Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ :ವಿಶ್ವ ಆಹಾರ ದಿನಾಚರಣೆ

ದಾವಣಗೆರೆ :ವಿಶ್ವ ಆಹಾರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Oct 2017 11:27 PM IST
share
ದಾವಣಗೆರೆ :ವಿಶ್ವ ಆಹಾರ ದಿನಾಚರಣೆ

ದಾವಣಗೆರೆ,ಅ.16:ವಿಶ್ವದಲ್ಲಿಯೇ ಶೇ. 43ರಷ್ಟು ಮಹಿಳೆಯರು ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಆದರೆ ಅವರನ್ನು ಮುಂಚೂಣಿಗೆ ಬರುವುದಕ್ಕೆ ಬಿಡುತ್ತಿಲ್ಲ ಎಂದು ತರಳಬಾಳು ಕೃಷಿ ವಿಜ್ಞಾನ ಕಏಂದ್ರ ವಿಜ್ಞಾನಿ ಡಾ.ಟಿ.ಎನ್. ದೇವರಾಜ್ ತಿಳಿಸಿದರು.

ನಗರದ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕೃಷಿ ಮಹಿಳಾ ಮತ್ತು ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಲಿಂಗತಾರತಮ್ಯಕ್ಕೆ ಕಡಿವಾಣ ಹಾಕದೆ ಹೊರತು ಮಹಿಳೆಯರು ಸಬಲೀಕರಣ ಸಾಧ್ಯವಿಲ್ಲ. ಪ್ರಪಂಚದ ಏಷ್ಯಾಮತ್ತು ಆಫ್ರಿಕಾ ರಾಷ್ಟ್ರದಲ್ಲಿ ಶೇ.80ರಷ್ಟು ಆಹಾರ ಉತ್ಪಾದನೆ ಆಗುತ್ತದೆ.  ಆದರೆ ಕೇಂದ್ರ ಸರಕಾರದ ಪ್ರಕಾರ 50 ಮಿಲಿಯನ್ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಆಹಾರ ಭದ್ರತೆಗೆ ಒತ್ತು ಕೊಡುವ ನಾವೆಲ್ಲ ಅಪೌಷ್ಟಿಕತೆ ಕಡಿಮೆ ಮಾಡಬೇಕಾಗಿದೆ ಎಂದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ನಟರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನಿಗೆ ಆಹಾರ ಬಹುಮುಖ್ಯವಾಗಿದ್ದು, ಈ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಹಣಕ್ಕಿಂತ ಹೆಚ್ಚಾಗಿ ಆಹಾರ ಪದಾರ್ಥಗಳಿಗೆ ಪ್ರಮುಖ್ಯತೆ ನೀಡಲಾಗುತ್ತಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಹಣಕ್ಕೆ ಹೆಚ್ಚಿನ ಮಹತ್ವ ನೀಡುವುದರಿಂದ ಎಲ್ಲವನ್ನು ಖರೀದಿಸಿ ತಿನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪ್ರತಿಯೊಬ್ಬರ ಸಾಧನೆ ಹಿಂದೆ ಹೆಣ್ಣು ಇರುತ್ತಾಳೆ. ಆಹಾರ ಪದಾರ್ಥ ವಿನಿಮಯ ಮಾಡುವಲ್ಲಿ ಹೆಣ್ಣಿನ ಪಾತ್ರ ಅತಿ ಮುಖ್ಯ. ಮದುವೆ, ಶುಭ ಸಮಾರಂಭಗಳಲ್ಲಿ ಆಹಾರವನ್ನು ವ್ಯರ್ಥ ಮಾಡದೆ ಅವಶ್ಯಕತೆ ಅನುಗುಣವಾಗಿ ಬಳಸಬೇಕು. ಇದರಿಂದ ನಮ್ಮ ಮುಂದಿನ ಯುವ ಪೀಳಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕೃಷಿ ಇಲಾಖೆ ಉಪಕೃಷಿ ನಿರ್ದೇಶಕಿ ಹಂಸವೇಣಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪ್ರಾಧಾನ್ಯತೆ ಹೆಚ್ಚಾಗಿದ್ದು, ಆದರೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಮಹಿಳೆಯರಿಗೆ ಮಾತುಗಳಿಗೆ ಗೌರವ ಮತ್ತು ಸಮಾನತೆ ದೊರೆಯಬೇಕು ಎಂದರು.

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದು, ಸಣ್ಣ ಕೆಲಸದಿಂದ ಹಿಡಿದು ಉನ್ನತ ಮಟ್ಟದ ಅಧಿಕಾರಿಗಳ ಅತ್ಯಂತಹ ಸಮರ್ಪಕವಾಗಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದ ಅವರು, ಕೃಷಿ ಕ್ಷೇತ್ರದಲ್ಲಿ ಒಂದು ಬೆಳೆ ಬೆಳೆಯುವ ಬದಲು ಬಹು ಬೆಳೆ ಬೆಳೆಯಬೇಕು. ಇದರಿಂದ ಲಾಭದಾಯವನ್ನು ಪಡೆಯುವ ಜೊತೆಗೆ ಮಣ್ಣಿನ ಫಲವತ್ತತೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಹಾಗೆಯೇ ಬೆಳೆಗಳು ರೋಗದಿಂದ ನಿಯಂತ್ರಗೊಳ್ಳಲು ಸಹಕಾರಿ ಎಂದು ಮಾಹಿತಿ ನೀಡಿದರು.

ನಿವೃತ್ತ ವೈದ್ಯಾಕಾರಿ ಡಾ. ಶಾಂತಾ ಭಟ್ ಮಾತನಾಡಿ, ದೇವರು ಮನುಷ್ಯನಿಗೆ ದೇಹ ಬಳುವಳಿಯಾಗಿ ನೀಡಿದ್ದಾನೆ.ಅದನ್ನು ಆರೋಗ್ಯದಿಂದ ಕಾಪಾಡಿಕೊಳ್ಳಬೇಕಾಗಿದೆ. ಅದಕ್ಕಾಗಿ ಮಹಿಳೆಯರು ವ್ಯಾಯಾಮ ಮಾಡಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಧಾನ್ಯ, ತರಕಾರಿಯಿಂದ ತಯಾರಿಸಿದ ಶುದ್ಧ ಆಹಾರ ಸೇವಿಸಬೇಕೆಂದು  ಸಲಹೆ ನೀಡಿದರು.

ಕೃಷಿ ಇಲಾಖೆ ಉಪಕೃಷಿ ನಿರ್ದೇಶಕರಾದ ಡಾ. ರೇಣುಕಾ, ಸ್ಪೂರ್ತಿ, ಬೇಸಾಯ ತಜ್ಞ ಬಿ.ಓ. ಮಲ್ಲಿಕಾರ್ಜುನ್, ಸಿರಿಗೆರೆ ತರಳಬಾಳು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸದಸ್ಯೆ ಎಂ.ಕೆ. ರೇಣುಕಾರ್ಯ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X