Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟಿಪ್ಪು ಜಯಂತಿ: ಮುಖ್ಯಮಂತ್ರಿಗೆ ಸಂಸದ...

ಟಿಪ್ಪು ಜಯಂತಿ: ಮುಖ್ಯಮಂತ್ರಿಗೆ ಸಂಸದ ಪ್ರತಾಪ್ ಸಿಂಹ ಸವಾಲು

ವಾರ್ತಾಭಾರತಿವಾರ್ತಾಭಾರತಿ23 Oct 2017 7:20 PM IST
share
ಟಿಪ್ಪು ಜಯಂತಿ: ಮುಖ್ಯಮಂತ್ರಿಗೆ ಸಂಸದ ಪ್ರತಾಪ್ ಸಿಂಹ ಸವಾಲು

ಬೆಂಗಳೂರು, ಅ.23: ವಿರೋಧವನ್ನು ಲೆಕ್ಕಿಸದೆ ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರು ಹಾಕಿದರೆ, ನಾವೂ ಶಿಷ್ಟಾಚಾರವನ್ನು ಪಾಲಿಸಿ ಆಚರಣೆಯಲ್ಲಿ ಭಾಗಿಯಾಗುತ್ತೇವೆ. ಈ ಕಾರ್ಯಕ್ರಮದಲ್ಲಿ ನಮ್ಮ ಕಾರ್ಯಕರ್ತರಿಂದ ಎದುರಾಗುವ ವಿರೋಧ, ಪ್ರತಿಕಾರವನ್ನು ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧರಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.

ಸೋಮವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಟಿಪ್ಪುಜಯಂತಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಟಿಪ್ಪು ಸುಲ್ತಾನ್ ಒಬ್ಬ ಮತಾಂಧ, ಸಾವಿರಾರು ಹಿಂದೂ ದೇವಾಲಯ, ಚರ್ಚ್‌ಗಳನ್ನು ಧ್ವಂಸ ಮಾಡಿ ಲಕ್ಷಾಂತರ ಹಿಂದೂ ಕ್ರೈಸ್ತರನ್ನು ಕೊಲೆ ಮಾಡಿದ ಕ್ರೂರಿ. ಕನ್ನಡ ಭಾಷೆಯ ಬದಲಾಗಿ ಪರ್ಶಿಯನ್ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಎಂದು ಎಡಪಂಥಿಯರೇ ಬರೆದಿರುವ ಬಹುತೇಕ ಕೃತಿಗಳಲ್ಲಿ ಉಲ್ಲೇಖಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿಗೆ ಯಾವುದೇ ಕೊಡುಗೆ ನೀಡದವನ ಜಯಂತಿಯನ್ನು ಆಚರಣೆ ಮಾಡುವುದರ ಔಚಿತ್ಯವೇನು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್‌ನಲ್ಲಿ ಯಾವ ಆದರ್ಶ ಕಂಡು ಜಯಂತಿ ಆಚರಣೆ ಮಾಡಲು ಹೊರಟಿದ್ದಾರೆ ಗೊತ್ತಾಗುತ್ತಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ ಮಾತ್ರಕ್ಕೆ ಸ್ವಾತಂತ್ರ ಹೋರಾಟಗಾರ ಆಗಲ್ಲ. ಒನಕೆ ಓಬವ್ವಳನ್ನು ಚೂರಿ ಇರಿದು ಕೊಲೆ ಮಾಡಿದವನ, ಮದಕರಿ ನಾಯಕನಿಗೆ ವಿಷ ಉಣಿಸಿ ಕೊಲೆ ಮಾಡಿದವನ, ಮೈಸೂರಿನ ಯದು ವಂಶ ನಿರ್ಣಾಮಕ್ಕೆ ಕತ್ತಿ ಮಸಿದವನ ಜಯಂತಿ ಆಚರಿಸಬೇಕೇ ಎಂಬ ಪ್ರಶ್ನೆಗೆ ಸಿಎಂ ಉತ್ತರಿಸಲಿ ಎಂದು ಆಗ್ರಹಿಸಿದರು.

ಟಿಪ್ಪು ಫುಕ್ಕಲ: ಆಂಗ್ಲೋ ಮೈಸೂರು ಯುದ್ಧದ ವೇಳೆ ಬ್ರಿಟಿಷರನ್ನು ಸಮರ್ಥವಾಗಿ ಎದುರಿಸದೇ ಹತನಾದ. ಹುಲಿಯೊಂದಿಗೆ ಹೋರಾಟ ನಡೆಸುವಷ್ಟು ವೀರನಲ್ಲ. ಅವನೊಬ್ಬ ಫುಕ್ಕಲ. ವೀರನೆಂದು ಬಿಂಬಿಸಿಕೊಳ್ಳಲು ನಕಲಿ ಚಿತ್ರ ಸಿದ್ಧಪಡಿಸಿದ್ದ. ಟಿಪ್ಪು ಆಧುನಿಕ ಯುದ್ಧೋಪಕರಣ ಮಿಸೈಲ್‌ಗಳನ್ನು ಹೊಂದಿದ್ದ ಎನ್ನುವುದು ಬರಿ ಸುಳ್ಳು ಎಂದು ಹೇಳಿದರು.

ಜನರ ವಿರೋಧವನ್ನು ಲೆಕ್ಕಿಸದೆ ಹಠಮಾರಿ ಧೋರಣೆಗೆ ಜೋತುಬಿದ್ದು ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂಗಳನ್ನು ವ್ಯವಸ್ಥಿತವಾಗಿ ಕೊಲ್ಲಲು ಪ್ರಚೋದನೆ ನೀಡುತ್ತಿದಾರೆ ಎಂದು ಸಮಿತಿಯ ಸಂಚಾಲಕ ಅದ್ದಂಡ ಕಾರ್ಯಪ್ಪ ಕಿಡಿಕಾರಿದರು.

ಎರಡು ವರ್ಷದಲ್ಲಿ ಒಟ್ಟು 13 ಮಂದಿ ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿದೆ. ಟಿಪ್ಪು ಜಯಂತಿ ಆಚರಣೆಯ ಮೂಲಕ ಕಳೆದ ಎರಡು ವರ್ಷಗಳಿಂದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಭಯೋತ್ಪಾದನೆ ಹೆಚ್ಚಾಗಿದೆ ಎಂದು ಭೀತಿ ವ್ಯಕ್ತಪಡಿಸಿದರು.

ಮತಾಂತರಕ್ಕೆ ಒಪ್ಪದ ಸಾವಿರಾರು ಹಿಂದೂ, ಕ್ರಿಶ್ಚಿಯನ್, ಕೊಡವ ಕುಟುಂಬಗಳನ್ನು ನಾಶ ಮಾಡಿದ ಟಿಪ್ಪು ಸುಲ್ತಾನ್ ಅನ್ಯಾಯ, ಕೊಲೆಗಳು, ಕ್ರೂರತನವನ್ನು ಮುಚ್ಚಿಡಲು ಢೋಂಗಿ ಜಾತ್ಯತೀತವಾದಿಗಳು, ಪ್ರಗತಿಪರರು ಪಯತ್ನಿಸುತ್ತಿದ್ದಾರೆ ಎಂದು ಕಾರ್ಯಪ್ಪ ಆರೋಪಿಸಿದರು.

ಗಲ್ಲಿಗೇರಿಸಬೇಕು 

ವಿವಾದಿತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ವಿರೋಧವನ್ನು ಲೆಕ್ಕಿಸದೇ ಜಯಂತಿ ಆಚರಣೆ ಮಾಡುವವರನ್ನು ಗಲ್ಲಿಗೇರಿಸಬೇಕು.

ಅದ್ದಂಡ ಕಾರ್ಯಪ್ಪ, ಸಮಿತಿ ಸಂಚಾಲಕ

ಮುಸಲ್ಮಾನರು ಮೂರ್ತಿ ಆರಾಧಕರಲ್ಲ. ಅವರು ಎಂದಿಗೂ ಮನೆಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುವುದಿಲ್ಲ. ಸರಕಾರ ಆಚರಿಸುವ ಟಿಪ್ಪು ಜಯಂತಿಗೆ ಹೋಗುವವರು ನಿಜವಾದ ಮುಸ್ಲಿಮರಲ್ಲ.

-ಪ್ರತಾಪ್ ಸಿಂಹ, ಸಂಸದ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X