಬಾವುಟ ಇರಲೇಬೇಕು. ಇದರಿಂದ ರಾಷ್ಟ್ರಧ್ವಜದ ಮೇಲಿನ ಗೌರವ ಯಾವುದೇ ಕಾರಣಕ್ಕೂ ಕಡಿಮೆ ಆಗುವುದಿಲ್ಲ ಎಂದು ನುಡಿದಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಕನ್ನಡಿಗರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಾಸಿಸುವವರು ಅವರು ಯಾವುದೇ ಭಾಷಿಕರಾಗಿರಲಿ, ಮೊದಲು ಕನ್ನಡಿಗರು. ಪ್ರತಿಯೊಬ್ಬರೂ ಕನ್ನಡಿಗರಾಗಲೇಬೇಕು, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದರು.

ನಮ್ಮ ಸರಕಾರ ಕನ್ನಡದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ರಕ್ಷಣೆಗೆ ಬದ್ಧವಾಗಿದೆ. ಈ ನಾಡಿನ ಮುಖ್ಯಮಂತ್ರಿ ಆಗಿ 6.5 ಕೋಟಿ ಜನರ ಪ್ರತಿನಿಧಿಯಾಗಿ ಹೇಳುತ್ತಿದ್ದೇನೆ. ಕನ್ನಡಕ್ಕೊಂದು ಬಾವುಟ ಇರಲೇಬೇಕು. ಪ್ರತ್ಯೇಕ ಬಾವುಟ ಇರುವಂತಿಲ್ಲ ಎಂದು ಸಂವಿಧಾನದಲ್ಲಿ ಹೇಳಿಲ್ಲ. ರಾಷ್ಟ್ರಧ್ವಜದ ಮೇಲಿನ ಗೌರವವೂ ಕಡಿಮೆ ಆಗುವುದಿಲ್ಲ. ರಾಷ್ಟ್ರಧ್ವಜ ಎಂದೆಂದೂ ಮೇಲೆಯೇ ಹಾರುತ್ತದೆ ಎಂದರು.

ನಮ್ಮ ಮೆಟ್ರೋ ರೈಲಿನಲ್ಲಿ ಹಿಂದಿ ಬಳಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರಕ್ಕೆ ಖಡಾಖಂಡಿತವಾಗಿ ಪತ್ರ ಬರೆದು ತಿಳಿಸಿದ್ದೇನೆ. ತಮಿಳುನಾಡು, ಕೇರಳದ ಮೆಟ್ರೋ ರೈಲಿನಲ್ಲಿ ಇಲ್ಲದ ಹಿಂದಿ ಇಲ್ಲೇಕೆ ಬೇಕು ಎಂದ ಅವರು, ಕೃಷ್ಣಾ, ಕಾವೇರಿ, ಮಹಾದಾಯಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಆದರೆ, ನ್ಯಾಯಕ್ಕಾಗಿ ನಮ್ಮ ಸರಕಾರ ಹೋರಾಡುತ್ತದೆ ಎಂದರು.

‘ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ. ಎಲ್ಲಾದರೂ ಇರು, ಎಂತಾದರೂ ಇರು. ಮೊದಲು ಕನ್ನಡಿಗನಾಗಿರು’ ಎಂಬ ರಾಷ್ಟ್ರಕವಿ ಕುವೆಂಪು ಅವರ ಮಂತ್ರವನ್ನು ಸದಾ ಜಪಿಸುವ ವಾತಾವರಣ ನಿರ್ಮಾಣ ಆಗಬೇಕು ಎಂದ ಅವರು, ಕನ್ನಡಕ್ಕಾಗಿ ಹೋರಾಟ ಮಾಡಿರುವ ಕನ್ನಡಿಗರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಸರಕಾರ ಹಿಂಪಡೆಯಲಿದೆ ಎಂದು ಭರವಸೆ ನೀಡಿದರು.

ಸಮಾರಂಭದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮಿ, ಚಿತ್ರದುರ್ಗದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಗೃಹ ಸಚಿವ ರಾಮಲಿಂಗಾರೆಡ್ಡಿ, ನಾಡೋಜ ಹಂಪ ನಾಗರಾಜಯ್ಯ, ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X