Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್‌ನಲ್ಲಿ ಲಘು ಭೂಕಂಪನ; ಜನರಲ್ಲಿ...

ಹೈದರಾಬಾದ್‌ನಲ್ಲಿ ಲಘು ಭೂಕಂಪನ; ಜನರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ22 Oct 2017 7:52 PM IST
share
ಹೈದರಾಬಾದ್‌ನಲ್ಲಿ ಲಘು ಭೂಕಂಪನ; ಜನರಲ್ಲಿ ಆತಂಕ

ಹೈದರಾಬಾದ್, ಅ.22: ಹೈದರಾಬಾದ್‌ನ ಬೊರಬಂದ ಪ್ರದೇಶದಲ್ಲಿ ಸತತ ಎರಡನೆಯ ದಿನ ಭೂಮಿ ಲಘುವಾಗಿ ಕಂಪಿಸಿದ ಘಟನೆ ನಡೆದಿದ್ದು, ಯಾವುದೇ ಸಾವು-ನೋವು ಅಥವಾ ನಷ್ಟ ಉಂಟಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಶನಿವಾರ ಬೆಳಗ್ಗಿನ ಜಾವ ಮೊದಲ ಬಾರಿಗೆ ಭೂಮಿ ಲಘುವಾಗಿ ಕಂಪಿಸಿದ ಅನುಭವವಾಗಿದೆ. ಬಳಿಕ ದಿನವಿಡೀ ಆಗಿಂದಾಗ್ಗೆ ಭೂಮಿ ಕಂಪಿಸಿದೆ ಎಂದು ಬೊರಬಂದ ಪ್ರದೇಶದ ಇಂದಿರಾನಗರ, ಸಾಯಿಬಾಬಾ ನಗರ, ಅಂಬೇಡ್ಕರ್ ನಗರ, ಭವಾನಿಶಂಕರ ನಗರ ಹಾಗೂ ಹಬೀಬ್ ಫಾತಿಮಾ ನಗರ ಎರಡನೇ ಮತ್ತು ಮೂರನೇ ಹಂತದ ನಿವಾಸಿಗಳು ತಿಳಿಸಿದ್ದಾರೆ.

ಭೂಮಿ ಕಂಪಿಸಿದ ಸಂದರ್ಭ ಭೂಮಿಯೊಳಗಡೆ ಕೇಳಿಸಿದ ಸದ್ದಿನಿಂದ ಭೀತರಾದ ಹಲವರು ಭೂಕಂಪದ ಭಯದಿಂದ ಮನೆಯಿಂದ ಹೊರಗೆ ಓಡಿಬಂದರು. ಆದರೆ ಯಾವುದೇ ಕಟ್ಟಡ ಅಥವಾ ಮನೆಗಳಿಗೆ ಹಾನಿಯಾಗಿಲ್ಲ. ಭೂಮಿಯ ಕಂಪಿಸುವಿಕೆಯನ್ನು ದಾಖಲಿಸಿಕೊಳ್ಳಲು ‘ನ್ಯಾಷನಲ್ ಜಿಯೊಫಿಸಿಕಲ್ ಇನ್‌ಸ್ಟಿಟ್ಯೂಟ್’ (ಎನ್‌ಜಿಆರ್‌ಐ) ಈ ಪ್ರದೇಶದಲ್ಲಿ ಎರಡು ಕೇಂದ್ರಗಳನ್ನು ಶನಿವಾರ ರಾತ್ರಿ ಸ್ಥಾಪಿಸಿದ ಬಳಿಕ ನಾಲ್ಕು ಬಾರಿ ಲಘುಕಂಪನ ದಾಖಲಾಗಿದೆ.

 ಭೂಮಿಯ ಅದುರುವಿಕೆಯಿಂದ ಸ್ಥಳದಲ್ಲಿ ಭಾರೀ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ತುರ್ತು ಸ್ಥಿತಿ ನಿಭಾಯಿಸಲು ತುರ್ತು ನೆರವು ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಆದರೆ ಇದುವರೆಗೆ ಅಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಯೂಸುಫ್ಗಡದ ಜಿಲ್ಲಾಧಿಕಾರಿ ಎ.ರಮೇಶ್ ತಿಳಿಸಿದ್ದಾರೆ. ಇದು ಸಾಧಾರಣ ಕಂಪನವಾಗಿದ್ದು ಆತಂಕ ಪಡಬೇಕಿಲ್ಲ. ಈ ಪ್ರದೇಶದಲ್ಲಿ ಭೂಮಿಯೊಳಗಡೆ ಕೇಂದ್ರೀಕೃತಗೊಂಡಿರುವ ಗ್ರಾನೈಟ್ ಶಿಲೆಗಳಿಂದ ಉಂಟಾದ ಒತ್ತಡ ಇಲ್ಲಿ ಕೇಳಿಬರುವ ಭಾರೀ ಶಬ್ದಕ್ಕೆ ಕಾರಣವಾಗಿದೆ ಎಂದು ಎನ್‌ಜಿಆರ್‌ಐ ಮುಖ್ಯ ವಿಜ್ಞಾನಿ ಡಾ. ಶ್ರೀನಾಗೇಶ್ ದವಲೂರಿ ತಿಳಿಸಿದ್ದಾರೆ. ಕಳೆದ ವರ್ಷವೂ ಇದೇ ಪ್ರದೇಶದಲ್ಲಿ ಅಕ್ಟೋಬರ್ ತಿಂಗಳಲ್ಲಿ ಲಘುಭೂಕಂಪನದ ಅನುಭವವಾಗಿತ್ತು.

ಈ ಪ್ರದೇಶದಲ್ಲಿ ಈ ವರ್ಷ ಭಾರೀ ಮಳೆಯಾಗಿದ್ದು , ಮಳೆ ನೀರು ಭೂಮಿಯೊಳಗೆ ಇಂಗಿ ಕಲ್ಲಿನೆಡೆಗೆ ಸೇರಿಕೊಂಡು ಲಘು ಭೂಕಂಪನದ ಅನುಭವಕ್ಕೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X