ಸಚಿವ ರೋಶನ್ ಬೇಗ್ ಹೇಳಿಕೆಗೆ ಬಿಜೆಪಿ ಆಕ್ರೋಶ
ಮಂಗಳೂರು, ಅ.16: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಸಚಿವ ರೋಶನ್ ಬೇಗ್ ವಿರುದ್ಧ ಬಿಜೆಪಿ ವತಿಯಿಂದ ನಗರದ ಪಿವಿಎಸ್ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಯಿತು.
ಪಿವಿಎಸ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ರಸ್ತೆ ರೋಕೋ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ನರೇಂದ್ರ ಮೋದಿಯವರು ಬಿಜೆಪಿಗೆ ಮಾತ್ರ ಪ್ರಧಾನಿಯಾಗಿರದೆ, ದೇಶದ ಪ್ರಧಾನಿಯಾಗಿದ್ದಾರೆ. ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ ಎಂದರು.
ಮಾಜಿ ಶಾಸಕರಾದ ಎನ್.ಯೋಗೀಶ್ ಭಟ್, ಕೆ.ಮೋನಪ್ಪ ಭಂಡಾರಿ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಬೃಜೇಶ್ ಚೌಟ, ಸಂಜಯ ಪ್ರಭು, ಪಾಲಿಕೆ ಸದಸ್ಯರಾದ ಗಣೇಶ್ ಹೊಸಬೆಟ್ಟು, ರೂಪಾ ಡಿ. ಬಂಗೇರ, ಸ್ಲಂ ಮೋರ್ಚಾ ಅಧ್ಯಕ್ಷ ರಾಮ ಅಮೀನ್ ಪಚ್ಚನಾಡಿ, ಪ್ರಮುಖರಾದ ನಿತಿನ್ ಕುಮಾರ್, ಶಕಿಲಾ ಕಾವಾ ಮತ್ತಿತರರು ಉಪಸ್ಥಿತರಿದ್ದರು. ರಸ್ತೆ ತಡೆ ನಡೆಸಿದ ಕೆಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
Next Story