Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಸೂತಿ ವೇಳೆ ಅನಗತ್ಯ ಶಸ್ತ್ರಚಿಕಿತ್ಸೆ...

ಪ್ರಸೂತಿ ವೇಳೆ ಅನಗತ್ಯ ಶಸ್ತ್ರಚಿಕಿತ್ಸೆ ಪಿಕ್‌ ಪಾಕೆಟ್‌ಗೆ ಸಮ: ರಮೇಶ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Oct 2017 7:57 PM IST
share
ಪ್ರಸೂತಿ ವೇಳೆ ಅನಗತ್ಯ ಶಸ್ತ್ರಚಿಕಿತ್ಸೆ ಪಿಕ್‌ ಪಾಕೆಟ್‌ಗೆ ಸಮ: ರಮೇಶ್‌ ಕುಮಾರ್

ಬೆಂಗಳೂರು, ಅ.17: ಸಹಜವಾಗಿ ನಡೆಯುವ ಪ್ರಸೂತಿಗಳಿಗೆ ಅನಗತ್ಯವಾಗಿ ಶಸ್ತ್ರ ಚಿಕಿತ್ಸೆ ಮಾಡುವ ಕೆಲ ವೈದ್ಯರು ರೋಗಿಗಳ ಬಳಿ ಪಿಕ್‌ ಪಾಕೆಟ್ ಮಾಡಿದಂತೆ ಹಣವನ್ನು ದೋಚುತ್ತಿದ್ದಾರೆ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್ ವಿಷಾದಿಸಿದರು.

ಮಂಗಳವಾರ ಆಯುಷ್ ಇಲಾಖೆ ನಗರದ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ-2017 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಸೂತಿ ವೇಳೆ ಅನಗತ್ಯ ಶಸ್ತ್ರಚಿಕಿತ್ಸಾ ಪ್ರಕರಣ ಹೆಚ್ಚಾಗುತ್ತಿದೆ. ವೈದ್ಯರು ತಮ್ಮ ಸ್ವಾರ್ಥತೆಗಾಗಿ ಆರೋಗ್ಯ ಕ್ಷೇತ್ರವನ್ನು ಈ ರೀತಿಯಲ್ಲಿ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಇಂತಹ ದಂಧೆಯಲ್ಲಿ ತೊಡಗಿರುವ ವೈದ್ಯರು ಪಿಕ್‌ ಪಾಕೆಟ್ ಮಾಡುವವರಿಗಿಂತಲೂ ಕೀಳು ಮನಸ್ಥಿತಿಯನ್ನು ಹೊಂದಿರುವವರಾಗಿರುತ್ತಾರೆ ಎಂದು ಅವರು ಲೇವಡಿ ಮಾಡಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯರು, ಅತ್ಯಾಧುನಿಕ ಉಪಕರಣ ಹಾಗೂ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುವ ಸೌಲಭ್ಯವಿದ್ದರೂ ಹೆಚ್ಚಿನ ರೋಗಿಗಳು ಯಾಕೆ ದಾಖಲಾಗುವುದಿಲ್ಲ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳು ಮೇಲ್ನೋಟಕ್ಕೇ ಅಶುಚಿಯಾಗಿ ಕಾಣುತ್ತಿವೆ. ಹೀಗಾಗಿ ಆಸ್ಪತ್ರೆಗಳ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದು ಸೂಚಿಸಿದರು.

ಆಯುಷ್ ಇಲಾಖೆಯ ನಿರ್ದೇಶಕ ಡಾ.ರತನ್ ಕೇಲ್ಕರ್ ಮಾತನಾಡಿ, ಯಾವುದೇ ಒಂದು ಚಿಕಿತ್ಸಾ ಕ್ರಮದಿಂದ ಸಮಾಜದ ಆರೋಗ್ಯವನ್ನು ಸುಧಾರಿಸಲು ಸಾಧ್ಯವಿಲ್ಲ. ಪ್ರತಿರೋಗದ ಗುಣ ಲಕ್ಷಣಗಳನ್ನು ತಿಳಿದುಕೊಂಡು ಆ ರೋಗಕ್ಕೆ ಯಾವ ಚಿಕಿತ್ಸಾ ಕ್ರಮ ಸೂಕ್ತವೆಂದು ತಿಳಿದು ಚಿಕಿತ್ಸೆ ನೀಡುವಂತಾಗಬೇಕು ಎಂದು ಆಶಿಸಿದರು.

ಕಳೆದ ಆರು ತಿಂಗಳಿನಿಂದ ಡೆಂಗ್ ಜ್ವರದಿಂದ ಬಳಲುತ್ತಿರುವ ರೋಗಿಗಳಿಗೆ ಮಾತ್ರೆ, ಇಂಜೆಕ್ಷನ್ ಜೊತೆಗೆ ಗಿಡ ಮೂಲಿಕೆಗಳಿಂದ ಮಾಡಿದ ಕಷಾಯ ಸೇರಿದಂತೆ ಹಣ್ಣುಗಳನ್ನು ತಿನ್ನಲು ಕೊಡಲಾಗುತ್ತಿತ್ತು. ಇದರಿಂದ ರಾಜ್ಯಾದ್ಯಂತ ಉತ್ತಮ ಫಲಿತಾಂಶ ಬಂದಿದೆ. ಇದೇ ಮಾದರಿಯಲ್ಲಿ ಆಯುರ್ವೇದದ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಮನೋಜ್ ಕುಮಾರ್ ಮೀನಾ, ಪಾಲಿಕೆ ಸದಸ್ಯೆ ಲತಾಕುಮಾರ್ ರಾಠೋಡ್, ಇಲಾಖೆಯ ಜಂಟಿ ನಿರ್ದೇಶಕಿ ಅಹಲ್ಯಾಶರ್ಮ, ಉಪ ನಿರ್ದೇಶಕಿ ಸರಸ್ವತಿ, ಆಡಳಿತಗಾರ ರಮೇಶ್, ಪ್ರಾಂಶುಪಾಲ ಶ್ರೀಧರ್ ಮತ್ತಿತರರಿದ್ದರು.

'ಆಯುರ್ವೇದಿಕ್ ವಿದ್ಯಾರ್ಥಿಗಳಿಗೆ ವಿಶೇಷ ಭತ್ಯೆ'
ಯಾವುದೇ ಅಡ್ಡಪರಿಣಾಮವಿಲ್ಲದೆ ಕಡಿಮೆ ದರದ ಆಯುರ್ವೇದಿಕ್ ಉತ್ತಮ ಚಿಕಿತ್ಸಾ ವಿಧಾನವಾಗಿದೆ. ಆದರೆ, ನಮ್ಮ ಪ್ರಸ್ತುತ ಸಮಾಜದಲ್ಲಿ ಆಯುರ್ವೇದಿಕ್‌ಗೆ ಹೆಚ್ಚಿನ ಮಹತ್ವವಿಲ್ಲದಾಗಿದೆ. ಈ ನಿಟ್ಟಿನಲ್ಲಿ ಆಯುರ್ವೇದಿಕ್‌ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದು ಸರಕಾರದ ಕರ್ತವ್ಯವಾಗಿದ್ದು, ಆಯುರ್ವೇದಿಕ್ ವಿಷಯವನ್ನು ಆಯ್ಕೆ ಮಾಡಿಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ವಿಶೇಷ ಭತ್ತೆ ನೀಡಲಾಗುವುದು.
-ರಮೇಶ್‌ಕುಮಾರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X