Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಕೆಂಡುಗಳಲ್ಲಿ ಮಲೇರಿಯಾ ಪತ್ತೆಹಚ್ಚಲು...

ಸೆಕೆಂಡುಗಳಲ್ಲಿ ಮಲೇರಿಯಾ ಪತ್ತೆಹಚ್ಚಲು ಬಂದಿದೆ ಹೊಸ ಸಾಧನ…

ಪ್ರತಿ ಪರೀಕ್ಷೆಗೆ ಇದರ ಬೆಲೆ 10 ರೂ..!

ವಾರ್ತಾಭಾರತಿವಾರ್ತಾಭಾರತಿ20 Oct 2017 6:26 PM IST
share
ಸೆಕೆಂಡುಗಳಲ್ಲಿ ಮಲೇರಿಯಾ ಪತ್ತೆಹಚ್ಚಲು ಬಂದಿದೆ ಹೊಸ ಸಾಧನ…

ಕೊಲ್ಕತ್ತಾ, ಅ 20:  ಕೊಲ್ಕತ್ತಾದ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ  ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಾಯನ್ಸ್ ಆ್ಯಂಡ್ ಟೆಕ್ನಾಲಜಿ, ಶಿಬ್ಪುರ್ ಇಲ್ಲಿನ ಸಂಶೋಧಕರ ತಂಡವೊಂದು ಮಲೇರಿಯಾ ಪತ್ತೆ ಹಚ್ಚುವ ಹೊಸ ಸಾಧನವೊಂದನ್ನು ಕಂಡು ಹಿಡಿದಿದೆ. ಇದು ಕೆಲವೇ ಸೆಕೆಂಡುಗಳಲ್ಲಿ  ವ್ಯಕ್ತಿಯೊಬ್ಬರಿಗೆ ಮಲೇರಿಯಾ ಇದೆಯೇ ಅಥವಾ ಇಲ್ಲವೇ ಎಂದು ಪತ್ತೆ ಹಚ್ಚುತ್ತದೆ ಎನ್ನಲಾಗಿದೆ. ಕೆಲವೊಂದು ಮಾರ್ಪಾಟುಗಳೊಂದಿಗೆ ಈ ಸಾಧನವು ಡೆಂಗ್ ಜ್ವರವನ್ನೂ ಪತ್ತೆ ಹಚ್ಚಬಹುದಾಗಿದ್ದು, ಈ ಸಾಧನವನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸಬಹುದಾಗಿದೆ.

``ಪೇಪರ್ ಮೈಕ್ರೋಸ್ಕೋಪ್ ಒಂದರ ಮೇಲೆ ಮೊಬೈಲ್ ಫೋನ್ ಕ್ಯಾಮರಾವನ್ನು ಈ ಸಾಧನಕ್ಕಾಗಿ ಅಳವಡಿಸಿದ್ದು ಇದು  ರಕ್ತದ ಮಾದರಿಯ ಚಿತ್ರವನ್ನು ಒಂದು ಸ್ಲೈಡ್ ಮೇಲೆ ಕೆಲವು ರಾಸಾಯನಿಕಗಳ ಸಹಾಯದಿಂದ ತೆಗೆಯುತ್ತದೆ. ಮಲೇರಿಯಾ ಕೋಶಗಳು ರಕ್ತದಲ್ಲಿದೆಯೇ ಅಥವಾ ಇಲ್ಲವೇ  ಎಂದು ತಿಳಿಯಲು  ಹೀಗೆ ಸಂಗ್ರಹಿಸಿದ ಮಾಹಿತಿಯನ್ನು ಸೆಂಟ್ರಲ್ ಸರ್ವರ್ ಮೂಲಕ ಪರಿಶೀಲಿಸಲಾಗುತ್ತದೆ,'' ಎಂದು ಶಿಬ್ಪುರ್ ಸಸ್ಥೆಯ ಮಾಹಿತಿ ತಂತ್ರಜ್ಞಾನ ಇಲಾಖೆಯ ಮುಖ್ಯಸ್ಥ ಡಾ ಅರಿಂದಮ್ ಬಿಸ್ವಾಸ್ ಹೇಳಿದ್ದಾರೆ.

ಈ ಸಾಧನಕ್ಕಾಗಿ ಉಪಯೋಗಿಸಲಾಗುವ ಪೇಪರ್ ಮೈಕ್ರೋಸ್ಕೋಪ್ ಅಥವಾ ಸೂಕ್ಷ್ಮದರ್ಶಕವನ್ನು ಫೋಲ್ಡ್‍ಸ್ಕೋಪ್ ಅಥವಾ ಆಪ್ಟಿಕಲ್ ಮೈಕ್ರೋಸ್ಕೋಪ್ ಎಂದೂ ಕರೆಯಲಾಗುತ್ತದೆ.

ಪ್ರತಿಯೊಂದು ಪರೀಕ್ಷೆಗೆ  ರೋಗಿಯೊಬ್ಬ ಕೇವಲ  10ರೂ ವ್ಯಯಿಸಬೇಕಾಗುತ್ತದೆ.  ಅದಕ್ಕಾಗಿ ಆತನ ಅಥವಾ ಆಕೆಯ ಬೆರಳ ತುದಿಯಿಂದ ಕೇವಲ ಒಂದು ಹನಿ ರಕ್ತ ತೆಗೆಯಲಾಗುತ್ತದೆ.

ಈ ಹೊಸ ವ್ಯವಸ್ಥೆಯನ್ನು  ಸೆಂಟಾರ್ ಎಂದು ಹೇಳಲಾಗುತ್ತಿದ್ದು  ಈ ಮಡಚಬಹುದಾದ ಪೇಪರ್ ನಿರ್ಮಿತ ಮೈಕ್ರೋಸ್ಕೋಪ್  ತಯಾರಿಸುವ ವೆಚ್ಚ ಕೇವಲ ರೂ 80 ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X