ಡ್ರೈನೇಜ್ ಗುಂಡಿಗೆ ಕಾರ್ಮಿಕರು: ಮನಪಾ ವಿರುದ್ಧ ಸಿಪಿಎಂ ಪ್ರತಿಭಟನೆ
ಮಂಗಳೂರು, ಅ.21: ನಗರದ ಡ್ರೈನೇಜ್ ಗುಂಡಿಗೆ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಿಸಿರುವ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ಧ ಸಿಪಿಎಂ ಮಂಗಳೂರು ನಗರ ಸಮಿತಿ ಇಂದು ಬೆಳಗ್ಗೆ ಪಾಲಿಕೆ ಕಚೇರಿಯೆದುರು ಪ್ರತಿಭಟನೆ ನಡೆಸಿತು.
ಬಂದರು ಹಾಗೂ ಡಾನ್ ಬೋಸ್ಕೊ ಹಾಲ್ ಪ್ರದೇಶದ ಡ್ರೈನೇಜ್ ಗುಂಡಿಗೆ ಕಾರ್ಮಿಕರನ್ನು ಇಳಿಸಿದಂತಹ ಅಮಾನವೀಯ ಕೃತ್ಯ ಎಸಗಿರುವ ಮನಪಾ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪ್ರತಿಭಟನಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿ.ಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ವಾಸುದೇವ ಉಚ್ಚಿಲ್, ಸಂತೋಷ್ ಬಜಾಲ್, ಸುರೇಶ ಬಜಾಲ್, ತಿಮ್ಮಯ್ಯ ಕೊಂಚಾಡಿ, ಎಂ.ದೇವದಾಸ್, ರಘು ಎಕ್ಕಾರ್, ನಿತಿನ್ ಕುತ್ತಾರ್ ಮೊದಲಾದವರು ಭಾಗವಹಿಸಿದ್ದರು.
Next Story