ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಎಚ್ಚರಿಕೆ
ವಾರದೊಳಗೆ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆ
ಮಂಗಳೂರು, ಅ.19: ವಿಟ್ಲದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಕೀಳುಪದ ಬಳಕೆ ಮಾಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರ ಕೃತ್ಯವನ್ನು ಖಂಡಿಸಿರುವ ದ.ಕ.ಜಿಲ್ಲಾ ಕಾಂಗ್ರೆಸ್, ವಾರದೊಳಗೆ ಸಂಜೀವ ಮಠಂದೂರು ಕ್ಷಮೆಯಾಚಿಸದಿದ್ದರೆ ಅವರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದೆ.
ಗುರುವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಕೆ. ಹರೀಶ್ ಕುಮಾರ್, ರಾಷ್ಟ್ರೀಯ ಪಕ್ಷವೊಂದರ ಜಿಲ್ಲಾಧ್ಯಕ್ಷರ ಈ ಹೇಳಿಕೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ವಾರದೊಳಗೆ ಕ್ಷಮೆ ಯಾಚಿಸದಿದ್ದರೆ ಅವರು ರಾಜೀನಾಮೆ ನೀಡುವವರೆಗೂ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.
Next Story