Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರದ ನಾಗರಿಕರ ಸ್ವಯಂಕೃತ ಅಪರಾಧದಿಂದ ಕಸದ...

ನಗರದ ನಾಗರಿಕರ ಸ್ವಯಂಕೃತ ಅಪರಾಧದಿಂದ ಕಸದ ರಾಶಿ

ಬೆಂಗಳೂರು ರಸ್ತೆಗಳಲ್ಲಿ ರಾಶಿಯಾದ ಪಟಾಕಿ ಕಸ

ವಾರ್ತಾಭಾರತಿವಾರ್ತಾಭಾರತಿ20 Oct 2017 6:53 PM IST
share
ನಗರದ ನಾಗರಿಕರ ಸ್ವಯಂಕೃತ ಅಪರಾಧದಿಂದ ಕಸದ ರಾಶಿ

ಬೆಂಗಳೂರು, ಅ.20: ನಗರದಲ್ಲಿ ಕಳೆದ 15 ದಿನದಿಂದ ಸುರಿದ ಭಾರೀ ಮಳೆಯಿಂದಾದ ಅನಾಹುತಗಳಿಗೆ ಸರಕಾರವನ್ನು ದೂಷಿಸಲಾಗುತ್ತಿದೆ. ಆದರೆ, ಕಳೆದ ಎರಡು ದಿನದಿಂದ ಪಟಾಕಿ ಸಿಡಿತದಿಂದಾಗಿರುವ ಕಸದ ರಾಶಿಗೆ ಬೆಂಗಳೂರು ಜನತೆಯೇ ಕಾರಣರೆಂದು ಪ್ರಜ್ಞಾವಂತ ನಾಗರಿಕರು ಆರೋಪಿಸುತ್ತಿದ್ದಾರೆ.

ಮಳೆಯಿಂದಾದ ಅನಾಹುತಗಳಿಂದ ಬೆಂಗಳೂರು ಇನ್ನೂ ಚೇತರಿಸಿಕೊಂಡಿಲ್ಲ. ಚರಂಡಿ ಹಾಗೂ ರಾಜಕಾಲುವೆಯಲ್ಲಿದ್ದ ಕಸದ ರಾಶಿಯಿಂದಾಗಿ ಮಳೆಯ ನೀರು ರಸ್ತೆಯ ಮೇಲೆ ಹೊಳೆಯಂತೆ ಹರಿಯುವ ಮೂಲಕ ಹಲವು ಸಮಸ್ಯೆಗೆ ಕಾರಣವಾಗಿತ್ತು. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ಬೆಂಗಳೂರಿನ ಜನತೆ ಪದೇ ಪದೇ ಸ್ವಯಂಕೃತ ಅಪರಾಧ ಎಸಗುವ ಮೂಲಕ ಸಮಸ್ಯೆಗೆ ಈಡಾಗುತ್ತಿದ್ದಾರೆ.

ಎಲ್ಲೆಲ್ಲೂ ಪಟಾಕಿ ರಾಶಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಘ-ಸಂಸ್ಥೆಗಳು ಬೆಳಕಿನ ಹಬ್ಬ ದೀಪಾವಳಿ ಹಬ್ಬದಂದು ಪಟಾಕಿಗೆ ಹೆಚ್ಚಿನ ಆದ್ಯತೆ ಕೊಡದೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬವನ್ನು ಆಚರಿಸಬೇಕೆಂದು ಮನವಿ ಮಾಡಿದ್ದರು. ಆದರೆ, ಇದ್ಯಾವುದರ ಬಗೆಯೂ ಚಿಂತಿಸದ ಬೆಂಗಳೂರು ಜನತೆ ತಮ್ಮ ಮನೆ ಮುಂದಿನ ರಸ್ತೆಗಳಲ್ಲಿ ಪಟಾಕಿಯನ್ನು ಸಿಡಿಸುವುದರ ಮೂಲಕ ಕಸದ ರಾಶಿಯನ್ನೇ ಸೃಷ್ಟಿಸಿದರು.

ಪೌರಕಾರ್ಮಿಕರ ಪಾಡು ಹೇಳತೀರದು: ನಗರದ ಪ್ರತಿಷ್ಠಿತ ಬಡಾವಣೆಗಳ ಜನತೆ ಹೊಸ ಬಟ್ಟೆ ತೊಟ್ಟು ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು ಸವಿದು ಹಬ್ಬದ ಸಂಭ್ರಮದಲ್ಲಿ ಮೈ ಮರೆತ್ತಿದ್ದರು. ಆದರೆ, ಇವರು ಮಾಡಿರುವ ಕಸವನ್ನು ಶುಚಿ ಮಾಡುವಲ್ಲಿ ತಮ್ಮ ಇಡೀ ದಿನವನ್ನು ವ್ಯಯಿಸಿದ ಪೌರ ಕಾರ್ಮಿಕರ ಪಾಡನ್ನು ಕೇಳುವವರೇ ಇಲ್ಲವಾಗಿತ್ತು. ಬೆಳಗ್ಗೆಯಿಂದ ಸಂಜೆವರೆಗೆ ಪಟಾಕಿಯ ಕಸದ ರಾಶಿಯನ್ನು ತೆಗೆಯುವುದರಲ್ಲಿಯೇ ದಿನ ಕಳೆದರು.

ಪಟಾಕಿಯ ಬಿಡಿ ಭಾಗಗಳು ರಸ್ತೆಯಲ್ಲಿ ಎಲ್ಲೆಂದರಲ್ಲಿ ಬಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದವು. ಪೌರ ಕಾರ್ಮಿಕರು ಪಟಾಕಿ ಸಿಡಿತದಿಂದಾದ ಕಸವನ್ನು ಶುಚಿ ಮಾಡುವಲ್ಲಿ ಹರಸಾಹಸ ಪಟ್ಟರು. ಪಟಾಕಿಯ ಮದ್ದುಪುಡಿ, ಸೀಸಾ, ಸುರ್‌ಸುರ್ ಬತ್ತಿಯ ಕಡ್ಡಿಗಳನ್ನು ಪ್ರತ್ಯೇಕ ಕಸವಾಗಿ ಬೇರ್ಪಡಿಸಿದರು.

ಈ ಬಗ್ಗೆ ವಿಜಯನಗರ ವಾರ್ಡ್‌ವೊಂದರಲ್ಲಿ ಕಸ ಗುಡಿಸುತ್ತಿದ್ದ ಪೌರ ಕಾರ್ಮಿಕ ಮಹಿಳೆ ಮಾತನಾಡಿ, ಪ್ರತಿದಿನ ಕಸ ಗುಡಿಸುವುದಕ್ಕೆ ಸಾಕು ಸಾಕಾಗುತ್ತದೆ. ಹಬ್ಬ ಹರಿದಿನಗಳಲ್ಲಿ ಕಸವನ್ನು ಗುಡಿಸಿ, ಗುಡಿಸಿಯೇ ಬೆನ್ನು ಮೂಳೆ ಸವೆಯುತ್ತದೆ. ಕಸವನ್ನು ಕಡಿಮೆ ಮಾಡಬೇಕು ಎನ್ನುವ ಬಗ್ಗೆ ಯಾರು ಚಿಂತಿಸುವುದಿಲ್ಲ. ಕಸ ಶುಚಿ ಮಾಡಲು ಪ್ರತಿದಿನ ಪೌರ ಕಾರ್ಮಿಕರು ಬರುತ್ತಾರೆ ಎಂಬ ಧೈರ್ಯದ ಮೇರೆಗೆ ಕಸವನ್ನು ಹೆಚ್ಚು ಮಾಡುತ್ತಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X