ನ.1ರಂದು ಕನ್ನಡ ರಾಜ್ಯೋತ್ಸವ: ಕುಂದೂರು ಅಶೋಕ್
ಚಿಕ್ಕಮಗಳೂರು, ಅ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಸುವರ್ಣ ಕನ್ನಡ ಭವನದಲ್ಲಿ ನ.1ರಂದು ಬೆಳಗ್ಗೆ 7:30ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ತಿಳಿಸಿದ್ದಾರೆ.
ಅವರು ಗುರುವಾರ ಈ ಕುರಿತು ಹೇಳಿಕೆ ನೀಡಿದ್ದು, ನಗರಸಭೆ ಮಾಜಿ ಅಧ್ಯಕ್ಷ ಎಚ್.ಡಿ.ತಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ನಾಡ ಧ್ವಜಾರೋಹಣ ನೆರವೇರಿಸಲಿದ್ದು ಸಾಹಿತಿ ಹಳೇಕೋಟೆ ರಮೇಶ್, ಜಯಕರ್ನಾಟಕ ಜಿಲ್ಲಾಧ್ಯಕ್ಷ ಕೆ.ಆರ್.ಅನಿಲ್ ಕುಮಾರ್, ವಿಷ್ಣುಸೇನಾ ಸಮಿತಿ ಅಧ್ಯಕ್ಷ ಹರ್ಷವರ್ಧನ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಕಸಾಪ ಐದು ದಿನಗಳ ಕಾಲ ಜನೋತ್ಸವ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದ್ದಾರೆ.
Next Story