Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ರಾಜ್ಯದಲ್ಲಿ ಚಿತ್ರೀಕರಣ ನಡೆಸಿದರೆ...

ಈ ರಾಜ್ಯದಲ್ಲಿ ಚಿತ್ರೀಕರಣ ನಡೆಸಿದರೆ ಚಿತ್ರತಂಡಕ್ಕೆ ಸಿಗಲಿದೆ 1 ಕೋ.ರೂ. ಪ್ರೋತ್ಸಾಹಧನ!

ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ತಂತ್ರ

ವಾರ್ತಾಭಾರತಿವಾರ್ತಾಭಾರತಿ19 Oct 2017 9:42 PM IST
share
ಈ ರಾಜ್ಯದಲ್ಲಿ ಚಿತ್ರೀಕರಣ ನಡೆಸಿದರೆ ಚಿತ್ರತಂಡಕ್ಕೆ ಸಿಗಲಿದೆ 1 ಕೋ.ರೂ. ಪ್ರೋತ್ಸಾಹಧನ!

ಹೊಸದಿಲ್ಲಿ, ಅ.19: ಸಾಮಾನ್ಯವಾಗಿ ರಾಜ್ಯದ, ದೇಶದ ಹೊರಗೆ ಚಿತ್ರೀಕರಣ ನಡೆಸುವುದೆಂದರೆ ಚಲನಚಿತ್ರ ನಿರ್ಮಾಪಕರಿಗೆ ತಲೆಬಿಸಿಯೇ ಸರಿ. ಬೇರೆ ಪ್ರದೇಶಗಳಿಗೆ ಇಡೀ ಚಿತ್ರತಂಡವನ್ನು ಕರೆದೊಯ್ಯುವುದು, ಅಲ್ಲಿನ ಖರ್ಚು ವೆಚ್ಚಗಳನ್ನು ನಿರ್ವಹಿಸುವುದು ನಿರ್ಮಾಪಕರಿಗೆ ಸಮಸ್ಯೆ ಎಂದರೆ ತಪ್ಪಾಗಲಾರದು. ಆದರೆ ಇನ್ನು ಮುಂದೆ ಅಸ್ಸಾಂನಲ್ಲಿ ಚಿತ್ರೀಕರಣ ನಡೆಸಲು ನಿರ್ಮಾಪಕರು ನಾ ಮುಂದು, ತಾ ಮುಂದು ಎಂದು ರೆಡಿಯಾಗಬಹುದು ಎಂದೆನಿಸುತ್ತಿದೆ. ಏಕೆಂದರೆ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಅಸ್ಸಾಂ ಸರಕಾರ ಹೊಸ ಘೋಷಣೆಯೊಂದನ್ನು ಮಾಡಿದೆ.

ಹಿಂದಿ, ಇಂಗ್ಲಿಷ್ ಅಥವಾ ಇತರ ಯಾವುದೇ ‘ವಿದೇಶಿ’ ಭಾಷೆಗಳ ಚಿತ್ರೀಕರಣವನ್ನು ಅಸ್ಸಾಂನಲ್ಲಿ ನಡೆಸಿದರೆ ಸರಕಾರವೇ ಚಿತ್ರತಂಡಕ್ಕೆ 1 ಕೋಟಿ ರೂ. ಪ್ರೋತ್ಸಾಹ ಧನ ನೀಡಲಿದೆಯಂತೆ. ಅಸ್ಸಾಂ ಸರಕಾರ ಗುರುವಾರ ಈ ಯೋಜನೆಯನ್ನು ಘೋಷಿಸಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಕ್ರಮ ಪ್ರಯೋಜನಕಾರಿಯಾಗಲಿದೆ ಎನ್ನಲಾಗಿದೆ.

“ಅಸ್ಸಾಂನ ವಿವಿಧ ಸುಂದರ ಪ್ರದೇಶಗಳಿಗೆ ಬಂದು ಚಿತ್ರೀಕರಣ ನಡೆಸಲು ನಿರ್ದೇಶಕರನ್ನು ಆಕರ್ಷಿಸಲು ನಾವು ಬಯಸಿದ್ದೇವೆ. ಚಿತ್ರದ 25 ಶೇ.ದಷ್ಟು ಚಿತ್ರೀಕರಣವನ್ನು ಅಸ್ಸಾಂನಲ್ಲಿ ನಡೆಸಿದರೆ ರಾಜ್ಯದಲ್ಲಿ ಖರ್ಚಾದ 25 ಶೇ.ದಷ್ಟು ಹಣ ನೀಡಲಾಗುವುದು. ಅಸ್ಸಾಂನ ಸಂಸ್ಕೃತಿ, ಪ್ರವಾಸೋದ್ಯಮ, ಪರಂಪರೆಯ ಸ್ಟೋರಿಲೈನ್ ಆಧಾರದಲ್ಲಿ ಚಿತ್ರ ನಿರ್ಮಿಸುವವರಿಗೆ ಹೆಚ್ಚುವರಿ 10 ಶೇ. ನೀಡಲಾಗುವುದು. ಒಂದು ವೇಳೆ 50 ಶೇ. ಅಥವಾ ಅದಕ್ಕಿಂತ ಹೆಚ್ಚಿನಷ್ಟು ಚಿತ್ರೀಕರಣ ಇಲ್ಲಿ ನಡೆದೆ ಇನ್ನೂ ಹೆಚ್ಚುವರಿ 10 ಶೇ.ದಷ್ಟು ಹಣ ನೀಡಲಾಗುವುದು” ಎಂದು ಪ್ರವಾಸೋದ್ಯಮ ಹಾಗು ಹಣಕಾಸು ಸಚಿವ ಹಿಮಾಂತ ಬಿಸ್ವ ಶರ್ಮಾ ಹೇಳಿದ್ದಾರೆ.

2018ರ ಜನವರಿಯಿಂದ ಜಾರಿಗೆ ಬರಲಿರುವ ಈ ನೂತನ ಯೋಜನೆ 5 ವರ್ಷಗಳವರೆಗೆ ಇರಲಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವವರಿಗೂ ಭಾರೀ ಸಬ್ಸಿಡಿಯನ್ನೂ ನೀಡಲಾಗುತ್ತದೆ ಎಂದವರು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X