Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು; ವೆಬ್‌ಸೈಟ್‌ನಲ್ಲಿ ಕಾರು...

ಮಂಗಳೂರು; ವೆಬ್‌ಸೈಟ್‌ನಲ್ಲಿ ಕಾರು ಮಾರಾಟದ ಜಾಹಿರಾತು ನಂಬಿ ಮೋಸ ಹೋದ ವ್ಯಕ್ತಿ

ಸೈಬರ್ ಠಾಣೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ21 Oct 2017 11:00 PM IST
share
ಮಂಗಳೂರು; ವೆಬ್‌ಸೈಟ್‌ನಲ್ಲಿ ಕಾರು ಮಾರಾಟದ ಜಾಹಿರಾತು ನಂಬಿ ಮೋಸ ಹೋದ ವ್ಯಕ್ತಿ

ಮಂಗಳೂರು, ಅ.21: ವೆಬ್‌ಸೈಟ್‌ವೊಂದರಲ್ಲಿ ಕಾರು ಮಾರಾಟದ ಜಾಹಿರಾತಿನ ಆಧಾರದ ಮೇಲೆ ವ್ಯವಹರಿಸಿದ ವ್ಯಕ್ತಿಯೊಬ್ಬರು ಮೋಸ ಹೋದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಅಬ್ದುಲ್ ನಾಸಿರ್ ಎಂಬವರು ಅ.6ರಂದು ವೆಬ್‌ಸೈಟ್‌ವೊಂದರಲ್ಲಿ ಕಾರು ಮಾರಾಟದ ಜಾಹಿರಾತು ಗಮನಿಸಿ ಆ ಕಾರನ್ನು ಖರೀದಿಸಲು ಮುಂದಾದರು. ಅದರಂತೆ ಜಾಹಿರಾತಿನಲ್ಲಿ ತಿಳಿಸಿದ ವ್ಯಕ್ತಿಗೆ ಕಾರಿನ ಬಗ್ಗೆ ಸಂದೇಶ ಕಳುಹಿಸಿದರು. ಬಳಿಕ ನಾಸಿರ್‌ಗೆ ಫೋನ್ ಕರೆ ಮಾಡಿದ ವ್ಯಕ್ತಿ ತನ್ನ ಹೆಸರು ಗೌನ್ಸ್, ತಾನು ಡಾಕ್ಟರ್ ಎಂದು ಇಂಗ್ಲಿಷ್‌ನಲ್ಲಿ ತಿಳಿಸಿದ. ತನಗೆ ಇಂಗ್ಲಿಷ್ ಬರುವುದಿಲ್ಲ ಎಂದು ನಾಸಿರ್ ತಿಳಿಸಿದಾಗ ಆ ವ್ಯಕ್ತಿ ಇನ್ನೊಂದು ಮೊಬೈಲ್ ಸಂಖ್ಯೆ ನೀಡಿ ಬೆಂಗಳೂರು ಏರ್‌ಪೋರ್ಟ್‌ಗೆ ಬರುವಂತೆ ಸೂಚಿಸಿದರು.

ಹಾಗೇ ನಾಸಿರ್ ಅ.13ರಂದು ಬೆಂಗಳೂರಿಗೆ ತೆರಳಿ ಮೊಬೈಲ್‌ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ಮಹಿಳೆ ತನ್ನನ್ನು ಅನಿತಾ ಕುಮಾರಿ ಎಂದು ಕನ್ನಡದಲ್ಲಿ ಪರಿಚಯಿಸಿ ನೀವು ಖರೀದಿಸಲು ಬಯಸುವ ಸ್ವಿಫ್ಟ್ ಕಾರು ಏರ್‌ಪೋರ್ಟ್ ಪಾರ್ಕಿಂಗ್‌ನಲ್ಲಿದೆ. ಅದರ ಪಾರ್ಕಿಂಗ್ ಶುಲ್ಕ 87,000 ರೂ. ಪಾವತಿಸಲು ಸೂಚಿಸಿದರು. ನಾಸಿರ್ ತನ್ನಲ್ಲಿ ಅಷ್ಟೊಂದು ಹಣ ಇಲ್ಲ ಎಂದಾಗ ಆ ಮಹಿಳೆ ಜೆ.ಸಿ.ಪ್ರಕಾಶ್ ಎಂಬವರ ಖಾತೆಗೆ 25,000 ರೂ.ವನ್ನು ಜಮೆ ಮಾಡಲು ಹೇಳಿದರು. ಅದರಂತೆ ನಾಸಿರ್ ಮಂಗಳೂರಿನಲ್ಲಿರುವ ತನ್ನ ಅಣ್ಣ ಆಸೀಫ್ ಬಳಿ ಸದ್ರಿ ಖಾತೆಗೆ 25,000 ರೂ. ಹಾಕಲು ತಿಳಿಸಿದರು. ಸ್ವಲ್ಪ ಹೊತ್ತಿನಲ್ಲಿ ಅದೇ ನಂಬ್ರದಿಂದ ಕರೆ ಮಾಡಿದ ಮಹಿಳೆ ಇನ್ನೂ 25,000 ರೂ. ಜಮೆ ಮಾಡಲು ತಿಳಿಸಿದರು. ಅದರಂತೆ ಮತ್ತೆ 25,000 ರೂ. ಪುನ: ಅದೇ ಅಕೌಂಟ್‌ಗೆ ಹಾಕಲಾಯಿತು.

ಆ ಬಳಿಕ ಅನಿತಾ ಕುಮಾರಿಗೆ ಅನೇಕ ಬಾರಿ ಕರೆ ಮಾಡಿದರೂ ಸ್ವೀಕರಿಸಿಲ್ಲ. ಬಳಿಕ ಗೌನ್ಸ್‌ರನ್ನು ಸಂಪರ್ಕಿಸಿದಾಗ ‘ನೀವು ಈಗ ಹೊರಡಿ. ನಾಳೆ ನೀವು ಕಾರು ನೋಡಿ. ಒಂದಾ ನಿಮಗೆ ಕಾರು ನೀಡುತ್ತೇವೆ. ಇಲ್ಲವಾದಲ್ಲಿ ನೀವು ಕಟ್ಟಿದ 50,000 ರೂ. ವಾಪಸ್ ನೀಡುತ್ತೇವೆ’ ಎಂದರು. ಬಳಿಕ ಇಬ್ಬರ ಮೊಬೈಲ್ ಸ್ವಿಚ್ಚ್ ಆಫ್ ಆಗಿದೆ ಎಂದು ಜಾಹಿರಾತು ವೀಕ್ಷಿಸಿ ಮೋಸ ಹೋದ ನಾಸಿರ್ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X