Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದಲ್ಲಿ...

ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದಲ್ಲಿ ಆರೆಸೆಸ್ಸ್ ಮಾಜಿ ಪ್ರಚಾರಕನಿಂದ ದೂರು

ಬಿ.ವೈ.ರಾಘವೇಂದ್ರ ಒಡೆತನದ ಶಿಕ್ಷಣ ಸಂಸ್ಥೆಯಿಂದ ಕೆರೆ ಭೂಮಿ ಒತ್ತುವರಿ

ವಾರ್ತಾಭಾರತಿವಾರ್ತಾಭಾರತಿ14 Oct 2017 8:09 PM IST
share
ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದಲ್ಲಿ ಆರೆಸೆಸ್ಸ್ ಮಾಜಿ ಪ್ರಚಾರಕನಿಂದ ದೂರು

ಬೆಂಗಳೂರು, ಅ. 14: ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಪುತ್ರ ಶಾಸಕ ಬಿ.ವೈ.ರಾಘವೇಂದ್ರ ಒಡೆತನದ ಶಿಕ್ಷಣ ಸಂಸ್ಥೆ ಕೆರೆ ಭೂಮಿ ಒತ್ತುವರಿ ಮಾಡಿದ್ದು, ಕೂಡಲೇ ತೆರವು ಮಾಡಬೇಕು’ ಎಂದು ಕೋರಿ ಆರೆಸ್ಸೆಸ್ ಮಾಜಿ ಪ್ರಚಾರಕ ಎನ್.ಹನುಮೇಗೌಡ ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಶನಿವಾರ ಸಂಜೆ 4:35ರ ಸುಮಾರಿಗೆ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೆರೆ ಭೂಮಿ ಒತ್ತುವರಿಯ ಬಗ್ಗೆ ಕೂಡಲೇ ತಹಶೀಲ್ದಾರರಿಂದ ವರದಿ ಪಡೆದು ಒತ್ತುವರಿ ಮಾಡಿರುವ ಶಿಕ್ಷಣ ಸಂಸ್ಥೆ ಪದಾಧಿಕಾರಿಗಳು, ರೈತರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಹೋಬಳಿ ನಂದಿಹಳ್ಳಿ ಗ್ರಾಮದ ಸರ್ವೇ ನಂ.31ರಲ್ಲಿ ಕೆರೆ ಇದ್ದು ‘ದೊಡ್ಡಕೆರೆ’ ಎಂದು ಸರಕಾರಿ ದಾಖಲೆಗಳಲ್ಲಿ ದಾಖಲಾಗಿದೆ. ಆದರೆ, ಇದೇ ನಂದಿಹಳ್ಳಿ ಗ್ರಾಮದ ಕೆರೆ ಪಕ್ಕದ ಸರ್ವೇ ನಂ.38ರಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಕುಮದ್ವತಿ ಶಿಕ್ಷಣ ಮಹಾ ವಿದ್ಯಾಲಯ ಎಂಬ ಕಾಲೇಜು ನಡೆಸುತ್ತಿದೆ. ಈ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷ, ಶಾಸಕ ಬಿ.ವೈ.ರಾಘವೇಂದ್ರ, ಅಧ್ಯಕ್ಷ ಬಿ.ಶಿವಕುಮಾರ್, ಕಾರ್ಯದರ್ಶಿ ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ, ಬಿ.ವೈ.ವಿಜಯೇಂದ್ರ ಖಜಾಂಚಿಗಳಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೆರೆಯ ಪಕ್ಕದಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಐದಾರು ಎಕರೆ ಕೆರೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಅದರಲ್ಲಿ ಆಟದ ಮೈದಾನ ನಿರ್ಮಿಸಿದ್ದು, ತಂತಿ ಬೇಲಿ ಹಾಕಿದ್ದರಿಂದ ಕೆರೆಯ ವಿಸ್ತೀರ್ಣ ಕಡಿಮೆಯಾಗಿದೆ. ಅಲ್ಲದೆ, ಕೆರೆಯಲ್ಲಿ ನೀರು ನಿಲ್ಲುವುದು ಕಡಿಮೆಯಾಗಿದೆ ಎಂದು ಹನುಮೇಗೌಡ ದೂರಿನಲ್ಲಿ ತಿಳಿಸಿದ್ದಾರೆ.

ಕೆರೆ ಭೂಮಿ ಒತ್ತುವರಿಗೆ ನಕ್ಷೆ ಸಹಿತ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಂಗ್ರಹಿಸಿರುವ ಎನ್.ಹನುಮೇಗೌಡ ನಂದಿಹಳ್ಳಿ ಗ್ರಾಮದ ಸರ್ವೇ ನಂ.31ರಲ್ಲಿನ 25 ಎಕರೆ 27 ಗುಂಟೆ ಕೆರೆ ಜಮೀನಿನ ಪೈಕಿ ಐದಾರು ಎಕರೆ ಒತ್ತುವರಿಯಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ಶಾಸಕ ಬಿ.ವೈ.ರಾಘವೇಂದ್ರ ಒಡೆತನದ ಶಿಕ್ಷಣ ಸಂಸ್ಥೆ ಕೆರೆ ಭೂಮಿ ಒತ್ತುವರಿ ಮಾಡಿದ್ದು, ತಹಶಿಲ್ದಾರರಿಂದ ಕೂಡಲೇ ವರದಿ ಪಡೆದು ಒತ್ತುವರಿ ತೆರವು ಮಾಡಬೇಕು. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
-ಎನ್.ಹನುಮೇಗೌ ,ಆರೆಸ್ಸೆಸ್ ಮಾಜಿ ಪ್ರಚಾರಕ, ದೂರದಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X