Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆಯಿಂದ ನ್ಯೂಝಿಲೆಂಡ್ ವಿರುದ್ಧ ಏಕದಿನ...

ನಾಳೆಯಿಂದ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿ

ಭಾರತಕ್ಕೆ ಸರಣಿ ಗೆಲುವಿನ ಚಿತ್ತ

ವಾರ್ತಾಭಾರತಿವಾರ್ತಾಭಾರತಿ21 Oct 2017 11:38 PM IST
share
ನಾಳೆಯಿಂದ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿ

ಮುಂಬೈ, ಅ.21: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ರವಿವಾರ ನಡೆಯಲಿದ್ದು, ಭಾರತ ಕ್ಲೀನ್ ಸ್ವೀಪ್ ಸಾಧಿಸುವ ಯೋಜನೆಯಲ್ಲಿದೆ.

ವಿಶ್ವ ಚಾಂಪಿಯನ್ ಆಸ್ಟ್ರೇಲಿಯ ವಿರುದ್ಧ 4-1 ಅಂತರದಲ್ಲಿ ಗೆಲುವು ದಾಖಲಿಸಿದ್ದ ಭಾರತಕ್ಕೆ ನ್ಯೂಝಿಲೆಂಡ್ ವಿರುದ್ಧ ಸವಾಲು ಕಠಿಣವಲ್ಲ. ಆದರೆ ನ್ಯೂಝಿಲೆಂಡ್ ಗೆಲುವಿಗೆ ಪ್ರಯತ್ನ ನಡೆಸಲಿದೆ.

 ಟೀಮ್ ಇಂಡಿಯಾವನ್ನು ತವರಿನಲ್ಲಿ ಮಣಿಸುವುದು ಕಷ್ಟ. ಈತನಕ ನ್ಯೂಝಿಲೆಂಡ್‌ಗೆ ಭಾರತದಲ್ಲಿ ಸರಣಿ ಗೆಲುವು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯ ವಿರುದ್ಧ 2009-10ರಲ್ಲಿ ಪಾಕಿಸ್ತಾನ ವಿರುದ್ಧ 2012ರಲ್ಲಿ ಭಾರತ ಸರಣಿ ಸೋಲು ಅನುಭವಿಸಿತ್ತು.

 ನಾಯಕ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಮತ್ತು ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಭಾರತ ಆಸ್ಟ್ರೇಲಿಯ ವಿರುದ್ಧ ಸರಣಿ ಗೆಲುವು ದಾಖಲಿಸಿತ್ತು. ಉಪನಾಯಕ ರೋಹಿತ್ ಶರ್ಮ 1 ಶತಕ ಮತ್ತು 2 ಅರ್ಧಶತಕಗಳನ್ನು ಒಳಗೊಂಡ 296 ರನ್ ದಾಖಲಿಸಿದ್ದರು.ಅಜಿಂಕ್ಯ ರಹಾನೆ 4 ಅರ್ಧಶತಕಗಳನ್ನು ಒಳಗೊಂಡ 244 ರನ್. ಹಾರ್ದಿಕ್ ಪಾಂಡ್ಯ 222 ರನ್ ಮತ್ತು ಮಹೇಂದ್ರ ಸಿಂಗ್ ಧೋನಿ ತಂಡದ ಗೆಲುವಿಗೆ ಉಪಯುಕ್ತ ಕೊಡುಗೆ ನೀಡಿದ್ದರು.

  ಭಾರತದ ಆಟಗಾರರು ಇದೇ ಪ್ರದರ್ಶನವನ್ನು ಮುಂದುವರಿಸಿದರೆ ನ್ಯೂಝಿಲೆಂಡ್ ವಿರುದ್ಧ ಭಾರತಕ್ಕೆ ಇನ್ನೊಂದು ಸರಣಿ ಗೆಲುವು ಖಚಿತ. ಭಾರತದ ಸ್ಪಿನ್ನರ್‌ಗಳಾದ ಕುಲ್‌ದೀಪ್ ಯಾದವ್ , ಯಜುವೇಂದ್ರ ಚಹಾಲ್ , ಅಕ್ಷರ್ ಪಟೇಲ್ ಸವಾಲು ನ್ಯೂಝಿಲೆಂಡ್‌ಗೆ ಎದುರಾಗಲಿದೆ. ಭುವನೇಶ್ವರ ಕುಮಾರ್ ಮತ್ತು ಜಸ್‌ಪ್ರೀತ್ ಬುಮ್ರಾ ವೇಗದ ಬೌಲಿಂಗ್ ದಾಳಿ ಆರಂಭಿಸಲಿದ್ದಾರೆ.

 ನ್ಯೂಝಿಲೆಂಡ್ ಭಾರತದ ಮಂಡಳಿ ಅಧ್ಯಕ್ಷರ ಇಲೆವೆನ್ ವಿರುದ್ಧದ ಎರಡು ಅಭ್ಯಾಸ ಪಂದ್ಯಗಳ ಪೈಕಿ ಒಂದರಲ್ಲಿ ಗೆಲುವು ದಾಖಲಿಸಿತ್ತು. ಮಾಜಿ ನಾಯಕ ಮತ್ತು ಹಿರಿಯ ಬ್ಯಾಟ್ಸ್ ಮನ್ ರಾಸ್ ಟೇಲರ್ ಶತಕ ದಾಖಲಿಸಿದ್ದರು.

 ಉತ್ತಮ ಫಾರ್ಮ್‌ನಲ್ಲಿರುವ ರಾಸ್ ಟೇಲರ್, ಆರಂಭಿಕ ದಾಂಡಿಗರಾದ ಮಾರ್ಟಿನ್ ಗಪ್ಟಿಲ್ ಮತ್ತು ಕೇನ್ ವಿಲಿಯಮ್ಸನ್ ಅವರ ಬ್ಯಾಟಿಂಗ್‌ನ್ನು ನ್ಯೂಝಿಲೆಂಡ್ ಅವಲಂಭಿಸಿದೆ. ಟೇಲರ್ ಜೊತೆ ಟಾಮ್ ಲಥಾಮ್ ಎರಡನೆ ಅಭ್ಯಾಸ ಪಂದ್ಯದಲ್ಲಿ ಶತಕ ದಾಖಲಿಸಿದ್ದರು. ವೇಗದ ಬೌಲರ್‌ಗಳಾದ ಟ್ರೆಂಟ್ ಬೌಲ್ಟ್ ಮತ್ತು ಟಿಮ್ ಸೌಥಿ ವೇಗದ ಬೌಲಿಂಗ್ ದಾಳಿ ಆರಂಭಿಸಲಿದ್ದಾರೆ. ಸ್ಪಿನ್ನರ್‌ಗಳಾದ ಮಿಚೆಲ್ ಸ್ಯಾಂಟ್ನೆರ್ ಮತ್ತು ಐಶ್ ಸೋಧಿ ಭಾರತದ ಮಧ್ಯಮ ಸರದಿಯ ದಾಂಡಿಗರನ್ನು ಕಾಡಲಿದ್ದಾರೆ.

ಮೊದಲ ಪಂದ್ಯದಲ್ಲಿ ರಹಾನೆಗೆ ಅವಕಾಶವಿಲ್ಲ

ಆರಂಭಿಕ ದಾಂಡಿಗ ಶಿಖರ್ ಧವನ್ ತಂಡಕ್ಕೆ ವಾಪಸಾಗಿರುವ ಹಿನ್ನೆಲೆಯಲ್ಲಿ ಅಜಿಂಕ್ಯ ರಹಾನೆ ಅವರು ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಅಂತಿಮ ಹನ್ನೊಂದರ ಬಳಗದಿಂದ ದೂರ ಉಳಿಯ ಬೇಕಾಗುತ್ತದೆ.

ಶಿಖರ್ ಧವನ್ ಮತ್ತು ರೋಹಿತ್ ಶರ್ಮ ಇನಿಂಗ್ಸ್ ಆರಂಭಿಸಲಿದ್ದಾರೆ. ರಹಾನೆ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಧವನ್ ಅನುಪಸ್ಥಿತಿಯಲ್ಲಿ ರಹಾನೆ ಚೆನ್ನಾಗಿ ಆಡಿದ್ದರೂ ಅವರಿಗೆ ಅವರ ಸ್ಥಾನ ಖಾಯಂ ಆಗಿಲ್ಲ.

ಭಾರತ

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ಅಜಿಂಕ್ಯ ರಹಾನೆ, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್ ಮತ್ತು ಶಾರ್ದೂಲ್ ಠಾಕೂರ್.

ನ್ಯೂಝಿಲೆಂಡ್

ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರಾಂಡ್‌ಹೊಮ್, ಮಾರ್ಟಿನ್ ಗಪ್ಟಿಲ್, ಮ್ಯಾಟ್ ಹೆನ್ರಿ, ಟಾಮ್ ಲಥಾಮ್, ಹೆನ್ರಿ ನಿಕೊಲಾಸ್, ಆ್ಯಡಮ್ ಮಿಲ್ನೆ, ಕಾಲಿನ್ ಮುನ್ರೊ, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನೆರ್, ಟಿಮ್ ಸೌಥಿ, ರಾಸ್ ಟೇಲರ್, ಜಾರ್ಜ್ ವೋಕರ್, ಐಶ್ ಸೋಧಿ.

ಪಂದ್ಯದ ಸಮಯ: ಮಧ್ಯಾಹ್ನ 1:30ಕ್ಕೆ ಆರಂಭ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X