Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಮದುವೆ ಎನ್ನುವ ಸ್ವಾಭಿಮಾನ...

ಮದುವೆ ಎನ್ನುವ ಸ್ವಾಭಿಮಾನ ವ್ಯವಸ್ಥೆ-ಪೆರಿಯಾರ್ ಕಣ್ಣಲ್ಲಿ

-ಕಾರುಣ್ಯಾ-ಕಾರುಣ್ಯಾ22 Oct 2017 12:16 AM IST
share
ಮದುವೆ ಎನ್ನುವ ಸ್ವಾಭಿಮಾನ ವ್ಯವಸ್ಥೆ-ಪೆರಿಯಾರ್ ಕಣ್ಣಲ್ಲಿ

ವೈದಿಕ ಹಿನ್ನೆಲೆಯ ಸಾಂಪ್ರದಾಯಿಕ ಮದುವೆಗಳು ಹೇಗೆ ಅರ್ಥಹೀನ ಮತ್ತು ಅದು ಮಹಿಳೆಯರ ಸ್ವಾಭಿಮಾನಕ್ಕೆ ತರುವ ಧಕ್ಕೆ ಏನು ಎನ್ನುವುದನ್ನು ವಿವರಿಸುವ ಕೃತಿ ಪೆರಿಯಾರ್ ಅವರ ‘ಸ್ವಾಭಿಮಾನದ ಮದುವೆಗಳು’. ಪೆರಿಯಾರ್ ದ್ರಾವಿಡ ಜನರ ಏಳಿಗೆಗಾಗಿ ಆತ್ಮಗೌರವ ಚಳವಳಿಯನ್ನು ಆರಂಭಿಸಿದವರು. 1925ರ ಸಂದರ್ಭದಲ್ಲಿ ಇದೊಂದು ಪರ್ಯಾಯ ಸ್ವಾತಂತ್ರ ಹೋರಾಟದ ರೂಪ ಪಡೆದಿರುವುದು ಮತ್ತು ದಕ್ಷಿಣ ಭಾರತದಲ್ಲಿ ಸಂಚಲನ ಮೂಡಿಸಿರುವುದನ್ನು ನಾವು ಮರೆಯುವ ಹಾಗಿಲ್ಲ. ಬ್ರಾಹ್ಮಣ ಪೌರೋಹಿತ್ಯದ ಮದುವೆಗಳು ಹೇಗೆ ಶೋಷಿತ ಜನರನ್ನು ಸುಲಿಯುತ್ತಿದೆ, ಅವರನ್ನು ಆರ್ಥಿಕವಾಗಿ ದುರ್ಬಲರನ್ನಾಗಿ ಮಾಡುತ್ತಿದೆ ಮತ್ತು ಮಾನಸಿಕವಾಗಿ ಗುಲಾಮರನ್ನಾಗಿ ಮಾಡುತ್ತಿದೆ ಎನ್ನುವುದನ್ನು ಗಮನಿಸಿ ಅವರು ಅಂತರ್ಜಾತಿ ವಿವಾಹ, ಪ್ರೇಮವಿವಾಹವನ್ನು ವ್ಯವಸ್ಥಿತಿ ವಿವಾಹವಾಗಿ ಪರಿವರ್ತಿಸುವ ಸುಧಾರಣೆಯನ್ನು ತರಲು ಪ್ರಯತ್ನಿಸಿದರು. ಇದು ಆತ್ಮಗೌರವ ಚಳವಳಿ ರೂಪವನ್ನು ಪಡೆಯಿತು. ಈ ಮದುವೆಗಳು ಬ್ರಾಹ್ಮಣ್ಯ ಪೌರೋಹಿತ್ಯ ಒಂದನ್ನು ಬಿಟ್ಟು ಉಳಿದಂತೆ ಎಲ್ಲ ಆಚರಣೆಗಳು ಸಾಂಪ್ರದಾಯಿಕವಾಗಿಯೇ ಇದ್ದವು. ಡಿಸೆಂಬರ್ 8 1929ರಂದು ಪೆರಿಯಾರ್ ಅವರ ಸಮ್ಮುಖದಲ್ಲಿ ಮೊಟ್ಟ ಮೊದಲ ಬಾರಿಗೆ ಆತ್ಮಗೌರವ ಚಳವಳಿಯ ಹೆಸರಾಂತ ಬರಹಗಾರ ಕುಧುಸಿ ಗುರುಸ್ವಾಮಿ ಅವರ ವಿವಾಹವು ಇನ್ನೊಬ್ಬ ಜನಪ್ರಿಯ ನಾಯಕಿ ಕಂಜಧಾಮ್ ಜೊತೆ ನಡೆಯಿತು. ಈ ಕೃತಿಯಲ್ಲಿ ಒಟ್ಟು 20 ಲೇಖನಗಳು ಇವೆ. ಮದುವೆ ಕುರಿತಂತೆ ವೈಚಾರಿಕ ವ್ಯಾಖ್ಯಾನ, ಅದಕ್ಕೆ ಆಗಬೇಕಾದ ಆಧುನಿಕ ಸುಧಾರಣೆಗಳು, ಕಾನೂನಿನ ದೃಷ್ಟಿಯಲ್ಲಿ ಮದುವೆಯ ಸ್ಥಾನಮಾನ, ಶೂದ್ರರ ಬದುಕಿನಲ್ಲಿ ಮದುವೆಯ ಪಾತ್ರ, ಪುರೋಹಿತರಿಂದ ಮದುವೆ ಎನ್ನುವ ಒಪ್ಪಂದಕ್ಕೆ ಆಗಿರುವ ಧಕ್ಕೆ, ಮದುವೆಯನ್ನು ಸುತ್ತಿಕೊಂಡಿರುವ ಜ್ಯೋತಿಷ್ಯ ಮೊದಲಾದ ವೌಢ್ಯ ಇವೆಲ್ಲವನ್ನು ಇಲ್ಲಿರುವ ಲೇಖನಗಳು ಬೇರೆ ಬೇರೆ ರೀತಿಯಲ್ಲಿ ಚರ್ಚಿಸುತ್ತದೆ. ಮಹಿಳಾಶಿಕ್ಷಣ, ಮಕ್ಕಳ ಪೋಷಣೆ, ಸಮಾನ ಹಕ್ಕುಗಳು ಮೊದಲಾದ ವಿಷಯಗಳ ಬಗ್ಗೆಯೂ ಪೆರಿಯಾರ್ ಇಲ್ಲಿ ಬರೆದಿದ್ದಾರೆ. ಎಲ್ಲ ಕಾಲಕ್ಕೂ ಸಲ್ಲುವಂತಹ ಲೇಖನಗಳು ಇವು. ಪೆರಿಯಾರ್ ಎಷ್ಟು ಆಧುನಿಕ ಪ್ರಜ್ಞೆಯನ್ನು ಹೊಂದಿದ್ದರು ಎನ್ನುವುದನ್ನು ಇಲ್ಲಿರುವ ಲೇಖನಗಳು ತಿಳಿಸುತ್ತವೆ.

ಬಿ. ಸುಜ್ಞಾನ ಮೂರ್ತಿಯವರು ಈ ಲೇಖನಗಳನ್ನು ಕನ್ನಡಕ್ಕಿಳಿಸಿದ್ದಾರೆ. ಲಡಾಯಿ ಪ್ರಕಾಶನ ಗದಗ ಇದನ್ನು ಪ್ರಕಟಿಸಿದೆ. ಕೃತಿಯ ಮುಖಬೆಲೆ 70 ರೂ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು. 
 

share
-ಕಾರುಣ್ಯಾ
-ಕಾರುಣ್ಯಾ
Next Story
X