Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಐವರು ನೌಕರರ ವಿರುದ್ಧ...

ಶಿವಮೊಗ್ಗ: ಐವರು ನೌಕರರ ವಿರುದ್ಧ ಪೌರಾಡಳಿತ ನಿರ್ದೇಶನಾಲಯದಿಂದ ಕ್ರಮ

ಇಬ್ಬರು ಅಮಾನತ್ತು, ಮೂವರ ವಿರುದ್ಧ ಶಿಸ್ತು ಕ್ರಮಕ್ಕೆ ಸರಕಾರಕ್ಕೆ ಪತ್ರ

ವಾರ್ತಾಭಾರತಿವಾರ್ತಾಭಾರತಿ19 Oct 2017 11:01 PM IST
share
ಶಿವಮೊಗ್ಗ: ಐವರು ನೌಕರರ ವಿರುದ್ಧ ಪೌರಾಡಳಿತ ನಿರ್ದೇಶನಾಲಯದಿಂದ ಕ್ರಮ

ಶಿವಮೊಗ್ಗ, ಅ.19: ಮಹಾನಗರ ಪಾಲಿಕೆಗೆ ಸೇರಿದ ಸೊತ್ತನ್ನು ಖಾಸಗಿ ಸೇವಾ ಸಮಿತಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯವು ಪಾಲಿಕೆಯ ಇಬ್ಬರು ನಿವೃತ್ತ ನೌಕರರು ಸೇರಿದಂತೆ ಐವರ ವಿರುದ್ಧ ಕ್ರಮ ಜರಗಿಸಲು ಮುಂದಾಗಿದೆ.

ಪ್ರಕರಣ ಸಂಬಂಧ ಸಹಾಯಕ ಕಂದಾಯಾಧಿಕಾರಿ ಯಶವಂತ ಹಾಗೂ ಪ್ರಥಮ ದರ್ಜೆ ಕಂದಾಯ ನಿರ್ವಾಹಕ ಎಸ್. ರವಿಕುಮಾರ್ ಅವರನ್ನು ಅಮಾನತು ಗೊಳಿಸಲಾಗಿದೆ. ಕಂದಾಯ ವಿಭಾಗದ ಉಪ ಆಯುಕ್ತ ಎ.ಜೆ.ನಾಗರಾಜ್ ಅವರು ಮೂಲತಃ ಕರ್ನಾಟಕ ರಾಜ್ಯ ಹಣಕಾಸು ಇಲಾಖೆಗೆ ಸೇರಿದವರಾಗಿದ್ದು, ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೋರಿ ಸರಕಾರಕ್ಕೆ ಪತ್ರ ಬರೆಯಲಾಗುತ್ತಿದೆ.

ಜೊತೆಗೆ ಈಗಾಗಲೇ ವಯೋ ನಿವೃತ್ತಿ ಹೊಂದಿರುವ ಕಂದಾಯಾಧಿಕಾರಿ ರುಕ್ಮಿಣಿ ಹಾಗೂ ಕರ ವಸೂಲಿಗಾರ ಗುರುರಾಜ್ ಅವರ ವಿರುದ್ಧ ಮುಂದಿನ ಕಾನೂನು ಕ್ರಮ ಜರಗಿಸಲು ಸರಕಾರದ ನಿರ್ದೇಶನ ಕೋರಿ ಪತ್ರ ಬರೆಯಲಾಗುತ್ತಿದೆ. ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಡಾ. ಆರ್. ವಿಶಾಲ್‌ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಆರೋಪವೇನು?: ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಾಯ ಶಾಖೆಯಲ್ಲಿ ಅಕ್ರಮ - ಅವ್ಯವಹಾರಗಳು ನಡೆಯುತ್ತಿರುವ ಕುರಿತಂತೆ ಪಾಲಿಕೆ ಸದಸ್ಯರು ಆರೋಪಿಸಿದ್ದರು. ಈ ಕುರಿತಂತೆ ತನಿಖೆ ನಡೆಸುವಂತೆ ಕೋರಿ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಪೌರಾಡ ಳಿತ ನಿರ್ದೇಶನಾಲಯದ ತನಿಖಾ ತಂಡವು ಸೆಪ್ಟಂಬರ್ 7ರಿಂದ 9ರ ವರೆಗೆ ಪಾಲಿಕೆಗೆ ಆಗಮಿಸಿ ತನಿಖೆ ನಡೆಸಿತ್ತು. ಈ ನಡುವೆ ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್‌ ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟ ಪಾಲಿಕೆಯ ನೌಕರರ ವಿರುದ್ಧ ಶಿಸ್ತುಕ್ರಮ ಜರಗಿಸುವಂತೆ ಸರಕಾರಕ್ಕೆ ಪತ್ರ ಬರೆದಿದ್ದರು.

ರಾಜೇಂದ್ರ ನಗರದಲ್ಲಿರುವ ಪಾಲಿಕೆಗೆ ಸೇರಿದ ಪಂಪವನದಲ್ಲಿರುವ ಸಮುದಾಯ ಭವನವನ್ನು ಕಳೆದ ಹಲವು ವರ್ಷಗಳಿಂದ ಶ್ರೀರಾಮ ಮತ್ತು ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ನಿರ್ವಹಣೆ ಮಾಡಿಕೊಂಡು ಬರಲಾಗುತ್ತಿದ್ದು, ಇದನ್ನು ಸಮಿತಿಯ ಒಡೆತನಕ್ಕೆ ಖಾತೆ ಮಾಡಿಕೊಡುವಂತೆ ಕೋರಿ ಸಮಿತಿಯು ಪಾಲಿಕೆಗೆ ಮನವಿ ಪತ್ರ ಸಲ್ಲಿಸಿತ್ತು. ಸದರಿ ಪ್ರದೇಶದ ವಿಸ್ತೀರ್ಣ 33x86 ಎಂಬ ಮಾಹಿತಿ ನೀಡಿತ್ತು. ಆದರೆ, ಯಾವುದೇ ಕಾರಣ ನಮೂದಿಸದೆ ಪಾಲಿಕೆಯ ದಾಖಲೆಯ ಅನುಬೋಗದಾರರ ಕಾಲಂನಲ್ಲಿ ಅನುಬೋಗದಾರರ ಹೆಸರನ್ನು ನಿಯಮಬಾಹಿರವಾಗಿ ಶ್ರೀರಾಮ ಮತ್ತು ಅಯ್ಯಪ್ಪ ಸೇವಾ ಸಮಿತಿ ಎಂಬುದಾಗಿ ಬದಲಾಯಿಸಲಾಗಿತ್ತು. ಜೊತೆಗೆ ವಿಸ್ತೀರ್ಣದಲ್ಲಿ ವ್ಯತ್ಯಾಸ ಮಾಡಲಾಗಿತ್ತು. ಮೂಲ ಅಳತೆ 33x86 ಕ್ಕೆ ಬದಲಾಗಿ, 33x136 ಎಂದು ತಿದ್ದುಪಡಿ ಮಾಡಲಾಗಿತ್ತು.

ಪಾಲಿಕೆಯ ಸೊತ್ತನ್ನು ಪಾಲಿಕೆಯ ವತಿಯಿಂದ ಸ್ಪಷ್ಟ ನಿರ್ದೇಶನ ಹಾಗೂ ಸರಕಾರದಿಂದ ಮಂಜೂರಾತಿ ಪಡೆಯದೆ ಬೇರೆಯವರ ಹೆಸರಿಗೆ ಖಾತೆ ಮಾಡಿರುವುದು ನಿಯಮಬಾಹಿರವಾಗಿದೆ. ಈ ಅಕ್ರಮದಲ್ಲಿ ಆಪಾದಿತ ನೌಕರರು ಬಾಗಿಯಾಗಿರುವುದು ಕಂಡು ಬಂದಿದ್ದು, ಇವರ ವಿರುದ್ಧ ಕ್ರಮ ಜರಗಿಸುವಂತೆ ಆಯುಕ್ತರು ಪೌರಾಡಳಿತ ನಿರ್ದೇಶನಾಲಯಕ್ಕೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.

ಸಂಚಲನ: ಪಾಲಿಕೆಯ ಐವರು ಸಿಬ್ಬಂದಿ ವಿರುದ್ಧ ಪೌರಾಡಳಿತ ನಿರ್ದೇಶನಾಲಯ ಕಠಿಣ ಕ್ರಮ ಕೈಗೊಂಡಿರುವುದು ಪಾಲಿಕೆ ಆಡಳಿತದಲ್ಲಿ ಸಂಚಲನ ಮೂಡಿಸಿದೆ. ಪ್ರಭಾವಿಗಳ ರಕ್ಷಣೆಯಲ್ಲಿ ಅಕ್ರಮ, ಅವ್ಯವಹಾರದಲ್ಲಿ ಬಾಗಿಯಾಗಿರುವ ಸಿಬ್ಬಂದಿಯ ನಿದ್ದೆಗೆಡುವಂತೆ ಮಾಡಿದೆ. ಇಷ್ಟರಲ್ಲಿಯೇ ಇನ್ನೂ ಕೆಲ ಭ್ರಷ್ಟಸಿಬ್ಬಂದಿಯ ತಲೆದಂಡವಾಗುವ ಸಾಧ್ಯತೆಯಿದೆ ಎಂದು ಪಾಲಿಕೆಯ ಮೂಲಗಳು ಹೇಳುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X