Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ದೇವಸ್ಥಾನದಲ್ಲಿ ಆಭರಣ-ನೋಟುಗಳಿಂದಲೇ...

ಈ ದೇವಸ್ಥಾನದಲ್ಲಿ ಆಭರಣ-ನೋಟುಗಳಿಂದಲೇ ಗರ್ಭಗುಡಿಯ ಅಲಂಕಾರ

ಭಕ್ತಾದಿಗಳು ಮುಖ್ಯ ಅರ್ಚಕರಿಗೆ ನೀಡುವ ನಗ-ನಗದಿನ ಮೌಲ್ಯ ಎಷ್ಟು ಕೋಟಿ ರೂ. ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ18 Oct 2017 12:21 PM IST
share
ಈ ದೇವಸ್ಥಾನದಲ್ಲಿ ಆಭರಣ-ನೋಟುಗಳಿಂದಲೇ ಗರ್ಭಗುಡಿಯ ಅಲಂಕಾರ

ರತ್ಲಂ,ಅ.18 :  ಮಧ್ಯ ಪ್ರದೇಶದ ರತ್ಲಂ ಎಂಬಲ್ಲಿರುವ ಮಹಾಲಕ್ಷ್ಮೀಜಿ ದೇವಸ್ಥಾನಕ್ಕೆ  ಭೇಟಿ ನೀಡುವ ಭಕ್ತಾದಿಗಳ ಕಣ್ಣಿಗೆ ದೇವಳದ  ಮೂರ್ತಿಗಳಿಗಿಂತ ಹೆಚ್ಚಾಗಿ ಗರ್ಭಗುಡಿಯ  ಇಂಚು ಇಂಚಿನಲ್ಲಿಯೂ ತುಂಬಿರುವ ಒಡವೆಗಳು ಹಾಗೂ ಹಣದತ್ತವೇ ದೃಷ್ಟಿ  ಹಾಯುತ್ತದೆ. ಈ ದೇವಸ್ಥಾನದಲ್ಲಿ ತುಂಬಿರುವ ಚಿನ್ನಾಭರಣ ಮತ್ತು ನಗದಿನ ಮೌಲ್ಯ ಅಂದಾಜು ರೂ. 100 ಕೋಟಿ ಎಂದು ಅಲ್ಲಿನ ಅಧಿಕಾರಿಗಳು ಹೇಳುತ್ತಾರೆ.

ದೀಪಾವಳಿ ಸಂದರ್ಭ ಭಕ್ತಾದಿಗಳು ತಮ್ಮಲ್ಲಿರುವ ನಗದು, ಚಿನ್ನಾಭರಣ ಮತ್ತಿತರ ಬೆಲೆಬಾಳುವ ವಸ್ತುಗಳನ್ನು ದೇವಳದ ಮುಖ್ಯ ಅರ್ಚಕರಿಗೆ ನೀಡುತ್ತಾರೆ. ನಂತರ ಅವುಗಳನ್ನು ಅಲ್ಲಿನ ಗರ್ಭಗುಡಿಯೊಳಗೆ ಇಡಲಾಗುತ್ತದೆ. ಪ್ರತಿ ವರ್ಷ ಈ ಹಬ್ಬದ ಸಂದರ್ಭ ದೇವಳದಲ್ಲಿ ಇಂತಹ ಪದ್ಧತಿಯೊಂದು ಹಲವಾರು ವರ್ಷಗಳಿಂದ ನಡೆದು ಬಂದಿದೆ.

ದೇವಸ್ಥಾನದಲ್ಲಿ ಒಡವೆಗಳು ಹಾಗೂ ನಗದು ಇಡಲು ಜಾಗ ಇಲ್ಲದೇ ಇದ್ದರೂ ದೀಪಾವಳಿಯಾದ್ಯಂತ ಭಕ್ತಾದಿಗಳು ತಮ್ಮ  ಬೆಲೆಬಾಳುವ ವಸ್ತುಗಳನ್ನು ಸಮರ್ಪಿಸುತ್ತಲೇ ಇರುತ್ತಾರೆ. ಗ್ರಾಮದ ಭಕ್ತಾದಿಗಳ ಹೊರತಾಗಿ  ದೂರದೂರದ ಪ್ರದೇಶಗಳಿಂದಲೂ ಇಲ್ಲಿಗೆ ಜನಸಾಗರವೇ ಹರಿದು ಬರುತ್ತದೆ.

ಈ ಒಂದು ಪದ್ಧತಿಯ ಕಾರಣದಿಂದಾಗಿ ಸ್ಥಳೀಯಾಡಳಿತ ಹಾಗೂ ಪೊಲೀಸರು ದೇವಸ್ಥಾನದಲ್ಲಿ ಸಾಕಷ್ಟು ಸುರಕ್ಷಾ ವ್ಯವಸ್ಥೆ  ಕೈಗೊಂಡಿದ್ದು ದೇವಳದ ಗರ್ಭಗುಡಿಯ ಮೇಲೆ ಸದಾ  ಪೊಲೀಸ್ ಸಿಬ್ಬಂದಿಗಳು ನಿಗಾ ಇಡುತ್ತಾರೆ ಎಂದು ಎಎಸ್‍ಪಿ ಪ್ರದೀಪ್ ಸಿಂಗ್ ಹೇಳುತ್ತಾರೆ.

ಹೀಗೆ ಸಾವಿರಾರು ಭಕ್ತಾದಿಗಳು ನೀಡುವ ಧನ ಕನಕಾದಿಗಳನ್ನು ಭಾಯಿ ದೂಜ್ ಹಬ್ಬದ ನಂತರ ಅವುಗಳ ಮಾಲಕರಿಗೆ ಹಸ್ತಾಂತರಿಸಲಾಗುತ್ತದೆ.

ಪ್ರತಿಯೊಬ್ಬ ಭಕ್ತಾದಿ ನೀಡಿದ ಕಾಣಿಕೆಗಳ ವಿವರಗಳನ್ನು ಮುಖ್ಯ ಅರ್ಚಕರು ಡೈರಿಯೊಂದರಲ್ಲಿ ಬರೆದಿಟ್ಟು ನಂತರ ಅದನ್ನು ಹಿಂದಿರುಗಿಸುತ್ತಾರೆ. ಇಲ್ಲಿಯ ತನಕ ಯಾವ ಭಕ್ತಾದಿಯ ಒಡವೆಯೂ ಇಲ್ಲಿ ಕಳೆದು ಹೋಗಿದ್ದಿಲ್ಲ ಎಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X