Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧಿ ತತ್ವ ಅನುಸರಿಸುವವರೆಲ್ಲರೂ ನಮ್ಮ...

ಗಾಂಧಿ ತತ್ವ ಅನುಸರಿಸುವವರೆಲ್ಲರೂ ನಮ್ಮ ಬಂಧುಗಳು: ಗಾಂಧಿ ಮೊಮ್ಮಗಳು ಸುಮಿತ್ರಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ21 Oct 2017 8:48 PM IST
share
ಗಾಂಧಿ ತತ್ವ ಅನುಸರಿಸುವವರೆಲ್ಲರೂ ನಮ್ಮ ಬಂಧುಗಳು: ಗಾಂಧಿ ಮೊಮ್ಮಗಳು ಸುಮಿತ್ರಾ ಗಾಂಧಿ

ಬೆಂಗಳೂರು, ಅ.21: ಸತ್ಯ, ಅಹಿಂಸೆ ಸೇರಿದಂತೆ ರಾಷ್ಟ್ರಪಿತ ಮಹಾತ್ಮಗಾಂಧಿಯ ತತ್ವಗಳನ್ನು ಅನುಸರಿಸುವ ಎಲ್ಲರೂ ನಮ್ಮ ಬಂಧುಗಳಾಗುತ್ತಾರೆ ಎಂದು ಮಹಾತ್ಮಗಾಂಧಿಯವರ ಮೊಮ್ಮಗಳು ಸುಮಿತ್ರಾ ಗಾಂಧಿ ಕುಲಕರ್ಣಿ ಅಭಿಪ್ರಾಯಿಸಿದ್ದಾರೆ.

ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದ ಕಸಾಪದಲ್ಲಿ ಆಯೋಜಿಸಿದ್ದ ಗಾಂಧಿ ಪುದುವಟ್ಟು ಪ್ರಶಸ್ತಿ ಹಾಗೂ ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿ ಇಡೀ ದೇಶಕ್ಕೆ ಸತ್ಯದ, ತ್ಯಾಗದ ಸಂದೇಶ ಸಾರಿದ್ದಾರೆ. ಅದೇ ರೀತಿ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸುವವರಿಗಿಂತ ದೊಡ್ಡ ಸಂಬಂಧಿಗಳು ನನಗೆ ಬೇರೆ ಯಾರೂ ಇಲ್ಲ ಎಂದು ಹೇಳಿದರು.

ಗಾಂಧಿ ಪುದುವಟ್ಟು ಸ್ಥಾಪಕ ಎ.ಆರ್.ನಾರಾಯಣ ಘಟ್ಟ ಮಾತನಾಡಿ, ಭಾರತೀಯ ಕಾವ್ಯ ಮೀಮಾಂಸೆಗೆ ಮಹಾತ್ಮಗಾಂಧಿ ಸರ್ವೋದಯ ಮತ್ತು ಅಹಿಂಸೆ ಎಂಬ ಮಹತ್ವವಾದ ರತ್ನಗಳನ್ನು ನೀಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಭಾರತೀಯ ಗುಲಾಮಗಿರಿ ವಿರುದ್ಧ ಅವರು ರೂಪಿಸಿದ ಚಳವಳಿ ಚರಿತ್ರಾರ್ಹವಾದದು ಎಂದರು.

ಮಹಾತ್ಮಗಾಂಧಿ ಅಂದು ರೂಪಿಸಿದ ಚಳವಳಿಗೆ ಸತ್ಯಾಗ್ರಹ ಎಂದು ಹೆಸರಿಟ್ಟಿದ್ದರು. ಸತ್ಯಾಗ್ರಹ ಎಂದರೆ, ಸತ್ಯಕ್ಕಾಗಿ ಮಾಡುವ ಆಗ್ರಹ ಎಂಬುದು ಅವರ ಆಶಯವಾಗಿತ್ತು. ಆದರೆ, ಇಂದು ಸತ್ಯಾಗ್ರಹದ ಹೆಸರಿನಲ್ಲಿ ನಡೆಯುತ್ತಿರುವ ಚಳವಳಿಗಳು ಬಹುತೇಕ ದಾರಿ ತಪ್ಪಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇತ್ತೀಚಿಗೆ ಕೈ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವಿಧಿಸಿದ್ದನ್ನು ಖಂಡಿಸಿ ಪ್ರಸನ್ನ ಅವರು ನಡೆಸಿದ ಸತ್ಯಾಗ್ರಹ ನಿಜವಾದ ಸತ್ಯಾಗ್ರಹ ಎಂದು ಬಣ್ಣಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೂಡೇ ಪಿ.ಕೃಷ್ಣ, ಸತ್ಯ, ಅಹಿಂಸೆ ಮೂಲಕ ಅತ್ಯಂತ ಸರಳ ಬದುಕು ನಡೆಸಿದವರು ಗಾಂಧಿ. ಹೀಗಾಗಿ, ಇಂದಿನ ನಮ್ಮ ಸಮಾಜಕ್ಕೆ ಬೇಕಾಗಿರುವುದು ಇಂಜಿನಿಯರ್-ತಂತ್ರಜ್ಞಾನದ ಮನುಷ್ಯರಲ್ಲ. ಬದಲಿಗೆ, ಗಾಂಧಿತತ್ವಗಳನ್ನು ಆದರ್ಶವನ್ನಾಗಿಸಿಕೊಂಡ ಜನಗಳನ್ನು ತಯಾರು ಮಾಡಬೇಕು ಎಂದು ಹೇಳಿದರು.

ಸಮಾಜದಲ್ಲಿ ಕಳಂಕ ರಹಿತವಾದ ಜೀವನ ನಡೆಸುವ, ಆಚಾರ-ವಿಚಾರ ಶುದ್ಧವಾಗಿರಿಸಿಕೊಳ್ಳುವ, ತ್ಯಾಗಮಯ ಜೀವನ ಅಳವಡಿಸಿಕೊಳ್ಳುವ ಹಾಗೂ ಅವಮಾನವನ್ನು ಸಹಿಸಿಕೊಂಡು ಸಮ ಸಮಾಜದ ಕನಸು ಕಾಣುವ ವ್ಯಕ್ತಿಗಳು ಈ ಸಮಾಜಕ್ಕೆ ಬೇಕಾಗಿದೆ. ಹೀಗಾಗಿ, ಗಾಂಧಿ ತತ್ವಗಳನ್ನು ಪ್ರಚಾರ ಮಾಡಬೇಕು. ಆಗ ಮಾತ್ರ ನಮ್ಮ ದೇಶ ಉಳಿಯಲು ಸಾಧ್ಯ ಎಂದು ತಿಳಿಸಿದರು.

ಈ ವೇಳೆ ಪಿ.ಕೆ.ನಾರಾಯಣ ದತ್ತಿ ಪ್ರಶಸ್ತಿಯನ್ನು ಕೆ.ಟಿ.ಗಟ್ಟಿ ಪರವಾಗಿ ಅವರ ಸೋದರ ಕೆ.ಆರ್.ಗಟ್ಟಿಗೆ ಹಾಗೂ ಗಾಂಧಿ ಪುದುವಟ್ಟು ಪ್ರಶಸ್ತಿಯನ್ನು ಡಾ.ವೂಡೇ ಪಿ.ಕೃಷ್ಣಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಸಾಪ ರಾಜ್ಯಾಧ್ಯಕ್ಷ ಡಾ.ಮನುಬಳಿಗಾರ್, ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ ದಾನಿ ವರದಾ ಶ್ರೀನಿವಾಸ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X