Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪ್ರಪ್ರಥಮ ಸಾವಯವ ಸಂತೆಗೆ ಜನರ...

ಉಡುಪಿ: ಪ್ರಪ್ರಥಮ ಸಾವಯವ ಸಂತೆಗೆ ಜನರ ಲಗ್ಗೆ; ಎರಡು ಟನ್ ತರಕಾರಿ ಎರಡು ಗಂಟೆಯಲ್ಲಿ ಮಾರಾಟ

ವಾರ್ತಾಭಾರತಿವಾರ್ತಾಭಾರತಿ15 Oct 2017 11:31 PM IST
share
ಉಡುಪಿ: ಪ್ರಪ್ರಥಮ ಸಾವಯವ ಸಂತೆಗೆ ಜನರ ಲಗ್ಗೆ; ಎರಡು ಟನ್ ತರಕಾರಿ ಎರಡು ಗಂಟೆಯಲ್ಲಿ ಮಾರಾಟ

ಉಡುಪಿ, ಅ.15: ದೊಡ್ಡಣಗುಡ್ಡೆಯ ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿರುವ ರೈತ ಸೇವಾ ಕೇಂದ್ರದಲ್ಲಿ ಇಂದು ಪ್ರಾರಂಭಗೊಂಡ ಜಿಲ್ಲೆಯ ಪ್ರಪ್ರಥಮ ಸಾವಯವ ಸಂತೆ ಜನರಿಂದ ಅದ್ಭುತ ಪ್ರತಿಕ್ರಿಯೆಯನ್ನು ಪಡೆದಿದೆ. ಜಿಲ್ಲೆಯ ನಾನಾ ಭಾಗಗಳಿಂದ ಸಾವಯವ ರೈತರು ಬೆಳೆದು ತಂದ ಎರಡು ಟನ್ ತರಕಾರಿ ಕೇವಲ ಎರಡು ಗಂಟೆಗಳಲ್ಲಿ ಖರ್ಚಾಗಿ ಹೋಗಿದೆ.

ಬೆಳಗ್ಗೆ 8:30ಕ್ಕೆ ಸಂತೆ ಪ್ರಾರಂಭಗೊಳ್ಳುತಿದ್ದಂತೆ ಅರ್ಧಗಂಟೆಯೊಳಗೆ ಹೆಚ್ಚಿನ ತರಕಾರಿ ಮಾರಾಟವಾದವು. ಹತ್ತು ಗಂಟೆ ಸುಮಾರಿಗೆ ಟೊಮೆಟೊ,ಮೆಣಸಿನ ಕಾಯಿ, ದೊಣ್ಣೆ ಮೆಣಸು ಸೇರಿದಂತೆ ಕೆಲವೇ ಕೆಲವು ತರಕಾರಿಗಳು ಉಳಿದಿದ್ದವು.

ಕುಂದಾಪುರ ತಾಲೂಕಿನ ಕೆಂಚನೂರು, ಜಪ್ತಿ, ಕೊಕ್ಕರ್ಣೆ, ಕುಕ್ಕೆಹಳ್ಳಿ, ಕಾರ್ಕಳ, ಚಿಕ್ಕಮಗಳೂರು ಕಡೆಯ ಸಾವಯವ ರೈತರು ಇಂದಿನ ಸಂತೆಯಲ್ಲಿ ತಾವು ಬೆಳೆದ ತರಕಾರಿಗಳೊಂದಿಗೆ ಭಾಗವಹಿಸಿ, ತಂದ ಎಲ್ಲಾ ತರಕಾರಿ ಖಾಲಿಯಾದ ಖುಷಿಯಲ್ಲಿ ಊರಿಗೆ ಮರಳಿದರು.

 ಜನರಿಂದ ಇಂಥ ಪ್ರತಿಕ್ರಿಯೆ ಸಿಗಬಹುದೆಂಬ ನಿರೀಕ್ಷೆ ಇಲ್ಲದ ಕಾರಣ, ನಾನು ಬೆಳೆದ ಎಲ್ಲಾ ತರಕಾರಿಯನ್ನು ತಂದೇ ಇರಲಿಲ್ಲ. ಕೊಯ್ದು ಗೋಣಿ ಚೀಲದಲ್ಲಿ ತುಂಬಿಸಿಟ್ಟ ಬದನೆಕಾಯಿಯನ್ನು ತಂದೇ ಇಲ್ಲ. ಇನ್ನು ಸೌತೆ, ಹಿರೇಕಾಯಿ, ಕುಂಬಳಕಾಯಿ, ಬೆಂಡೆ ಇವೆಲ್ಲವನ್ನು ಸ್ವಲ್ಪ ಮಾತ್ರ ತಂದಿದ್ದೇನೆ. ಬಂದ ಅರ್ಧಗಂಟೆಯಲ್ಲೇ ಎಲ್ಲಾ ಖಾಲಿ ಎಂದು ಕೆಂಚನೂರಿನ ಸಾವಯವ ಕೃಷಿಕ ಚಂದ್ರಶೇಖರ ಉಡುಪ ನುಡಿದರು.

ಇಂದು ಸಂತೆ ವ್ಯವಸ್ಥಿತವಾಗಿ ನಡೆಯಲಿಲ್ಲ. ಪ್ರಾಯಶ: ಯಾರಿಗೂ ಇದರ ಯಶಸ್ಸಿನ ಕುರಿತು ಸರಿಯಾದ ಅಂದಾಜಿರಲಿಲ್ಲ ಎನ್ನಬಹುದು. ತಿಂಗಳೊಳಗೆ ಎಲ್ಲವೂ ಸುವ್ಯಸ್ಥಿತವಾಗಿ ನಡೆಯಲು ಸಾಧ್ಯವಾದರೆ ಖಂಡಿತವಾಗಿ ಇದು ಜನಪ್ರಿಯಗೊಳ್ಳುತ್ತದೆ. ಇದರಿಂದ ಗ್ರಾಹಕರಿಗೂ, ರೈತರಿಗೂ ಇಬ್ಬರಿಗೂ ಲಾಭವಿದೆ ಎಂದು ಜಪ್ತಿಯಲ್ಲಿ ಸಾವಯವ ರೈತ ಸಂಘ ಕಟ್ಟಿರುವ ಭಾಕಿಸಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಜಪ್ತಿ ನುಡಿದರು.
ಆದರೆ ಸಂತೆಯಲ್ಲಿ ಕೇವಲ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ನೊಂದಾಯಿತ ಸಾವಯವ ರೈತರಿಗೆ ಮಾತ್ರ ಇಲ್ಲಿ ಮಾರಾಟಕ್ಕೆ ಅವಕಾಶ ನೀಡಬೇಕು. ಮಾರಾಟವಾಗುವ ತರಕಾರಿ, ಹಣ್ಣು ಹಂಪಲುಗಳ ಮೇಲೆ ಕಣ್ಣಿಟ್ಟಿರಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಸಾವಯವ ಸಂತೆಯಲ್ಲಿ ಕೇವಲ ನೊಂದಾಯಿತ ಸಾವಯವ ರೈತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಉಳಿದ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಾಂತೀಯ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ದೇವದಾಸ ಹೆಬ್ಬಾರ್ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಆರು ಸಾವಯವ ರೈತರ ಸಂಘಗಳಿದ್ದು, ಇವುಗಳಲ್ಲಿ ಒಟ್ಟು 300 ಕುಟುಂಬಗಳು ಹೆಸರು ನೊಂದಾಯಿಸಿಕೊಂಡಿವೆ ಎಂದವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X