ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಗುಲಿ ಬಿಜೆಪಿ ಮುಖಂಡನ ಪುತ್ರ ಮೃತ್ಯು
ಹುಬ್ಬಳ್ಳಿ, ಅ. 18: ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಕ್ಕೆ ಬ್ಯಾನರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬಿಜೆಪಿ ಮುಖಂಡನ ಪುತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ವಿದ್ಯುತ್ ತಗುಲಿ ಮೃತಪಟ್ಟ ಯುವಕನನ್ನು ಇಲ್ಲಿನ ಜನತಾ ಕಾಲನಿಯ ನಿವಾಸಿ ರವಿಕುಮಾರ ಕೋರ್ಲಪಾಟಿ (24) ಎಂದು ಗುರುತಿಸಲಾಗಿದೆ.
ನಿನ್ನೆ ಪಕ್ಷದ ಬ್ಯಾನರ್ ಕಟ್ಟುತ್ತಿದ್ದ ವೇಳೇ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ರವಿಕುಮಾರ್ ಬಿಜೆಪಿ ಮುಖಂಡ ಲಕ್ಷ್ಮಣ ಕೊರ್ಲಪಾಟಿ ಅವರ ಪುತ್ರ ಎಂದು ತಿಳಿದುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಠಾಣಾ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
Next Story