Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಂಚಿ, ದಿಲ್ಲಿಯಲ್ಲೂ ಆಧಾರ್‌ರಹಿತ...

ರಾಂಚಿ, ದಿಲ್ಲಿಯಲ್ಲೂ ಆಧಾರ್‌ರಹಿತ ಬಡವರಿಗೆ ಪಡಿತರವಿಲ್ಲ : ಆರೋಪ

ವಾರ್ತಾಭಾರತಿವಾರ್ತಾಭಾರತಿ19 Oct 2017 9:10 PM IST
share
ರಾಂಚಿ, ದಿಲ್ಲಿಯಲ್ಲೂ ಆಧಾರ್‌ರಹಿತ ಬಡವರಿಗೆ ಪಡಿತರವಿಲ್ಲ : ಆರೋಪ

ಖುಂತಿ (ಜಾರ್ಖಂಡ್),ಅ.19: ಜಿಲ್ಲಾಡಳಿತವು ಆಧಾರ್ ಹೊಂದಿಲ್ಲವೆಂಬ ಕಾರಣಕ್ಕಾಗಿ ಬಡಕುಟುಂಬವೊಂದಕ್ಕೆ ಪಡಿತರ ಆಹಾರ ಪೂರೈಕೆಯನ್ನು ಕಡಿತಗೊಳಿಸಿದ ಬಳಿಕ ಆ ಕುಟುಂಬದ 11 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ ಎನ್ನಲಾದ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಈ ಮಧ್ಯೆ ಜಾರ್ಖಂಡ್ ರಾಜಧಾನಿ ರಾಂಚಿ ಹಾಗೂ ಹೊಸದಿಲ್ಲಿಯ ವಿವಿಧೆಡೆ ಆಧಾರ್ ಸಂಖ್ಯೆ ಇಲ್ಲದಿದ್ದುದಕ್ಕಾಗಿ ತಮಗೆ ಪಡಿತರ ಆಹಾರ ಸಾಮಗ್ರಿಗಳನ್ನು ನೀಡಲಾಗುತ್ತಿಲ್ಲವೆಂದು ಹಲವಾರು ದೂರು ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ 11 ವರ್ಷದ ಬಾಲಕಿ ಸಂತೋಷಿ ಕುಮಾರಿ ಸಾವನ್ನಪ್ಪಿರುವುದು ಮಲೇರಿಯಾ ಕಾಯಿಲೆಯಿಂದಾಗಿಯೇ ಹೊರತು ಹಸಿವಿನಿಂದಲ್ಲವೆಂಬ ಜಿಲ್ಲಾಡಳಿತ ಹೇಳಿಕೆಯಲ್ಲಿ ಹುರುಳಿಲ್ಲವೆಂದು ಎನ್‌ಡಿಟಿವಿ ವಾಹಿನಿಯ ವರದಿಯೊಂದು ಹೇಳಿದೆ.

   ಜಾರ್ಖಂಡ್ ರಾಜಧಾನಿ ರಾಂಚಿಯ ಹೊರವಲಯದಲ್ಲಿರುವ ಖುಂತಿ ಜಿಲ್ಲೆಯ ಗ್ರಾಮವೊಂದರಲ್ಲಿರುವ 60 ಮನೆಗಳ ಪೈಕಿ ಕನಿಷ್ಠ ಶೇ.20ರಷ್ಟು ಮಂದಿಯ ಹೆಸರುಗಳನ್ನು ಪಡಿತರದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇವರಲ್ಲಿ ಕೆಲವರಿಗೆ ಆಧಾರ್ ಕಾರ್ಡ್ ಇಲ್ಲದಿದ್ದರೆ, ಇನ್ನೂ ಕೆಲವರ ಆಧಾರ್‌ಕಾರ್ಡ್‌ನಲ್ಲಿ ಲೋಪಗಳಿರುವುದರಿಂದ ಅವರಿಗೆ ಪಡಿತರವನ್ನು ನಿರಾಕರಿಸಲಾಗಿದೆಯೆಂದು ತಿಳಿದುಬಂದಿದೆ.

ತನ್ನಲ್ಲಿ ಆಧಾರ್ ಕಾರ್ಡ್ ಇದ್ದರೂ, ಐದು ಮಂದಿಯ ತನ್ನ ಕುಟುಂಬಕ್ಕೆ ಪಡಿತರ ಆಹಾರ ಪಡೆಯಲು ತನಗಿನ್ನೂ ಸಾಧ್ಯವಾಗಿಲ್ಲವೆಂದು ಗ್ರಾಮದ ನಿವಾಸಿ 50 ವರ್ಷದ ನಾರದೆ ಮುಂಡೆ ಹೇಳುತ್ತಾರೆ. “ನಾವು ಪಡಿತರ ಸಾಮಗ್ರಿಗಳಿಗಾಗಿ ರೇಶನ್ ಅಂಗಡಿಗೆ ತೆರಳಿದಾಗ ಅವರು ನಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಕೇಳುತ್ತಾರೆ. ನನ್ನ ಆಧಾರ್ ಸಂಖ್ಯೆಯನ್ನು ಹಲವಾರು ಬಾರಿ ಸಲ್ಲಿಸಿದರೂ, ಪಡಿತರ ಪೂರೈಕೆ ಇನ್ನೂ ಆರಂಭಗೊಂಡಿಲ್ಲ’’ ಎಂದವರು ದೂರುತ್ತಾರೆ.ಮೃತಬಾಲಕಿಯ ಕುಟುಂಬ ಜಾರ್ಖಂಡ್‌ನ ಮಾವೋವಾದಿ ಚಟುವಟಿಕೆಗಳಿಂದ ಪೀಡಿತವಾದ ಸಿಮೆಡೆಗಾ ಜಿಲ್ಲೆಯಲ್ಲಿ ವಾಸವಾಗಿದೆ. ಆಕೆಯ ಕುಟುಂಬವು ಪಡಿತರ ಚೀಟಿಯನ್ನು ಹೊಂದಿತ್ತಾದರೂ, ಆಧಾರ್‌ಗೆ ಅದು ಲಿಂಕ್ ಮಾಡಿಲ್ಲವೆಂಬ ಕಾರಣಕ್ಕಾಗಿ ಈ ವರ್ಷ ಅದನ್ನು ರದ್ದುಪಡಿಸಲಾಗಿತ್ತು.

 ‘‘ ಅನ್ನಕ್ಕಾಗಿ ಮೊರೆಯಿಡುತ್ತಲೇ ನನ್ನ ಮಗಳು ಕೊನೆಯುಸಿರೆಳೆದಳು. ಕಳೆದ ನಾಲ್ಕೈದು ದಿನಗಳಿಂದ ನಾವು ಊಟ ಮಾಡಿಯೇ ಇಲ್ಲ” ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷಿಯ ತಾಯಿ ಕೋಯ್ಲಿ ದೇವಿ ಹೇಳುತ್ತಾರೆ.

 ಆದರೆ ಸಂತೋಷಿ ಮಲೇರಿಯಾದಿಂದ ಕೊನೆಯುಸಿರೆಳೆದಿರುವುದಾಗಿ ಹೇಳುವ ಮೂಲಕ ಜಿಲ್ಲಾಡಳಿತವು ತನಗೆ ತಾನೇ ಕ್ಲೀನ್‌ಚಿಟ್ ನೀಡಿದೆಯೆಂದು ಎನ್‌ಡಿಟಿವಿ ವರದಿ ಆರೋಪಿಸಿದೆ.

 ಈ ಮಧ್ಯೆ ಕೇಂದ್ರ ಆಹಾರ ಪೂರೈಕೆ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಹೇಳಿಕೆ ನೀಡಿ, ಆಧಾರ್‌ನ ಕಾರಣ ನೀಡಿ, ಯಾರಿಗೂ ಪಡಿತರ ಆಹಾರವನ್ನು ನಿರಾಕರಿಸಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.ಈ ವಿಷಯವಾಗಿ ತಾನು ಜಾರ್ಖಂಡ್‌ಗೆ ಸತ್ಯಶೋಧನಾ ತಂಡವೊಂದನ್ನು ಕಳುಹಿಸಿಕೊಡುವುದಾಗಿ ಅವರು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆಯಷ್ಟೇ ಪಾಸ್ವಾನ್ ಅವರು, ರೇಶನ್‌ಕಾರ್ಡ್‌ಗೆ ಆಧಾರ್ ಲಿಂಕ್ ಮಾಡುವ ಮೂಲಕ ಕೇಂದ್ರ ಸರಕಾರವು ಹಲವಾರು ನಕಲಿ ಪಡಿತರಕಾರ್ಡ್‌ಗಳನ್ನು ತೆಗೆದುಹಾಕಿದೆ ಹಾಗೂ ಆ ಮೂಲಕ ಬೊಕ್ಕಸಕ್ಕೆ 14 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ಉಳಿಸಿದೆಯೆಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X