ಸ್ಕೂಟರ್ ಕಳವು: ಆರೋಪಿ ಸೆರೆ
ಮುಲ್ಕಿ, ಅ. 15: ಇಲ್ಲಿನ ಠಾಣಾ ವ್ಯಾಪ್ತಿಯ ಕೆಎಸ್ರಾವ್ ನಗರದ ಲಿಂಗಪ್ಪಯ್ಯಕಾಡು ಆಂಜನೇಯ ದೇವಸ್ಥಾನದ ಬಳಿಯಿಂದ ಸ್ಕೂಟರನ್ನು ಕಳವು ಮಾಡಿದ್ದಾನೆ ಎನ್ನಲಾದ ಕೆರೆಕಾಡು ನಿವಾಸಿ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಮಣಿಕಂಠ ಎಂಬವರು ತಮ್ಮ ಅಂಗಡಿಯ ಎದುರು ನಿಲ್ಲಿಸಿದ್ದ ಸ್ಕೂಟರ್ ಕಳವಾಗಿತ್ತು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುಲ್ಕಿ ಪೊಲೀಸರು ಆರೋಪಿ ಬಾಲಕನನ್ನು ಸ್ಕೂಟರ್ ಸಮೇತ ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Next Story