Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಏಕದಿನ: ಪಾಕ್‌ಗೆ ಜಯ

ಮೊದಲ ಏಕದಿನ: ಪಾಕ್‌ಗೆ ಜಯ

ಬಾಬರ್ ಆಝಂ ಆಕರ್ಷಕ ಶತಕ

ವಾರ್ತಾಭಾರತಿವಾರ್ತಾಭಾರತಿ14 Oct 2017 11:52 PM IST
share
ಮೊದಲ ಏಕದಿನ: ಪಾಕ್‌ಗೆ ಜಯ

ದುಬೈ, ಅ.14: ಬಾಬರ್ ಆಝಂ ಆಕರ್ಷಕ ಶತಕ ಹಾಗೂ ಶುಐಬ್ ಮಲಿಕ್ ಬಿರುಸಿನ ಅರ್ಧಶತಕದ ಕೊಡುಗೆಯ ನೆರವಿನಿಂದ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು 83 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ತಂಡ ಆಝಂ(103 ರನ್, 131 ಎಸೆತ) ಹಾಗೂ ಮಲಿಕ್(81 ರನ್, 61 ಎಸೆತ) ನೆರವಿನಿಂದ 6 ವಿಕೆಟ್‌ಗಳ ನಷ್ಟಕ್ಕೆ 292 ರನ್ ಗಳಿಸಿತು.

ಗೆಲ್ಲಲು ಕಠಿಣ ಸವಾಲು ಪಡೆದಿದ್ದ ಶ್ರೀಲಂಕಾ ತಂಡ ಪಾಕ್ ವೇಗಿಗಳಾದ ಹಸನ್ ಅಲಿ(3-36) ಹಾಗೂ ರುಮಾನ್ ರೇಯ್ಸ(3-49) ದಾಳಿಗೆ ಸಿಲುಕಿ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಟೆಸ್ಟ್ ಸರಣಿಯನ್ನು 0-2 ಅಂತರದಿಂದ ಸೋತಿರುವ ಪಾಕಿಸ್ತಾನ ತಂಡ ನಾಲ್ಕು ತಿಂಗಳ ಬಳಿಕ ಆಡಿರುವ ತನ್ನ ಮೊದಲ ಏಕದಿನ ಪಂದ್ಯದಲ್ಲಿ ಶುಭಾರಂಭ ಮಾಡಿತು. ಇಂಗ್ಲೆಂಡ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ ಬಳಿಕ ಪಾಕ್ ಯಾವುದೇ ಪಂದ್ಯವನ್ನು ಆಡಿಲ್ಲ.

ಶ್ರೀಲಂಕಾದ ಪರ ಅಗ್ರ ಕ್ರಮಾಂಕದಲ್ಲಿ ಲಹಿರು ತಿರಿಮನ್ನೆ(53) ಮಾತ್ರ ಒಂದಷ್ಟು ಹೋರಾಟ ನೀಡಿದರು. ಶ್ರೀಲಂಕಾ 132 ರನ್‌ಗೆ 7 ವಿಕೆಟ್ ಕಳೆದುಕೊಂಡಿತ್ತು. ಆಗ 8ನೆ ವಿಕೆಟ್‌ಗೆ 68 ರನ್ ಜೊತೆಯಾಟ ನಡೆಸಿದ ಅಕಿಲಾ ಧನಂಜಯ(ಅಜೇಯ 50) ಹಾಗೂ ಜೆಫ್ರಿ ವಾಂಡರ್‌ಸೆ(25) ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ನಿರೊಶನ್ ಡಿಕ್ವೆಲ್ಲಾ ಹಾಗೂ ದಿನೇಶ್ ಚಾಂಡಿಮಾಲ್‌ರನ್ನು ಸತತ ಓವರ್‌ನಲ್ಲಿ ಪೆವಿಲಿಯನ್‌ಗೆ ಕಳುಹಿಸಿದ ಎಡಗೈ ವೇಗಿ ರೇಯ್ಸೆ ಶ್ರೀಲಂಕಾಕ್ಕೆ ಆರಂಭಿಕ ಆಘಾತ ನೀಡಿದರು. ಪಾರ್ಟ್‌ಟೈಂ ಸ್ಪಿನ್ನರ್ ಮುಹಮ್ಮದ್ ಹಫೀಝ್ ನಾಯಕ ಉಪುಲ್ ತರಂಗ(18) ವಿಕೆಟ್‌ನ್ನು ಕಬಳಿಸಿದರು. ಎರಡು ಎಸೆತಗಳ ಅಂತರದಲ್ಲಿ ಕುಶಾಲ್ ಮೆಂಡಿಸ್ ಹಾಗೂ ಮಿಲಿಂದ ಸಿರಿವರ್ದನ ವಿಕೆಟ್‌ನ್ನು ಕಬಳಿಸಿರುವ ಮಧ್ಯಮ ವೇಗಿ ಅಲಿ ಶ್ರೀಲಂಕಾ 67 ರನ್‌ಗೆ 5 ವಿಕೆಟ್ ಕಳೆದುಕೊಳ್ಳಲು ಕಾರಣರಾದರು.

ಇದಕ್ಕೆ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕಿಸ್ತಾನ ಆರಂಭಿಕ ಆಟಗಾರ ಅಹ್ಮದ್ ಶೆಹಝಾದ್ ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತು. ಫಖ್ಹರ್ ಝಮಾನ್ ಹಾಗೂ ಆಝಂ 2ನೆ ವಿಕೆಟ್‌ಗೆ 75 ರನ್ ಸೇರಿಸಿ ತಂಡವನ್ನು ಆಧರಿಸಿದರು. ಎಡಗೈ ಬ್ಯಾಟ್ಸ್‌ಮನ್ ಝಮಾನ್ 42 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಇರುವ 45 ರನ್ ಗಳಿಸಿದರು.

ಆಝಂ ಹಾಗೂ ಮಲಿಕ್ ತಂಡಕ್ಕೆ ಆಧಾರವಾದರು. ಈ ಜೋಡಿ ನಾಲ್ಕನೆ ವಿಕೆಟ್‌ಗೆ 139 ರನ್ ಜೊತೆಯಾಟ ನಡೆಸಿತು. ಕೇವಲ 61 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್‌ಗಳನ್ನೊಳಗೊಂಡ 81 ರನ್ ಗಳಿಸಿದ ಮಲಿಕ್ 47ನೆ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

128 ಎಸೆತಗಳಲ್ಲಿ ಶತಕ ಪೂರೈಸಿದ ಆಝಂ ಕೇವಲ 5 ಬೌಂಡರಿ ಬಾರಿಸಿದರು. ಕೊನೆಯ 10 ಓವರ್‌ಗಳಲ್ಲಿ 89 ರನ್ ಕಲೆ ಹಾಕಿದ ಪಾಕಿಸ್ತಾನ 6 ವಿಕೆಟ್‌ಗಳ ನಷ್ಟಕ್ಕೆ 292 ರನ್ ಗಳಿಸಿತು.

ಪಾಕಿಸ್ತಾನ-ಶ್ರೀಲಂಕಾ ನಡುವಿನ ಉಳಿದ ಪಂದ್ಯಗಳು ಅಬುಧಾಬಿ(ಅ.16,18) ಹಾಗೂ ಶಾರ್ಜಾದಲ್ಲಿ (ಅ.20 ಹಾಗೂ 23) ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X