ಸಚಿವ ಬೇಗ್ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು, ಅ.14: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ರೋಷನ್ಬೇಗ್ ವಿರುದ್ಧ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಮೂರು ದಿನಗಳ ಹಿಂದೆ ಪುಲಿಕೇಶಿ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ರೋಷನ್ಬೇಗ್ ಅವರು, ಪ್ರಧಾನಿಯವರ ಬಗ್ಗೆ ತಮಿಳು ಭಾಷೆಯಲ್ಲಿ ಅಶ್ಲೀಲ ಪದ ಬಳಕೆ ಮಾಡಿರುವ ವೀಡಿಯೊ ತುಣುಕು ಸಾಮಾಜಿಕ ತಾಣಗಳಲ್ಲಿ ಹರಿದಾಡಿತ್ತು. ರಾಷ್ಟ್ರದ ಉನ್ನತ ಸ್ಥಾನದಲ್ಲಿರುವ ಪ್ರಧಾನಿಯವರನ್ನು ಅಶ್ಲೀಲ ಪದಗಳಿಂದ ನಿಂದಿಸುವ ಮೂಲಕ ಸಚಿವ ಬೇಗ್ ಅವರು ಸಮಸ್ತ ಭಾರತೀಯರನ್ನೇ ಅವಮಾನಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ದೂರಿನಲ್ಲಿ ವಿನಂತಿಸಿಕೊಂಡಿದ್ದಾರೆ.
Next Story





