Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರದ ಪ್ರವಾಸಿ ತಾಣ ವೀಕ್ಷಿಸಲು...

ಬೆಂಗಳೂರು ನಗರದ ಪ್ರವಾಸಿ ತಾಣ ವೀಕ್ಷಿಸಲು ಬಾಡಿಗೆ ಸೈಕಲ್ ವ್ಯವಸ್ಥೆ !

ವಾರ್ತಾಭಾರತಿವಾರ್ತಾಭಾರತಿ22 Oct 2017 8:01 PM IST
share

ಬೆಂಗಳೂರು, ಅ.22: ಬೆಂಗಳೂರು ನಗರದ ಬಹು ಆಕರ್ಷಿತ ಉದ್ಯಾನವನ ಕಬ್ಬನ್‌ ಪಾರ್ಕ್ ಸುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಇರುವ ಪ್ರವಾಸಿ ತಾಣಗಳನ್ನು ಪ್ರವಾಸಿಗರಿಗೆ ಪರಿಚಯಿಸುವ ಸಲುವಾಗಿ ಬಾಡಿಗೆ ಸೈಕಲ್ ಯೋಜನೆಯನ್ನು ಪ್ರಾರಂಭಿಸಲು ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಮುಂದಾಗಿವೆ.

ಉದ್ಯಾನದ ಸುತ್ತಮುತ್ತಲಿನ ಪ್ರಾರಂಪರಿಕ ಹಾಗೂ ಐತಿಹಾಸಿಕ ಕಟ್ಟಡಗಳ ವಿವರವನ್ನು ನೀಡಿ, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಈ ಯೋಜನೆಯನ್ನು ಪರಿಚಯಿಸುತ್ತಿದ್ದು, ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ಎಂಬ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಬಾಡಿಗೆಗೆ ಸೈಕಲ್ ಯೋಜನೆ ಜಾರಿಗೆ ಮುಂದಾಗಿದ್ದು, ಈ ತಿಂಗಳ ಕೊನೆ ವಾರದಲ್ಲಿ ಚಾಲನೆ ಸಿಗಲಿದೆ.

ಕಬ್ಬನ್‌ ಪಾರ್ಕ್ ಸುತ್ತಲು ಐತಿಹಾಸಿಕ ಕಟ್ಟಡಗಳು ಪ್ರವಾಸಿಗರಿಗೆ ಸೈಕಲ್ ಸವಾರಿ ನಡೆಸುವ ಮೂಲಕ ಪರಚಯಿಸಬೇಕು ಎಂಬ ಉದ್ದೇಶದಿಂದ ಕಬ್ಬನ್ ಪಾರ್ಕ್‌ನಲ್ಲಿ ಬಾಡಿಗೆಗೆ ಸೈಕಲ್ ನೀಡುವ ಕಾರ್ಯಕ್ರಮ ಪ್ರಾರಂಭಿಸಬೇಕು ಎಂದು ಬೆಂಗಳೂರು ಪ್ರವಾಸೋದ್ಯಮ ಅಭಿವೃದ್ಧಿ ಸಲಹಾ ಸಮಿತಿ ಹಲವು ಬಾರಿ ಸಲಹೆಗಳನ್ನು ನೀಡಿದೆ. ಈ ಸಲಹೆಗಳನ್ನು ಆಧರಿಸಿ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಬ್ಬನ್‌ ಪಾರ್ಕ್ ಸುತ್ತಮುತ್ತ ಸುಮಾರು 10ಕ್ಕೂ ಹೆಚ್ಚು ಪುರಾತನ ಕಟ್ಟಡಗಳು ಮತ್ತು ಸ್ಮಾರಕಗಳಿವೆ. ಜೊತೆಗೆ ಸುಮಾರು ಎಂಟು ವಿವಿಧ ಮ್ಯೂಸಿಯಂಗಳಿವೆ. ಬಾಡಿಗೆ ಸೈಕಲ್‌ನಲ್ಲಿ ಇವುಗಳನ್ನು ವೀಕ್ಷಿಸಬಹುದಾಗಿದೆ. ಈ ಕಟ್ಟಡಗಳ ಬಗ್ಗೆ ಮಾಹಿತಿ, ವಿವರ ಪಡೆಯುವ ಸಂಬಂಧ ನೂತನ ಮೊಬೈಲ್ ಆ್ಯಪ್‌ ಪರಿಚಿಸಲಾಗಿದ್ದು, ಅದರ ಮೂಲಕ ಕಟ್ಟಡಗಳ ಕುರಿತು ಎಲ್ಲಾ ವಿವರಗಳನ್ನು ಒದಗಿಸಲಾಗುವುದು. ಅಲ್ಲದೆ, ಈ ಆ್ಯಪ್‌ ನಲ್ಲಿ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ವಿವರವನ್ನು ಧ್ವನಿ ಸುರುಳಿಯ ಮೂಲಕ ವಿವರಣೆ ಒದಗಿಸಲಾಗುವುದು ಎಂದು ವಿವರಿಸಿದ್ದಾರೆ.

ಕಬ್ಬನ್ ಪಾರ್ಕ್‌ನ ನಾಲ್ಕು ದ್ವಾರಗಳಲ್ಲಿ ಸೈಕಲ್ ಸ್ಟಾಂಡ್‌ಗಳನ್ನು ಪ್ರಾರಂಭಿಸುತ್ತಿದ್ದು, ಪ್ರತಿ ದ್ವಾರದಲ್ಲಿಯೂ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ 25ರಂತೆ ಒಟ್ಟು 100 ಸೈಕಲ್‌ಗಳನ್ನು ಇಡಲಾಗುವುದು. ಸರಕಾರದಿಂದ ನೀಡಿರುವ ಯಾವುದಾದರೂ ಗುರುತಿನ ಚೀಟಿ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ಪ್ರವಾಸಿಗರಿಗೆ ಸೈಕಲ್‌ಗಳನ್ನು ಬಾಡಿಗೆಗೆ ನೀಡಲಾಗುವುದು. ಅಲ್ಲದೆ, ಸಣ್ಣ ಮಕ್ಕಳಿಗಾಗಿ ಪ್ರತ್ಯೇಕ ಸೈಕಲ್‌ಗಳನ್ನು ಒದಗಿಸಲಾಗುವುದು ಎಂದು ನಮ್ಮ ನಿಮ್ಮ ಸೈಕ್ ಫೌಂಡೇಶನ್ ಪ್ರತಿನಿಧಿ ವಿವರಿಸಿದ್ದಾರೆ.

ಬೆಂಗಳೂರು ಅರಮನೆ, ಬೆಂಗಳೂರು ಕೋಟೆ, ಟಿಪ್ಪುಸುಲ್ತಾನ್ ಬೇಸಿಗೆ ಅರಮನೆ, ವೆಂಕಟಪ್ಪ ಆರ್ಟ್ ಗ್ಯಾಲರಿ, ವಿಧಾನಸೌಧ, ಹೈಕೋರ್ಟ್, ಟ್ರಿನಿಟಿ ಚರ್ಚ್, ಸೇಂಟ್ ಪ್ರಾಟ್ರಿಕ್ ಚರ್ಚ್, ಹಡ್ಸನ್ ಚರ್ಚ್, ವಿಶ್ವೇಶ್ವರಯ್ಯ ಮ್ಯೂಸಿಯಂ ಸೇರಿ ಇನ್ನು ಹಲವು ಆಕರ್ಷಕ ಕಟ್ಟಡಗಳಿದ್ದು, ಅವುಗಳ ವೀಕ್ಷಣೆಗೆ ಸೈಕಲ್ ಸಹಕಾರಿಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X