Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಖ: 24 ಗಂಟೆಯಲ್ಲಿ 100 ಐಸಿಸ್ ಉಗ್ರರು...

ರಾಖ: 24 ಗಂಟೆಯಲ್ಲಿ 100 ಐಸಿಸ್ ಉಗ್ರರು ಶರಣು

ವಾರ್ತಾಭಾರತಿವಾರ್ತಾಭಾರತಿ14 Oct 2017 9:57 PM IST
share
ರಾಖ: 24 ಗಂಟೆಯಲ್ಲಿ 100 ಐಸಿಸ್ ಉಗ್ರರು ಶರಣು

ಸಿರಿಯ, ಅ.14: ರಾಖ ಪಟ್ಟಣದ ಸಂಪೂರ್ಣ ನಿಯಂತ್ರಣಕ್ಕಾಗಿ ಅಮೆರಿಕ ಬೆಂಬಲಿತ ಸಿರಿಯನ್ ಡೆಮಾಕ್ರಟಿಕ್ ಪಡೆ(ಎಸ್‌ಟಿಎಫ್) ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದು ಕಳೆದ 24 ಗಂಟೆಯಲ್ಲಿ ಸುಮಾರು 100ರಷ್ಟು ಐಸಿಸ್ ಉಗ್ರರು ಶರಣಾಗಿದ್ದಾರೆ ಎಂದು ಸಿರಿಯದ ಅಧಿಕಾರಿಯೋರ್ವರು ತಿಳಿಸಿದ್ದಾರೆ.

  ರಾಖ ಸ್ಥಳೀಯಾಡಳಿತ ಮತ್ತು ಬುಡಕಟ್ಟು ಸಂಧಾನಕಾರರಿಗೆ ಇವರು ಶರಣಾಗತಿಯ ಸಂದೇಶ ಕಳುಹಿಸಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ. ಎಸ್‌ಡಿಎಫ್ ನೇಮಿಸಿರುವ ನಗರದ ತಾತ್ಕಾಲಿಕ ಆಡಳಿತ ವ್ಯವಸ್ಥೆಯು ಬುಡಕಟ್ಟು ಮುಖಂಡರ ಮೂಲಕ ನಾಗರಿಕರನ್ನು ಪಟ್ಟಣದಿಂದ ಸುರಕ್ಷಿತವಾಗಿ ಹೊರಗೆ ತರುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಒಂದೊಮ್ಮೆ ಐಸಿಸ್ ಉಗ್ರರು ಸಿರಿಯಾದಲ್ಲಿ ತಮ್ಮ ರಾಜಧಾನಿಯನ್ನಾಗಿಸಿಕೊಂಡಿದ್ದ ರಾಖ ಪಟ್ಟಣದಿಂದ ಇದುವರೆಗೆ ನೂರಾರು ನಾಗರಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.

 ಸುಮಾರು 100ರಷ್ಟು ಐಸಿಸ್ ಉಗ್ರರು ಶರಣಾಗಿದ್ದು ಇವರನ್ನು ರಾಖದಿಂದ ಹೊರಗೆ ಕರೆದೊಯ್ಯಲಾಗಿದೆ. ಹೀಗೆ ಶರಣಾದವರೆಲ್ಲಾ ಸ್ಥಳೀಯ ಹೋರಾಟಗಾರರು. ವಿದೇಶಿ ಮೂಲದ ಉಗ್ರರು ಇನ್ನೂ ಶರಣಾಗಿಲ್ಲ. ಆದರೆ ಯಾವ ಉಗ್ರರನ್ನೂ ರಾಖ ಬಿಟ್ಟು ಹೊರ ತೆರಳದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

     ಸಿರಿಯಾದಲ್ಲಿ ಕಾರ್ಯಾಚರಿಸುತ್ತಿದ್ದ ಐಸಿಸ್ ತಂಡದ ಎಲ್ಲಾ ಸಿರಿಯನ್ ಉಗ್ರರು ಕಳೆದ ಕೆಲ ದಿನದ ಹಿಂದೆಯೇ ಸಿರಿಯಾವನ್ನು ತೊರೆದಿದ್ದು ಅಜ್ಞಾತ ಸ್ಥಳದತ್ತ ತೆರಳಿದ್ದಾರೆ ಎಂದು ಬ್ರಿಟನ್ ಮೂಲದ ಮಾನವ ಹಕ್ಕುಗಳ ಆಯೋಗದ ಸಿರಿಯ ವೀಕ್ಷಣಾ ತಂಡದ ಮುಖ್ಯಸ್ಥ ರಮಿ ಅಬ್ದೆಲ್ ರಹ್ಮಾನ್ ತಿಳಿಸಿದ್ದಾರೆ. ನಗರದಲ್ಲಿ ಇನ್ನೂ ಸುಮಾರು 150ರಷ್ಟು ವಿದೇಶಿ ಐಸಿಸ್ ಉಗ್ರರು ನೆಲೆಸಿದ್ದು ಇವರನ್ನು ಶರಣಾಗುವಂತೆ ಮನವೊಲಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ರಹ್ಮಾನ್ ತಿಳಿಸಿದ್ದಾರೆ. ಪೂರ್ವ ಸಿರಿಯಾದಲ್ಲಿರುವ ಡೈರ್ ಎಝಾರ್ ಪ್ರದೇಶಕ್ಕೆ ಒಂದೇ ತಂಡವಾಗಿ ತೆರಳು ತಮಗೆ ಅನುಮತಿ ನೀಡಬೇಕೆಂದು ವಿದೇಶಿ ಹೋರಾಟಗಾರರು ಬೇಡಿಕೆ ಮುಂದಿರಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಆದರೆ ಇದನ್ನು ಕುರ್ಡಿಷ್ ಪೀಪಲ್ಸ್ ಪ್ರೊಟೆಕ್ಷನ್ ಯುನಿಟ್ಸ್‌ನ ವಕ್ತಾರ ನೂರಿ ಮಹ್ಮೂದ್ ತಳ್ಳಿಹಾಕಿದ್ದಾರೆ. ಶರಣಾಗತಿಯ ಕುರಿತು ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X