Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೌಡಿ ಶೀಟರ್ ಬುಳ್ಳ ನಾಗನ ಹತ್ಯೆಗೆ ಯತ್ನ:...

ರೌಡಿ ಶೀಟರ್ ಬುಳ್ಳ ನಾಗನ ಹತ್ಯೆಗೆ ಯತ್ನ: ಏಳು ಸುಪಾರಿ ಕಿಲ್ಲರ್‍ಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ17 Oct 2017 7:02 PM IST
share
ರೌಡಿ ಶೀಟರ್ ಬುಳ್ಳ ನಾಗನ ಹತ್ಯೆಗೆ ಯತ್ನ: ಏಳು ಸುಪಾರಿ ಕಿಲ್ಲರ್‍ಗಳ ಬಂಧನ

ದಾವಣಗೆರೆ, ಅ.17: ರೌಡಿ ಶೀಟರ್ ಬುಳ್ಳ ನಾಗನ ಹತ್ಯೆ ಮಾಡಲು ಬೆಂಗಳೂರಿನಿಂದ ಬಂದಿದ್ದ 7 ಸುಪಾರಿ ಕಿಲ್ಲರ್‍ಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ  ಡಾ.ಭೀಮಾಶಂಕರ್ ಗುಳೇದ್ ಮಂಗಳವಾರ ತಿಳಿಸಿದ್ದಾರೆ.

ಯುವರಾಜ ಅಲಿಯಾಸ್ ಪಾಪು (28), ಹರೀಶ್ (19) ಶರತ್(20), ಮಂಜುನಾಥ್(20), ಹರೀಶ್(19) ಪ್ರಕಾಶ್ (19) ಮತ್ತು ಜಯಂತ್ ಅಲಿಯಾಸ್ ಪಾಂಡು (20) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಮಚ್ಚು, ಕಾರದ ಪುಡಿ, ಹಗ್ಗ, 5 ಮೊಬೈಲ್, ಮಾರುತಿ ಒಮಿನಿ ವ್ಯಾನ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ನಾಲ್ಕು ದಿನಗಳ ಹಿಂದೆ ನಗರದಲ್ಲಿ ಠಿಕಾಣಿ ಹೂಡಿದ್ದ ಹಂತಕರ ತಂಡ ಸೋಮವಾರ ರಾತ್ರಿ ಎಸ್‍ಎಸ್ ಹೈಟೆಕ್ ಆಸ್ಪತ್ರೆಯ ಬಸವರಾಜ್ ಡಾಬಾ ಹಿಂಭಾಗದಲ್ಲಿ ಹೊಂಚು ಹಾಕುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಕೆಟಿಜೆ ನಗರ ಠಾಣಾ ಪಿಎಸ್ಸೈ ರಾಜು ಮತ್ತು ಸಿಬ್ಬಂದಿ ದಾಳಿ ನಡೆಸಿ ಎಲ್ಲ 7 ಜನರನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದಾಗ ಬುಳ್‍ ನಾಗನ ಹತ್ಯೆಗೆ ಸುಪಾರಿ ಪಡೆದಿರುವುದು ಬೆಳಕಿಗೆ ಬಂದಿದೆ ಎಂದರು.

ನಗರದ ಕುಣ್ವ, ಕೃಷ್ಣಪ್ಪ, ಚಿರು, ದಾದಾಪೀರ್, ತಿಲಕ್ ನಾಯ್ಕ್, ಗೋವಿಂಗ್ ಅವರ ನಿರ್ದೇಶನದಂತೆ  ಬುಳ್‍ನಾಗನನ್ನು ಹತ್ಯೆ ಮಾಡಿ ಆತನ ಬಳಿ ಇರುವ ಹಣ ದೋಚಿಕೊಂಡು ಪರಾರಿಯಾಗುವುದು ಈ ತಂಡದ ಉದ್ದೇಶ. ಆದರೆ ಪೊಲೀಸರ ಸಕಾಲಿಕ ಕ್ರಮದಿಂದ ನಗರದಲ್ಲಿ ನಡೆಯಬೇಕಿದ್ದ ಗ್ಯಾಂಗ್‍ ವಾರ್ ತಪ್ಪಿದಂತಾಗಿದೆ. ಇದೀಗ ಬಂಧನಕ್ಕೊಳಗಾಗಿರುವ ಹಂತಕರ ತಂಡದ ಮುಖ್ಯ ಆರೋಪಿ ಯುವರಾಜ ಅಲಿಯಾಸ್ ಪಾಪು ವಿರುದ್ಧ ಬೆಂಗಳೂರಿನ ವಿವಿಧ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಮತ್ತು ದರೋಡೆಗೆ ಸಂಬಂಧಿಸಿದಂತೆ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ ಎಂದು ವಿವರಿಸಿದರು.

ನಗರದಲ್ಲಿ 1340 ಜನರ ವಿರುದ್ಧ ರೌಡಿಶೀಟ್ ದಾಖಲಾಗಿದೆ. ಈ ಪೈಕಿ ಇತ್ತೀಚೆಗೆ 700 ಮರಿ ರೌಡಿಗಳು ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ. ನಗರ ಅಥವಾ ಜಿಲ್ಲೆಯಲ್ಲಿ ಯಾವುದೇ ರೌಡಿ ಚಟುವಟಿಕೆಗಳಿಗೆ ಪೊಲೀಸ್ ಇಲಾಖೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಅಂಥಹ ಚಟುವಟಿಕೆಗಳು ತಲೆ ಎತ್ತುವುದು ಕಂಡು ಬಂದರೆ ಇಲಾಖೆ ಪೊಲೀಸ್ ಇಲಾಖೆ ಕೈಗೊಳ್ಳಬಹುದಾದ ಎಲ್ಲ ಕ್ರಮಗಳನ್ನು ಜರಗಿಸಲಿದೆ ಎಂದು ಹೇಳಿದರು.

ಬುಳ್‍ನಾಗನನ್ನು ಹತ್ಯೆ ಮಾಡಿದರೆ ಬೆಂಗಳೂರಿನಲ್ಲಿ ಕ್ಲಬ್ ಬಿಸಿನೆಸ್ ಮಾಡಿಕೊಡುವುದಾಗಿ ಆಮಿಷ ವೊಡ್ಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಂತಕರ ತಂಡ ದಾವಣಗೆರೆಗೆ ಕೃತ್ಯ ಎಸಗಲು ಬಂದಿತ್ತು .ಈ ತಂಡವನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ ನಮ್ಮ ಸಿಬ್ಬಂದಿಯ ಸೇವೆ ಶ್ಲಾಘನೀಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಿವೈಎಸ್ಪಿ ಎಂ.ಬಾಬು, ಪಿಎಸ್ಸೈ ರಾಜು, ಪ್ರೊಬೇಷನರಿ ಪಿಎಸ್ಸೈ ಪಾರ್ವತಿ ಬಾಯಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X