Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐದು ತಲೆಮಾರು ಕಂಡ ಐಸುಮ್ಮ: ಗ್ರಾಮದ...

ಐದು ತಲೆಮಾರು ಕಂಡ ಐಸುಮ್ಮ: ಗ್ರಾಮದ ಹಿರಿಯಜ್ಜಿಯ ಆಶೀರ್ವಾದ ಪಡೆದ ಶಾಸಕಿ

ವಾರ್ತಾಭಾರತಿವಾರ್ತಾಭಾರತಿ14 Oct 2017 8:24 PM IST
share
ಐದು ತಲೆಮಾರು ಕಂಡ ಐಸುಮ್ಮ: ಗ್ರಾಮದ ಹಿರಿಯಜ್ಜಿಯ ಆಶೀರ್ವಾದ ಪಡೆದ ಶಾಸಕಿ

ಪುತ್ತೂರು, ಅ.14: ಐದು ತಲೆಮಾರು ಕಂಡ ಶತಾಯುಷಿ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಶೇಕಮಲೆ ನಿವಾಸಿ ಐಸುಮ್ಮರನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಶನಿವಾರ ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆದುಕೊಂಡರು.

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳಿದ್ದ ಶಾಸಕಿ ಅವರು ಇದೇ ಗ್ರಾಮದಲ್ಲಿ ವಾಸವಾಗಿರುವ ಗ್ರಾಮದ ಅತ್ಯಂತ ಹಿರಿಯ ಮಹಿಳೆ 101 ವರ್ಷ ಪ್ರಾಯದ ಐಸುಮ್ಮ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಕಣ್ಣು ದೃಷ್ಟಿ ಕಳೆದುಕೊಂಡು ನಡೆದಾಡಲೂ ಸಾಧ್ಯವಾಗದೆ ಇರುವ ಐಸುಮ್ಮ ಅವರ ನೆನಪು ಶಕ್ತಿ ಮತ್ತು ಶ್ರವಣ ಶಕ್ತಿ ಮಾತ್ರ ಮಾಸಿಲ್ಲ. ಶಕುಂತಳಾ ಶೆಟ್ಟಿ ತನ್ನನ್ನು ಭೇಟಿ ಮಾಡಲು ಬಂದ ವಿಷಯ ಗೊತ್ತಾದಾಗ ಬಾರೀ ಸಂತೋಷಗೊಂಡ ಐಸುಮ್ಮ ಅವರು ಶಾಸಕಿಯೊಂದಿಗೆ ಕೆಲ ಕಾಲ ಸಂಭಾಷಣೆ ನಡೆಸಿದರು. ತಾನು ಒಂದು ಬಾರಿಯೂ ಮತದಾನದ ಹಕ್ಕನ್ನು ಚಲಾಯಿಸದೆ ಬಿಟ್ಟಿಲ್ಲ ಎನ್ನತ್ತಾ ಮಾಜಿ ಪ್ರಧಾನಿ ಇಂದಿರಾಗಾಂಧಿಯ ನೆನಪುಗಳನ್ನು ಮೆಲುಕು ಹಾಕಿದರು. ಸ್ಥಳದಲ್ಲಿವರು ಈ ಹಿರಿಯ ಅಜ್ಜಿಯ ನೆನಪು ಶಕ್ತಿಯನ್ನು ಕಂಡು ಬೆರಗಾದರು. ಇಂದಿರಾಗಾಂಧಿ ಬಗ್ಗೆ ನನಗೆ ಅಭಿಮಾನವಿದೆ. ಅವರಿಗೂ ಓಟು ಹಾಕಿದ್ದೆ, ನಿಮಗೂ ಹಾಕಿದ್ದೇನೆ. ನಿಮಗೆ ಒಳ್ಳೆಯದಾಗಲಿ ನೀವು ಮಂತ್ರಿಯಾಗಬೇಕು ಎಂದು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರು ನಾನು ಮಂತ್ರಿಯಾದಲ್ಲಿ ಮೊದಲಿಗೆ ನಿಮ್ಮಲ್ಲಿಗೆ ಬಂದು ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಐಸುಮ್ಮ ಅವರು ಐದು ತಲೆಮಾರು ಕಂಡ ಗ್ರಾಮದ ಹಿರಿಯ ಮಹಿಳೆಯಾಗಿದ್ದು, ಮತದಾನ ಪ್ರಾರಂಭವಾದ ಬಳಿಕ ಈತನಕ ಒಂದು ಬಾರಿಯೂ ಮತದಾನ ಮಾಡದೆ ಉಳಿದವರಲ್ಲ. ಆರೋಗ್ಯವಾಗಿದ್ದ ಕಾಲದಲ್ಲಿ ನಡೆದುಕೊಂಡೇ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡುತ್ತಿದ್ದ ಅವರು ಇದೀಗ ಕಳೆದ ಕೆಲವು ವರ್ಷಗಳಿಂದ ತನ್ನ ಮೊಮ್ಮಗ ಸಾಮಾಜಿಕ ಕಾರ್ಯಕರ್ತ ಎಸ್.ಪಿ. ಬಶೀರ್ ಅವರ ಸಹಕಾರದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಮಲಗಿದ್ದಲ್ಲೇ ಇರುವ ಐಸುಮ್ಮರನ್ನು ಮೊಮ್ಮಗ ಎಸ್ ಪಿ ಬಶೀರ್ ಸ್ವತಹ ಎತ್ತಿಕೊಂಂಡು ಹೋಗಿ ಮತ ಚಲಾಯಿಸುವ ವ್ಯವಸ್ಥೆ ಮಾಡಿಸುತ್ತಾರೆ. ಐಸಮ್ಮ ಅವರು 14 ಮಕ್ಕಳಿದ್ದರು, ಈ ಪೈಕಿ 7 ಮಕ್ಕಳು ಎಳೆ ಪ್ರಾಯದಲ್ಲಿಯೇ ತೀರಿಕೊಂಡಿದ್ದಾರೆ. ಓರ್ವ ಪುತ್ರ ಮತ್ತು ಓರ್ವ ಪುತ್ರಿ ಕಳೆದ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದು, ಇದೀಗ 6 ಮಕ್ಕಳು, 48 ಮೊಮ್ಮಕ್ಕಳು, 82 ಮರಿಮಕ್ಕಳು ಇದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X