Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಳೆ ಸ್ಪೇನ್-ಇರಾನ್, ಜರ್ಮನಿ-ಬ್ರೆಝಿಲ್...

ನಾಳೆ ಸ್ಪೇನ್-ಇರಾನ್, ಜರ್ಮನಿ-ಬ್ರೆಝಿಲ್ ಹಣಾಹಣಿ

ವಾರ್ತಾಭಾರತಿವಾರ್ತಾಭಾರತಿ21 Oct 2017 11:47 PM IST
share
ನಾಳೆ ಸ್ಪೇನ್-ಇರಾನ್, ಜರ್ಮನಿ-ಬ್ರೆಝಿಲ್ ಹಣಾಹಣಿ

ಕೊಚ್ಚಿ, ಅ.21: ಫಿಫಾ ಅಂಡರ್-17 ವಿಶ್ವಕಪ್ ಟೂರ್ನಿಯ ಕೊನೆಯ ಎರಡು ಕ್ವಾರ್ಟರ್ ಫೈನಲ್ ಪಂದ್ಯಗಳು ರವಿವಾರ ನಡೆಯಲಿದೆ. ಕೊಚ್ಚಿಯಲ್ಲಿ ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಪೇನ್ ಹಾಗೂ ಇರಾನ್ ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತಾದಲ್ಲಿ ನಡೆಯಲಿರುವ ಮತ್ತೊಂದು ಅಂತಿಮ-8ರ ಪಂದ್ಯದಲ್ಲಿ ಜರ್ಮನಿ ವಿರುದ್ಧ ಬ್ರೆಝಿಲ್ ಹೋರಾಟ ನಡೆಸಲಿದೆ.

ರವಿವಾರ ಸಂಜೆ 5ಕ್ಕೆ ನಡೆಯಲಿರುವ ಪಂದ್ಯದಲ್ಲಿ ಇರಾನ್ ತಂಡ ಸ್ಪೇನ್ ವಿರುದ್ಧ ಐತಿಹಾಸಿಕ ಜಯ ಸಾಧಿಸುವ ವಿಶ್ವಾಸದಲ್ಲಿದೆ. ಏಷ್ಯಾದ ಬಲಿಷ್ಠ ತಂಡ ಇರಾನ್ ಈತನಕ ಟೂರ್ನಿಯಲ್ಲಿ ಆಡಿರುವ ಎಲ್ಲ 4 ಪಂದ್ಯಗಳನ್ನು ಜಯಿಸಿದೆ. ಪ್ರತಿ ಪಂದ್ಯದಲ್ಲಿ ಸರಾಸರಿ 3 ಗೋಲುಗಳನ್ನು ಬಾರಿಸಿದೆ. ಗೋವಾದಲ್ಲಿ ನಡೆದಿದ್ದ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಮೆಕ್ಸಿಕೊವನ್ನು 2-1 ರಿಂದ ಮಣಿಸಿತ್ತು.

 ಟೂರ್ನಿಯ ಮೊದಲ ಪಂದ್ಯದಲ್ಲಿ ಬ್ರೆಝಿಲ್ ವಿರುದ್ಧ ಸೋತಿದ್ದ ಯುರೋ ಚಾಂಪಿಯನ್ ಸ್ಪೇನ್ ತಂಡ ಆ ಬಳಿಕ ನೈಜರ್ ಹಾಗೂ ಕೊರಿಯಾ ವಿರುದ್ಧ ಸುಲಭ ಜಯ ಸಾಧಿಸಿ ಅಂತಿಮ-16ರ ಸುತ್ತಿಗೇರಿತ್ತು. ಅಂತಿಮ-16ರ ಸುತ್ತಿನ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 2-1 ರಿಂದ ಜಯಿಸಿ ತನ್ನ ಶಕ್ತಿ ಪ್ರದರ್ಶನ ಮಾಡಿರುವ ಸ್ಪೇನ್ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಸ್ಪೇನ್ ನಾಯಕ ಅಬೆಲ್ ರುಯೆಝ್ ಒಟ್ಟು 21 ಗೋಲುಗಳನ್ನು ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದಾರೆ.

 ಇರಾನ್ ತಂಡ ಇದೇ ಮೊದಲ ಬಾರಿ ಅಂಡರ್-17 ವಿಶ್ವಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ತಲುಪಿದ್ದು, ಇದೇ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದೆ.

ಜರ್ಮನಿಗೆ ಬ್ರೆಝಿಲ್ ಸವಾಲು

ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿರುವ ಬ್ರೆಝಿಲ್ ತಂಡ ರಾತ್ರಿ 8ಕ್ಕೆ ಕೋಲ್ಕತಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಜರ್ಮನಿಯನ್ನು ಎದುರಿಸಲಿದೆ.

ಜರ್ಮನಿ-ಬ್ರೆಝಿಲ್ ತಂಡಗಳು ಏಳು ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಬ್ರೆಝಿಲ್ 3 ಬಾರಿ ಜಯ ಸಾಧಿಸಿದರೆ, ಜರ್ಮನಿ ಎರಡು ಬಾರಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿದೆ.

2011ರಲ್ಲಿ ಮೆಕ್ಸಿಕೊದಲ್ಲಿ ಮೂರನೆ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿವೆ. ಆ ಪಂದ್ಯವನ್ನು ಜರ್ಮನಿ 4-3 ಅಂತರದಿಂದ ಗೆದ್ದುಕೊಂಡಿತ್ತು.

ಜರ್ಮನಿಯ ನಾಯಕ ಹಾಗೂ ಫಾರ್ವರ್ಡ್ ಆಟಗಾರ ಜಾನ್-ಫಿಯೆಟ್ ಅರ್ಪ್ ಒಟ್ಟು 4 ಗೋಲುಗಳನ್ನು ಬಾರಿಸಿದ್ದಾರೆ.
 

ಕ್ವಾ.ಫೈನಲ್ ಪಂದ್ಯಗಳು

►ಸ್ಪೇನ್-ಇರಾನ್

   ಸ್ಥಳ: ಕೊಚ್ಚಿ, ಸಮಯ: ಸಂಜೆ 5:00

►ಜರ್ಮನಿ-ಬ್ರೆಝಿಲ್

   ಸ್ಥಳ: ಕೋಲ್ಕತಾ, ಸಮಯ:ರಾತ್ರಿ 8:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X