Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾತ್ರದ ಒಳಗೆ ಪರಕಾಯಪ್ರವೇಶ ಮಾಡುವ ಶಕ್ತಿ...

ಪಾತ್ರದ ಒಳಗೆ ಪರಕಾಯಪ್ರವೇಶ ಮಾಡುವ ಶಕ್ತಿ ಚಿಟ್ಟಾಣಿಯವರಿಗಿತ್ತು : ಮಂಟಪ ಪ್ರಭಾಕರ ಉಪಾಧ್ಯಾಯ

ವಾರ್ತಾಭಾರತಿವಾರ್ತಾಭಾರತಿ15 Oct 2017 11:15 PM IST
share
ಪಾತ್ರದ ಒಳಗೆ ಪರಕಾಯಪ್ರವೇಶ ಮಾಡುವ ಶಕ್ತಿ ಚಿಟ್ಟಾಣಿಯವರಿಗಿತ್ತು : ಮಂಟಪ ಪ್ರಭಾಕರ ಉಪಾಧ್ಯಾಯ

ಬೆಂಗಳೂರು, ಅ. 15: ಏಕವ್ಯಕ್ತಿ ಯಕ್ಷಗಾನಕ್ಕೆ ಕಾರಣ ಹಾಗೂ ಸ್ಪೂರ್ತಿ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಾಗಿದ್ದಾರೆ. ಪಾತ್ರದ ಒಳಗೆ ಪರಕಾಯಪ್ರವೇಶ ಮಾಡಿ ಅದನ್ನು ಅಭಿವ್ಯಕ್ತಪಡಿಸುತ್ತಿದ್ದ ಕಲೆ ಚಿಟ್ಟಾಣಿಯವರಿಗಿತ್ತು ಎಂದು ಖ್ಯಾತ ಕಲಾವಿದರಾದ ಮಂಟಪ ಪ್ರಭಾಕರ ಉಪಾಧ್ಯಾಯ ಹೇಳಿದರು.

ಮಲ್ಲೇಶ್ವರಂ ನಲ್ಲಿರುವ ಅಖಿಲ ಹವ್ಯಕ ಮಹಾಸಭೆಯಲ್ಲಿ ನಡೆದ "ಚಿಟ್ಟಾಣಿ ನಮನ" ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಟಪ ಪ್ರಭಾಕರ ಉಪಾಧ್ಯಾಯರು, ಮತ್ತೆಮತ್ತೆ ನೆನಪಿಸಿಕೊಳ್ಳುವಂತದ್ದೇ ಶ್ರದ್ಧಾಂಜಲಿ. ಅಂತಹ ಕಲಾತಪಸ್ವಿಯ ಜೊತೆ ಇರಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಯಕ್ಷಗಾನದ ಕುರಿತಾಗಿ ಅವರಿಗಿದ್ದ ಬದ್ಧತೆ, ರೀತಿನೀತಿ, ಶಿಸ್ತು, ಸ್ಪರ್ಧಾಮನೋಭಾವ ಬೇರೆಯಾರಲೂ ಕಾಣಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಹವ್ಯಕ ಮಹಾಸಭಾದ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ಅವರು ಮಾತನಾಡಿ, ಚಿಟ್ಟಾಣಿ ಅವರದ್ದು ನೇರ ವ್ಯಕ್ತಿತ್ವ ಮಾತ್ರವಲ್ಲ, ಅವರದ್ದು ಮಾದರೀ ವ್ಯಕ್ತಿತ್ವ. ಸರಳ ಸಜ್ಜನಿಕೆಯವರಾದ ಅವರು ರಂಗದ ಮೇಲೆ ಹಾಗೂ ಬದುಕಿನಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹವ್ಯಕ ಸಮಾಜದ ಹೆಮ್ಮೆಯ ಪುತ್ರರಾದ ಅವರು ಸರ್ವ ಸಮಾಜದ ಹೆಮ್ಮೆ ಎಂದು ಹೇಳಿದರು.

ಚಿಟ್ಟಾಣಿಯವರ ಆಪ್ತ ಸ್ವಭಾವ, ಅತ್ಮೀಯ ನಡವಳಿಕೆಗಳು ಅವರ ವಿಶೇಷತೆಗಳಾಗಿತ್ತು, ಅವರಿಂದ ರಂಗದ ಮೇಲೆ ಹಾಗೂ ನಿತ್ಯ ಜೀವನದಲ್ಲಿ ಕಲಿಯ ಬೇಕಾದ್ದು ಬಹಳಷ್ಟಿದೆ. ಆ ಮೇರು ವ್ಯಕ್ಟಿತ್ವಕ್ಕೆ ಮಾತಿನ ಬದಲು ಮೌನವಾಗಿಯೇ ನಮನ ಸಲ್ಲಿಸಲು ಬಯಸುತ್ತೇನೆ ಎಂಬು ಚಿಟ್ಟಾಣಿಯವರ ಕುರಿ ತಾಗಿ ಚಲನಚಿತ್ರ ನಟರಾದ ನೀರ್ನಳ್ಳಿ ರಾಮಕೃಷ್ಣ ಹೆಗಡೆ ಅವರು ಹೇಳಿದರು.

ಹವ್ಯಕ ಮಹಾಸಭೆಯ ಯಕ್ಷಗಾನ - ಜಾನಪದ ಸಂಚಾಲಕರಾದ ಸದಾನಂದ ಹೆಗಡೆ, ವಿಜಯೀಂದ್ರ ಹೊಳ್ಳ, ಗೋಪಾಲಕೃಷ್ಣ ಹುಕ್ಲಮಕ್ಕಿ,  ಜಿ ಎಸ್ ಕೋಡೆ ಚಿಟ್ಟಾಣಿಯವರಿಗೆ ನುಡಿನಮನ. ಡಾ. ಶ್ರೀಪಾದ ಹೆಗಡೆ ಕಾವ್ಯನಮನ ಸಲ್ಲಿಸಿದರೆ, ಭರತ ಕಡಬ ಚಿತ್ರನಮನ ಸಲ್ಲಿಸಿದರು, ಯಕ್ಷಗಾನ ಕಲಾವಿದರು ಯಕ್ಷನೃತ್ಯ ಹಾಗೂ ಗಾನದ ಮೂಲಕ ನಮನ ಸಲ್ಲಿಸಿದರು.

ಸಭೆ ಮೌನ ಹಾಗೂ ರಾಮತಾರಕದ ಜೊತೆ ಶಾಂತಿಮಂತ್ರ ಪಠಿಸಿ ಯಕ್ಷತಪಸ್ವಿಗೆ ನಮನ ಸಲ್ಲಿಸಲಾಯಿತು. ಮಹಾಸಭೆಯ ಉಪಾಧ್ಯಕ್ಷ ಕೆಕ್ಕರು ಶ್ರೀಧರ್ ಭಟ್, ಗೌರವ ಕಾರ್ಯದರ್ಶಿಗಳಾದ ವೇಣುವಿಘ್ನೇಶ್, ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್, ಶ್ರೀಧರ ಭಟ್ ಸಾಲೆಕೊಪ್ಪ ಕೋಶಾಧಿಕಾರಿಗಳಾದ ಪ್ರಕಾಶ್ ಕಲಸಿ ಸೇರಿದಂತೆ ಪದಾಧಿಕಾರಿಗಳು ಸದಸ್ಯರು ಹಾಗೂ ಚಿಟ್ಟಾಣಿ ಅಭಿಮಾನಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X