Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ

ರಣಜಿ: ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ

ವಾರ್ತಾಭಾರತಿವಾರ್ತಾಭಾರತಿ17 Oct 2017 11:42 PM IST
share
ರಣಜಿ: ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ

ಮೈಸೂರು , ಅ.17: ಕರ್ನಾಟಕ ತಂಡ ಇಲ್ಲಿ ನಡೆದ ರಣಜಿ ಟ್ರೋಫಿ ‘ಎ’ ಗುಂಪಿನ ಪಂದ್ಯದಲ್ಲಿ ಅಸ್ಸಾಂ ವಿರುದ್ಧ ಇನಿಂಗ್ಸ್ ಮತ್ತು 122 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಭಿಯಾನ ಆರಂಭಿಸಿದೆ.

ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆ.ಗೌತಮ್ ಚೊಚ್ಚಲ ಶತಕ ಮತ್ತು ಒಟ್ಟು 7 ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

  ಸೋಮವಾರ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟದಲ್ಲಿ 169 ರನ್ ಗಳಿಸಿದ್ದ ಅಸ್ಸಾಂ ತಂಡ ಇಂದು ಆಟ ಮುಂದುವರಿಸಿ 73.1 ಓವರ್‌ಗಳಲ್ಲಿ 203 ರನ್‌ಗಳಿಗೆ ಆಲೌಟಾಗಿದೆ. ನಾಯಕ ಗೋಕುಲ್ ಶರ್ಮಾ ಹೋರಾಟ ನಡೆಸಿ 66 ರನ್ ಸೇರಿಸಿದ್ದರೂ ತಂಡವನ್ನು ಇನಿಂಗ್ಸ್ ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.ಅವರು ಮೊದಲ ಇನಿಂಗ್ಸ್‌ನಲ್ಲೂ 55 ರನ್ ಗಳಿಸಿದ್ದರು.

ವಿನಯ್ ಕುಮಾರ್ 31ಕ್ಕೆ 4 ವಿಕೆಟ್ ಮತ್ತು ಕೆ.ಗೌತಮ್ 39ಕ್ಕೆ 3 ವಿಕೆಟ್ ಉಡಾಯಿಸಿ ಅಸ್ಸಾಂ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿದರು.

 ಕರ್ನಾಟಕ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೆ.ಗೌತಮ್ (149) ಮತ್ತು ಆರ್.ಸಮರ್ಥ್ (123) ಶತಕ, ಶ್ರೇಯಸ್ ಗೋಪಾಲ್(ಔಟಾಗದೆ 50) ಅರ್ಧಶತಕದ ನೆರವಿನಲ್ಲಿ 7 ವಿಕೆಟ್ ನಷ್ಟದಲ್ಲಿ 469 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ್ದ ಅಸ್ಸಾಂ ಮೊದಲ ಇನಿಂಗ್ಸ್‌ನಲ್ಲಿ ಕೆ.ಗೌತಮ್(20ಕ್ಕೆ 4) ಮತ್ತು ಶ್ರೇಯಸ್ ಗೋಪಾಲ್(43ಕ್ಕೆ 3) ದಾಳಿಗೆ ತತ್ತರಿಸಿ 145 ರನ್‌ಗಳಿಗೆ ಆಲೌಟಾಗಿತ್ತು.

ಸಂಕ್ಷಿಪ್ತ ಸ್ಕೋರ್

►ಕರ್ನಾಟಕ ಮೊದಲ ಇನಿಂಗ್ಸ್ 469/7 ಡಿಕ್ಲೇರ್

►ಅಸ್ಸಾಂ ಮೊದಲ ಇನಿಂಗ್ಸ್ 145, ಅಸ್ಸಾಂ ಎರಡನೆ ಇನಿಂಗ್ಸ್ 203( ಗೋಕುಲ್ ಶರ್ಮ 66; ವಿನಯ್ ಕುಮಾರ್ 31ಕ್ಕೆ 4, ಕೆ.ಗೌತಮ್ 39ಕ್ಕೆ 3).

ದಿಲ್ಲಿಗೆ ಜಯ

ವೇಗಿ ಇಶಾಂತ್ ಶರ್ಮ ನೇತೃತ್ವದ ದಿಲ್ಲಿ ತಂಡ ರಣಜಿ ಟ್ರೋಫಿ ‘ಎ’ ಗ್ರೂಪ್ ಲೀಗ್ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಇನಿಂಗ್ಸ್ ಮತ್ತು 105 ರನ್‌ಗಳ ಜಯ ಸಾಧಿಸಿದೆ.

ಇದರೊಂದಿಗೆ ದಿಲ್ಲಿ ತಂಡ ಎರಡು ಬೋನಸ್ ಅಂಕಗಳೊಂದಿಗೆ 7 ಅಂಕಗಳಿಸಿದ್ದು, ಒಟ್ಟು 2 ಪಂದ್ಯಗಳಲ್ಲಿ 10 ಅಂಕ ಪಡೆದು ಎ’ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿದೆ. ಸೋಮವಾರ ಎರಡನೆ ಇನಿಂಗ್ಸ್‌ನಲ್ಲಿ 6 ವಿಕೆಟ್ ನಷ್ಟದಲ್ಲಿ 157 ರನ್ ಗಳಿಸಿದ್ದ ರೈಲ್ವೆಸ್ ಇಂದು ಬ್ಯಾಟಿಂಗ್ ಮುಂದುವರಿಸಿ 206 ರನ್‌ಗಳಿಗೆ ಆಲೌಟಾಗಿದೆ.

ಸ್ಪಿನ್ನರ್‌ಗಳಾದ ಮನನ್ ಶರ್ಮಾ (17 ಓವರ್‌ಗಳಲ್ಲಿ 67ಕ್ಕೆ 3) ಮತ್ತು ವಿಕಾಸ್ ಮಿಶ್ರಾ(19.5 ಓವರ್‌ಗಳಲ್ಲಿ 37ಕ್ಕೆ 4 ವಿಕೆಟ್) ದಿಲ್ಲಿ ತಂಡದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ಮನನ್ ಶರ್ಮಾ ಶತಕ ಮತ್ತು ಒಟ್ಟು 7 ವಿಕೆಟ್ ಉಡಾಯಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡರು.

ಸಂಕ್ಷಿಪ್ತ ಸ್ಕೋರ್ ವಿವರ

ದಿಲ್ಲಿ ಮೊದಲ ಇನಿಂಗ್ಸ್ 447, ರೈಲ್ವೆಸ್ ಮೊದಲ ಇನಿಂಗ್ಸ್ 110, ಎರಡನೆ ಇನಿಂಗ್ಸ್ 78.5 ಓವರ್‌ಗಳಲ್ಲಿ 206(ನಿತಿನ್ ಭಿಲ್ಲೆ 73, ವಿಕಾಸ್ ಮಿಶ್ರಾ 37ಕ್ಕೆ 4, ಮನನ್ ಶರ್ಮಾ 67ಕ್ಕೆ 3, ಇಶಾಂತ್ ಶರ್ಮ 34ಕ್ಕೆ 1).

ಹೈದರಾಬಾದ್-ಉ.ಪ್ರ ಪಂದ್ಯ ರದ್ದು

ಹೈದರಾಬಾದ್ ಮತ್ತು ಉತ್ತರ ಪ್ರದೇಶ ತಂಡಗಳ ನಡುವೆ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಉಭಯ ತಂಡಗಳು ತಲಾ 1 ಅಂಕವನ್ನು ಪಡೆದಿದೆ.

►ಗುಜರಾತ್, ಬಂಗಾಳ, ಸೌರಾಷ್ಟ್ರಕ್ಕೆ ಜಯ

   ಗ್ರೂಪ್ ‘ಬಿ’ನಲ್ಲಿ ಕೇರಳ ವಿರುದ್ಧ ಗುಜರಾತ್ ತಂಡ 4 ವಿಕೆಟ್‌ಗಳ ಜಯ ಗಳಿಸಿದೆ. ಡಿ ಗುಂಪಿನಲ್ಲಿ ಛತ್ತೀಸ್‌ಗಡ ವಿರುದ್ಧ ಬಂಗಾಳ ತಂಡ ಇನಿಂಗ್ಸ್ ಮತ್ತು 160 ರನ್‌ಗಳ ಗೆಲುವು ಸಾಧಿಸಿದೆ.

 ಜಮ್ಮು ಮತ್ತು ಕಾಶ್ಮೀರ ತಂಡದ ವಿರುದ್ಧ ಸೌರಾಷ್ಟ್ರ ಇನಿಂಗ್ಸ್ ಹಾಗೂ 212 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಮೊಹಾಲಿಯಲ್ಲಿ ಪಂಜಾಬ್‌ನ್ನು ವಿದರ್ಭ ತಂಡ ಇನಿಂಗ್ಸ್ ಹಾಗೂ 117 ರನ್‌ಗಳ ಅಂತರದಿಂದ ಸೋಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X