ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಲು ಮಲೆಕುಡಿಯರ ಸಂಘ ಆಗ್ರಹ
ಮಂಗಳೂರು, ಅ.18: ಡಿಸಿ ಮನ್ನಾ ಜಾಗದಲ್ಲಿ ಗುರುತಿಸಿರುವ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘ ಆಗ್ರಹಿಸಿದೆ.
ಸಂಘದ ಅಧ್ಯಕ್ಷ ನೋಣಯ್ಯ ಮಚ್ಚಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಲೆಕುಡಿಯ ಸಮಾಜದ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ ನಡೆಸಲು ಕೂಡ ಸಭೆ ನಿರ್ಧರಿಸಿತು.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್., ಜಿಲ್ಲಾಧ್ಯಕ್ಷ ಸಂಜೀವ ಕುಳ್ಳಾಜೆ, ಪ್ರಧಾನ ಕಾರ್ಯದರ್ಶಿ ಜಯರಾಮ ಅಲಂಗಾರು, ತಾಲೂಕು ಸಮಿತಿಯ ಪದಾಧಿಕಾರಿಗಳಾದ ಹರೀಶ್ ಎಳನೀರ್, ಸುಜಾತಾ ಉಜಿರೆ, ಮೋಹನ್ ನಿಡ್ಲೆ, ಲಕ್ಷ್ಮಣ್ ಅಲಂಗಾಯಿ, ಸುಧಾಕರ ಅಲಂಗಾಯಿ, ವಸಂತ ಬೆಳಾಲ್ ಮತ್ತಿತರರು ಉಪಸ್ಥಿತರಿದ್ದರು.
Next Story