Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದೇಶಕ್ಕೆ ಯುದ್ಧ ಸ್ಮರಣಿಕೆಗಳ...

ಬಾಂಗ್ಲಾದೇಶಕ್ಕೆ ಯುದ್ಧ ಸ್ಮರಣಿಕೆಗಳ ಉಡುಗೊರೆ ನೀಡಿದ ಭಾರತ

ವಾರ್ತಾಭಾರತಿವಾರ್ತಾಭಾರತಿ23 Oct 2017 6:48 PM IST
share
ಬಾಂಗ್ಲಾದೇಶಕ್ಕೆ ಯುದ್ಧ ಸ್ಮರಣಿಕೆಗಳ ಉಡುಗೊರೆ ನೀಡಿದ ಭಾರತ

ಢಾಕಾ,ಅ.23: ಭಾರತವು ರವಿವಾರ 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸ್ಮರಣಿಕೆಗಳನ್ನು ಬಾಂಗ್ಲಾದೇಶಕ್ಕೆ ಉಡುಗೊರೆಯಾಗಿ ನೀಡಿದೆ. 1971ರಲ್ಲಿ ಪಾಕ್ ಸೇನೆಯನ್ನು ಓಡಿಸಲು ಉಭಯ ದೇಶಗಳು ಒಂದಾಗಿ ಹೋರಾಡಿದ್ದು, ಸುಮಾರು ಒಂದು ಕೋಟಿ ಬಾಂಗ್ಲಾದೇಶಿಗಳು ನಿರಾಶ್ರಿತರಾಗಿ ಭಾರತದಲ್ಲಿ ಆಶ್ರಯ ಪಡೆದು ಕೊಂಡಿದ್ದರು.

 ಇಲ್ಲಿಗೆ ಭೇಟಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗ ಹಸ್ತಾಂತರಿಸಿರುವ ಸ್ಮರಣಿಕೆಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶಗಳ ಜಂಟಿ ಪಡೆಗಳು ಬಳಸಿದ್ದ ಮಿಲಿಟರಿ ಉಪಕರಣಗಳು, ಐತಿಹಾಸಿಕ ಛಾಯಾಚಿತ್ರಗಳು, ನಕಾಶೆಗಳು, ವೃತ್ತಪತ್ರಿಕೆಗಳ ತುಣುಕುಗಳು, ಸಾಕ್ಷಚಿತ್ರಗಳು ಸೇರಿದಂತೆ ಭಾರೀ ಸಂಖ್ಯೆಯ ಹಳೆಯ ಕಲಾಕೃತಿಗಳು ಮತ್ತು ದಾಖಲೆಗಳು ಸೇರಿವೆ.

ಈ ಸ್ಮರಣಿಕೆಗಳನ್ನು ಶಾಹಬಾಗ್‌ನ ಬಾಂಗ್ಲಾದೇಶ ರಾಷ್ಟ್ರೀಯ ವಸ್ತು ಸಂಗ್ರಹಾಲಯ ಮತ್ತು ಢಾಕಾದ ಸ್ವಾತಂತ್ರ ವಸ್ತು ಸಂಗ್ರಹಾಲಯಲ್ಲಿ ಪ್ರದರ್ಶನಕ್ಕಿಡಲು ಉದ್ದೇಶಿಸಲಾಗಿದೆ.

ಸ್ವರಾಜ್ ಅವರು ಹಸೀನಾರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಚರ್ಚೆಗಳನ್ನು ನಡೆಸಿದರಲ್ಲದೆ ರವಿವಾರದ ಜಂಟಿ ಸಲಹಾ ಸಮಿತಿಯ ಸಭೆಯ ವಿವರಗಳನ್ನು ನೀಡಿದರು. ಭದ್ರತೆ, ವ್ಯಾಪಾರ ಮತ್ತು ಸಂಪರ್ಕ, ಅಭಿವೃದ್ಧಿ ಸಹಕಾರ, ವಿದ್ಯುತ್, ಶಕ್ತಿ ಮತ್ತು ಉಪ ಪ್ರಾದೇಶಿಕ ಸಹಕಾರ ಸೇರಿದಂತೆ ಹಲವಾರು ವಿಷಯಗಳನ್ನು ಉಭಯ ನಾಯಕರು ಚರ್ಚಿಸಿದರು.

ಸದ್ಯದ ರೊಹಿಂಗ್ಯಾ ಬಿಕ್ಕಟ್ಟು ಕುರಿತಂತೆ ಸ್ವರಾಜ್ ಅವರು ಭಾರತದ ನಿರಂತರ ಬೆಂಬಲವನ್ನು ಪುನರುಚ್ಚರಿಸಿದರು. ‘ಆಪರೇಷನ್ ಇನ್ಸಾನಿಯತ್’ನಡಿ ಭಾರತವು ಸುಮಾರು ಐದು ಲಕ್ಷ ನಿರಾಶ್ರಿತರಿಗೆ 1000 ಟನ್ ಪರಿಹಾರ ಸಾಮಗ್ರಿಗಳನ್ನು ಒದಗಿಸಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X