Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿವಕುಮಾರ್-ಸಿದ್ದರಾಮಯ್ಯ ಅಕ್ರಮದಲ್ಲಿ...

ಶಿವಕುಮಾರ್-ಸಿದ್ದರಾಮಯ್ಯ ಅಕ್ರಮದಲ್ಲಿ ಭಾಗಿ: ಯಡಿಯೂರಪ್ಪ ಆರೋಪ

ವಾರ್ತಾಭಾರತಿವಾರ್ತಾಭಾರತಿ21 Oct 2017 6:46 PM IST
share
ಶಿವಕುಮಾರ್-ಸಿದ್ದರಾಮಯ್ಯ ಅಕ್ರಮದಲ್ಲಿ ಭಾಗಿ: ಯಡಿಯೂರಪ್ಪ ಆರೋಪ

ಬೆಂಗಳೂರು, ಅ.21: ಕಲ್ಲಿದ್ದಲು ಗುತ್ತಿಗೆ ರದ್ದು ಕುರಿತಂತೆ ಖಾಸಗಿ ಸಂಸ್ಥೆ ಪಾವತಿಸಬೇಕಿದ್ದ ಸುಮಾರು 418 ಕೋಟಿ ರೂ.ದಂಡ ಸೇರಿ ಒಟ್ಟು 430 ಕೋ. ರೂ. ಹಣವನ್ನು ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಒಳಒಪ್ಪಂದ ಮಾಡಿಕೊಂಡು ಅಕ್ರಮವಾಗಿ ಪಾವತಿಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅಕ್ರಮವಾಗಿ ದಂಡ ಪಾವತಿಸಿರುವ ಕುರಿತು ದಾಖಲೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತನ್ನ ರಾಜಕೀಯ ಜೀವನದಲ್ಲಿ ಕಂಡರಿಯದ ಬಹಿರಂಗವಾಗಿ ನಡೆದಿರುವ ದೊಡ್ಡ ಹಗರಣ ಇದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಕಾರದ ಖಜಾನೆಯನ್ನು ಹಗಲು ದರೋಡೆ ಮಾಡಿದ್ದಾರೆ ಎಂದು ಆರೋಪಿಸಿದರು.

ನಿಗದಿಪಡಿಸಿದ್ದ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲನ್ನು ಹೊರತೆಗೆದಿದ್ದಕ್ಕೆ ಕೊಲ್ಕತ್ತ ಮೂಲದ ಖಾಸಗಿ ಸಂಸ್ಥೆಯಾದ ಇಎಂಟಿಎ ಹಾಗೂ ಕೆಪಿಸಿಎಲ್ ಸಹಭಾಗಿತ್ವದ ಕೆಇಎಂಸಿಎಲ್ ಸಂಸ್ಥೆಗೆ 2014ರಲ್ಲಿ ಸುಪ್ರೀಂ ಕೋರ್ಟ್ ದಂಡ ವಿಧಿಸಿತ್ತು. ಕಲ್ಲಿದ್ದಲು ಹಂಚಿಕೆಯನ್ನು ರದ್ದುಗೊಳಿಸಿದ್ದಲ್ಲದೆ, ಹೊರತೆಗೆದ ಕಲ್ಲಿದ್ದಲಿಗೆ ಪ್ರತೀ ಮೆಟ್ರಿಕ್‌ಟನ್‌ಗೆ 295 ರೂ. ದಂಡ ವಿಧಿಸಲಾಗಿತ್ತು. ದಂಡದಲ್ಲಿ ಶೇ.74ರಷ್ಟು ಮೊತ್ತವನ್ನು ಖಾಸಗಿ ಸಂಸ್ಥೆ ಇಎಂಟಿಎ ಸಂಸ್ಥೆಯೇ ಪಾವತಿಸಬೇಕು ಎಂದು ಕೋರ್ಟ್ ತೀರ್ಪು ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗಿರುವ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿರ್ದೇಶಕರಾಗಿರುವ ಕೆಪಿಸಿಎಲ್ ಸಂಸ್ಥೆ ಭರಿಸಬೇಕಿದ್ದ ಶೇ. 26ರಷ್ಟು ಬದಲಾಗಿ ಸಂಪೂರ್ಣ ದಂಡವನ್ನು ಭರಿಸಿ ಅಕ್ರಮ ಎಸಗಿದ್ದಾರೆ ಎಂದು ದೂರಿದರು.

2014 ಡಿಸೆಂಬರ್ 30ರಂದು ಇಎಂಟಿಎ ಸಂಸ್ಥೆಗೆ ಮುಖ್ಯಮಂತ್ರಿ ಸ್ವತಃ ಪತ್ರ ಬರೆದು ನೀವೆ ಭರಿಸಿ ಎಂದು ಸೂಚಿಸಿದ್ದರು. ಅದಾದ ಒಂದೇ ದಿನದಲ್ಲಿ ತಾನೂ ಕೂಡ ಪಾಲುದಾರಿಕೆ ಹೊಂದಿದ ಕಾರಣ 110 ಕೋಟಿ ರೂ. ಹಣ ನೀಡುವ ನಿರ್ಧಾರ ಪ್ರಕಟಿಸಿತು. ನಂತರ ದಂಡದ ಪೂರ್ಣ ಮೊತ್ತವನ್ನು ಪಾವತಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಿಕ್‌ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದರು.

ಸಿಬಿಐ ತನಿಖೆಗೆ ಆಗ್ರಹಿಸಿ ಕೇಂದ್ರಕ್ಕೆ ಪತ್ರ: ದಂಡ ಪಾವತಿ ವಿಚಾರದಲ್ಲಿ ನಡೆದಿರುವ ಕೋಟ್ಯಂತರ ಹಗರಣ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಕೂಡಲೇ ಕೇಂದ್ರಕ್ಕೆ ಪತ್ರ ಬರೆಯುತ್ತೇವೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪತ್ರ ಬರೆದು ಹಗರಣ ದಾಖಲೆಗಳನ್ನು ಕಳುಹಿಸಲಾಗುತ್ತದೆ ಎಂದು ತಿಳಿಸಿದರು.

ಉತ್ತರಿಸಲಿ: ದಂಡ ಪಾವತಿ ವಿಚಾರದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಮನೆ ಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಜನರು ಛೀಮಾರಿ ಹಾಕಲಿದ್ದಾರೆ. ಹನ್ನೊಂದು ಬಾರಿ ಬಜೆಟ್ ಮಂಡಿಸಿದ್ದೇನೆ ಎಂದು ಹೇಳಿಕೊಂಡು ಓಡಾಡುತ್ತಿರುವ ಮೇದಾವಿ ಸಿದ್ದರಾಮಯ್ಯ ಈಗ ಜನರಿಗೆ ಉತ್ತರಿಸಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಸಂಸದರಾದ ಪಿ.ಸಿ. ಮೋಹನ್, ಜಿ.ಎಂ.ಸಿದ್ದೇಶ್ವರ್, ಶಾಸಕರಾದ ವಿಶ್ವನಾಥ್, ಅಶ್ವತ್ಥ್ ನಾರಾಯಣ, ಎಸ್ಸಿ ಮೋರ್ಚಾದ ಅಧ್ಯಕ್ಷ ಡಿ.ಎಸ್.ವೀರಯ್ಯ ಸೇರಿದಂತೆ ಇತರರು ಇದ್ದರು.

'ಯಾವುದೇ ತನಿಖೆಗೂ ಸಿದ್ಧ'
ಕೇಂದ್ರ ಸರಕಾರ ರೂಪಿಸಿದ ನೀತಿಗಳಿಗೆ ಅನುಗುಣವಾಗಿಯೇ ಕಲ್ಲಿದ್ದಲು ಹರಾಜು ಮಾಡಿದ್ದೇವೆ. ವಾಜಪೇಯಿ ಸರಕಾರ ಕೋಲ್ ಬ್ಲಾಕ್ ನಿಗದಿ ಮಾಡಿತ್ತು. ಅದರ ಅನುಗುಣವಾಗಿಯೇ ಗಣಿ ಹಂಚಿಕೆ ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಲಂಚ ಪಡೆದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಯಾವುದೇ ತನಿಖೆಗೂ ನಾನು ಸಿದ್ಧ.

-ಡಿ.ಕೆ. ಶಿವಕುಮಾರ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X